25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ

ತಣ್ಣೀರುಪಂತ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಜು. 9ರಂದು ಬೆಳ್ತಂಗಡಿ ತಾಲೂಕಿನ ಪುರುಷರ ಮಜಲು ಪರಿಸರದಲ್ಲಿ ತಣ್ಣೀರುಪಂಥ ಮೀಸಲು ಅರಣ್ಯ ಪ್ರದೇಶದಲ್ಲಿ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ ನಡೆಯಿತು.

ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದ್ಘಾಟಿಸಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಎಂಎಲ್ಸಿ ಪ್ರತಾಪಸಿಂಹ ನಾಯಕ್ ಭಾಗವಹಿಸಿದ್ದರು.ಮಂಗಳೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಡಾ. ಕರಿಕಾಲನ್ ಮತ್ತು ಉಪರಣ್ಯ ಸಂರಕ್ಷಣಾಧಿಕಾರಿ ಡಾ. ದಿನೇಶ್ ಕುಮಾರ್, ವೈ.ಕೆ. ಸಸಿಗಳನ್ನು ವಿತರಿಸಿದರು.ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್ ಸ್ವಾಗತಿಸಿದರು. ಯೋಜನಾ ನಿರ್ದೇಶಕ ಅನಿಲ್ ಕುಮಾರ್, ಕಾಸಿಂ ಮಲ್ಲಿಗೆಮನೆ, ಪ್ರಭಾಕರ ಗೌಡ ಪೋಸಂದೋಡಿ, ವಿವೇಕ್ ವಿನ್ಸಂಟ್ ಪಾಯಿಸ್, ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.

ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಈ ವರ್ಷ ಹತ್ತು ಲಕ್ಷಕ್ಕೂ ಮಿಕ್ಕಿ ಸಸಿಗಳನ್ನು ನಾಟಿ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತಣ್ಣೀರುಪಂಥ ಮೀಸಲು ಅರಣ್ಯ ಪ್ರದೇಶದಲ್ಲಿ 4500 ಗಿಡಗಳನ್ನು ನಾಟಿ ಮಾಡಲಾಯಿತು. ರಾಜ್ಯದೆಲ್ಲೆಡೆ ಈಗಾಗಲೆ 4332 ಕಾರ್ಯಕ್ರಮಗಳ ಮೂಲಕ 2,40,399 ಹಣ್ಣುಹಂಪಲಿನ ಗಿಡಗಳನ್ನು ಹಾಗೂ 5,27,898 ಇತರ ಗಿಡಗಳನ್ನು 4300 ಎಕ್ರೆ ಪ್ರದೇಶದಲ್ಲಿ ನಾಟಿ ಮಾಡಲಾಗಿದೆ. ಇದಕ್ಕಾಗಿ 36 ಲಕ್ಷ ರೂ. ಅನುದಾನ ವಿನಿಯೋಗಿಸಲಾಗಿದೆ.

Related posts

ಕುದ್ರಾಯ ಸಮೀಪದ ಬೋಳಿಯಾರುನಲ್ಲಿ ಮೋರಿಯ ತಡೆಗೋಡೆ ಕುಸಿತ

Suddi Udaya

ಕೊಕ್ಕಡದಲ್ಲಿ ಸ್ವಾಮಿ ಪ್ರಸಾದ್ ಪ್ಯಾರಡೈಸ್ ವಸತಿ ಗೃಹ ಶುಭಾರಂಭ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಮತ್ತು ಕಾಲೇಜಿನಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಬೆಳ್ತಂಗಡಿ : ಕೆಇಬಿ ರಸ್ತೆ -ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕ ರಸ್ತೆಗೆ ಅನುದಾನ ಒದಗಿಸುವಂತೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಮನವಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ರಕ್ಷಿತ್ ಶಿವರಾಮ್ ಭೇಟಿ, ಪ್ರಾರ್ಥನೆ

Suddi Udaya
error: Content is protected !!