24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

ಮಡಂತ್ಯಾರು: ಜ್ಞಾನಕ್ಕಿಂತ ಮಿಗಿಲಾದದ್ದು ಯಾವುದು ಇಲ್ಲ. ವಿದ್ಯೆಯನ್ನು ಸಂಪಾದಿಸುವುದೆಂದರೆ ಅದೊಂದು ತಪಸ್ಸು ,ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮುಖ್ಯ.ಶಿಸ್ತಿನಿಂದ ಸಾಧನೆಗೈಲು ಸಾಧ್ಯ. ವಿದ್ಯಾರ್ಥಿಗಳು ತಾವು ವಿದ್ಯಾರ್ಜನೆಗೈಯುತ್ತಿರುವ ಸಂಸ್ಥೆಯನ್ನು ತಮ್ಮ ಮನೆಯಂತೆ ಪ್ರೀತಿ ಕಾಳಜಿಯಿಂದ ಗೌರವಿಸಬೇಕು. ವಿದ್ಯಾರ್ಥಿ ಜೀವನದಲ್ಲಿ ದೊರಕುವ ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡಾಗ ಸರ್ವತೋಮುಖ ಬೆಳವಣಿಗೆ ಹೊಂದಬಹುದೆಂದು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ|ಜೊಸೆಫ್ ಎನ್.ಎಂ ಹೇಳಿದರು.

ಅವರು ಇತ್ತೀಚೆಗೆ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ಪ್ರಸ್ತುತ ವರ್ಷದ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು.

ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯ ನೂತನ ಸಂಚಾಲಕರಾದ ವಂ|ಡಾ|ಸ್ಟ್ಯಾನಿ ಗೋವಿಯಸ್ ಅಧ್ಯಕ್ಷತೆವಹಿಸಿ “ನಿಷ್ಕಾಮ ಕರ್ಮದಿಂದ ಮಾಡಿದ ಸೇವೆ ಭಗವಂತನಿಗೆ ಪ್ರಿಯವಾಗುವುದು. ಸ್ವಾರ್ಥ ರಹಿತ ಸೇವೆಯನ್ನು ಮಾಡಿದಾಗ ಜೀವನದಲ್ಲಿ ಸಂತೋಷವನ್ನು ಕಾಣಲು ಸಾಧ್ಯ “ಎಂದು ಅವರು ಹೇಳಿದರು.

ಕಾಲೇಜಿನ ಪ್ರಾಚಾರ್ಯರಾದ ವಂ|ಜೆರೊಮ್ ಡಿಸೋಜಾ ವಿದ್ಯಾರ್ಥಿ ನಾಯಕರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ವಿದ್ಯಾರ್ಥಿ ಸಂಘದ ನಿರ್ದೇಶಕ ವಿನ್ಸೆಂಟ್ ರೊಡ್ರಿಗಸ್ ಸ್ವಾಗತಿಸಿ, ಉಪನಿರ್ದೇಶಕಿ ಪ್ರಿಯಾ ಜ್ಯೋತಿ ಕುಟಿನ್ಹಾ ವಂದಿಸಿ, ವಿದ್ಯಾರ್ಥಿ ನಾಯಕ ಮಹಮ್ಮದ್ ಇಸಾಕ್ ಅನಿಸಿಕೆ ಹಂಚಿಕೊಂಡರು.

ವಿದ್ಯಾರ್ಥಿಗಳಾದ ಅಫ್ರೀನ್ ತಾಜ್ ಹಾಗೂ ರಕ್ಷಣ್ ಅಡಪ ಕಾರ್ಯಕ್ರಮ ನಿರೂಪಿಸಿದರು.ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Related posts

ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆ ಇದರ ವತಿಯಿಂದ ಗಣರಾಜ್ಯೋತ್ಸವ ಆಚರಣೆ ಹಾಗೂ ವಾರ್ಷಿಕ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ದಿ.ಕೆ. ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ ಆಚರಣೆ

Suddi Udaya

ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ, ಹಳ್ಳಿಂಗೇರಿ, ಸೌತಡ್ಕ ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಕೊಡೆ ಹಾಗೂ ಹಣ್ಣು ಹಂಪಲು ಗಿಡ ವಿತರಣೆ

Suddi Udaya

ತಾಲೂಕಿನಲ್ಲಿ ಗುಡುಗು ಸಹಿತ ಗಾಳಿ ಮಳೆ ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ-ರಸ್ತೆ ಸಂಚಾರ ಅಸ್ತವ್ಯಸ್ತ

Suddi Udaya

ಧರ್ಮಸ್ಥಳ: ಇಲ್ಲಿಯ ಜೋಡುಸ್ಥಾನದ ಬಳಿ ಗಾಳಿ ಮಳೆಗೆ ಬಿದ್ದ ಮರಗಳು ಗ್ರಾಮಸ್ಥರ ಸಹಕಾರದಿಂದ ತೆರವು ಕಾರ್ಯ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ನ ಮಕ್ಕಳ ಗ್ರಾಮ ಸಭೆ

Suddi Udaya
error: Content is protected !!