September 6, 2026
ಧಾರ್ಮಿಕ

ಜೈನ ಮುನಿಯ ವಿಚಾರದಲ್ಲ ರಾಜಕಾರಣಿಗಳ ಬುದ್ಧಿಜೀವಿಗಳ ಪ್ರಗತಿಪರರ ಜಾತ್ಯಾತೀತರ ತಾರತಮ್ಯ

ಬೆಳ್ತಂಗಡಿ: ಬೆಳಗಾವಿಯ ಚಿಕ್ಕೋಡಿಯಲ್ಲಿ ಮುನಿಯೊಬ್ಬರ ಬರ್ಬರ ಹತ್ಯೆ ಮಾಡಲಾಗಿದೆ. ಇದರಿಂದ ಜೈನ ಸಮಾಜ ಆಘಾತಕ್ಕೆ ಒಳಗಾಗಿದೆ. ಮೈಕ್ರೋ ಸಂಖ್ಯೆಯಲ್ಲಿರುವ ಜೈನರಿಗೆ ಭಾರತದಲ್ಲಿಯೇ ಅದೂ ಮೂಲನಿವಾಸಿಗಳಾದ ಜೈನರಿಗೆ ಭಾರತದಲ್ಲಿಯೇ ಅಭದ್ರತೆಯ ವಾತಾವರಣ ಉಂಟಾಗಿರುವುದು ವಿಷಾದನೀಯ.
‌ಜೈನ ಮುನಿಯೊಬ್ಬರ ಕ್ಷುಲ್ಲಕ ಕಾರಣಕ್ಕಾಗಿ ಹತ್ಯೆ ಮಾಡಲಾಗಿದೆ.‌ ಸಹಾಯ ಪಡೆದುಕೊಂಡವರೇ ಕೃತಘ್ನರಾಗಿ ಹತ್ಯೆಗೈದಿದ್ದಾರೆ. ಆದರೆ ರಾಜಕಾರಣಿಗಳು, ರಾಜಕೀಯ ಪಕ್ಷಗಳು, ಬುದ್ಧಿ ಜೀವಿಗಳು, ಪ್ರಗತಿಪರರು, ಜಾತ್ಯಾತೀತರು ದಿವ್ಯ ಮೌನವಹಿಸಿದ್ದಾರೆ. ಬೆರಳಣಿಕೆಯ ಮಂದಿ ಪ್ರತಿಕ್ರಿಯೆ ನೀಡಿದ್ದಾರೆ.
ಇದೇ ಘಟನೆ ಬೇರೆ ಧರ್ಮದ್ದಾಗಿದ್ದರೆ ಇಡೀ ರಾಜ್ಯದಲ್ಲೇ ದಂಗೆಯಾಗುತ್ತಿತ್ತು. ಆದರೆ ಜೈನರು ಅಹಿಂಸಾವಾದಿಗಳು ಹಾಗೂ ಯಾವುದೇ ರಾಜಕೀಯ ಬೆಂಬಲ ಇಲ್ಲದವರು. ಬೇರೆಯವರ ಒಂದು ಕೂದಲು ಅಲುಗಾಡಿದರು ಹಾರಾಡುವ ಚೀರಾಡುವ ಮಂದಿಗಳು ಎಲ್ಲಿ ಹೋದರು ..? ಹಣದಾಸೆಗೆ , ಸ್ವಹಿತಾಸಕ್ತಿಗಾಗಿ ಬೊಬ್ಬಿರಿಯುವ ಈ ಪಡೆಗಳು ಈಗ ನಾಲಿಗೆ ಬಿದ್ದವರಂತೆ ಬಿದ್ದುಕೊಂಡಿದ್ದಾರೆ. ಸಣ್ಣಸಣ್ಣ ಕಾರಣಗಳಿಗೂ ರಾಜಾರೋಷವಾಗಿ ಬೊಬ್ಬಿಡುವ ಮಂದಿಗಳು ಈಗ ಯಾವ ರೀತಿ ಲಾಭ ಪಡೆದುಕೊಳ್ಳಬಹುದು ಎಂದು ಕನಸು ಕಾಣುತ್ತಿವೆ.

ಈಗ ಜೈನರಿಗೆ ಭದ್ರತೆ, ರಕ್ಷಣೆ ಒದಗಿಸುವ ಜೊತೆಗೆ, ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರಗಳೆರಡು ಜೈನರಿಗೆ ಸಾಮಾಜಿಕ ನ್ಯಾಯವನ್ನು ಒದಗಿಸಬೇಕಾದದ್ದು ಕರ್ತವ್ಯ. ನಿಮ್ಮಗಳ ಓಟುಬ್ಯಾಂಕನ್ನು ಬದಿಗಿರಿಸಿ ಸಾಮಾಜಿಕ ನ್ಯಾಯವನ್ನು ಜೈನರಿಗೆ ನೀಡಬೇಕಾದದ್ದು ನಿಮ್ಮಗಳ ಕರ್ತವ್ಯವಾಗಿದೆ. ಕೊಲೆಪಾತಕರಲ್ಲೂ ಜಾತಿಯನ್ನು ನೋಡದೇ ಕಾನೂನು ಪ್ರಕಾರ ಶಿಕ್ಷೆಯನ್ನು ಕೊಡಿ. ಜೈನರಿಗೆ ರಕ್ಷಣೆಯನ್ನು ನೀಡಿ. ನಿಷ್ಪಕ್ಷಪಾತವಾಗಿ ಜೈನರಿಗೆ ನ್ಯಾಯವನ್ನು ದೊರಕಿಸಿಕೊಡಿ.

  • ನಿರಂಜನ್ ಜೈನ್ ಕುದ್ಯಾಡಿ

Related posts

ಬಳಂಜ ಶಾಲಾ ಶಿಕ್ಷಣ ಚಟುವಟಿಕೆಗಳಿಗಾಗಿ,ಯಕ್ಷಪ್ರಿಯ ಸಮಿತಿಯಿಂದ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಯಕ್ಷಗಾನ “ನಾಗಾರತಿ”:ಅರುವ ಕೊರಗಪ್ಪ ಶೆಟ್ಟಿ,ಲಲಿತಾ ಟೀಚರ್,ಉಸ್ಮಾನ್ ಕೆ ಅವರಿಗೆ ಸನ್ಮಾನ,ವಿವಿಧ ಕ್ಷೇತ್ರದ ಸಾಧಕರಿಗೆ ಗೌರವಾರ್ಪಣೆ:ಸಾವಿರಾರು ಕಲಾಭಿಮಾನಿಗಳಿಂದ ಯಕ್ಷಗಾನ ವಿಕ್ಷಣೆ,ಅಚ್ಚುಕಟ್ಟಾದ ವ್ಯವಸ್ಥೆ,ಸಾರ್ವಜನಿಕ ಅನ್ನಸಂತರ್ಪಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಇ ಹುಂಡಿ ಉದ್ಘಾಟನೆ

Suddi Udaya

ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನ ನೂತನ ಮೂರ್ತಿ ಮೆರವಣಿಗೆ,ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರೆವಣಿಗೆ- ತೋರಣ ಮುಹೂರ್ತ, ಭಜನಾ ಕಾರ್ಯಕ್ರಮಕ್ಕೆ ಚಾಲನೆ-ಸಹಸ್ರಾರು ಭಕ್ತರು ಭಾಗಿ

Suddi Udaya

ಬೆಳ್ತಂಗಡಿಯಲ್ಲಿ ಲಯನ್ಸ್ ಯಕ್ಷೋತ್ಸವ: ಧರ್ಮಸ್ಥಳ ಮೇಳದ ಹಿರಿಯ ಕಲಾವಿದರು ಮತ್ತು ಸಿಬ್ಬಂದಿಗಳಿಗೆ ಗೌರವ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಿಂದ ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಿಯವರೆಗೆ ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ

Suddi Udaya

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!