24.4 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ

ತಣ್ಣೀರುಪಂತ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಜು. 9ರಂದು ಬೆಳ್ತಂಗಡಿ ತಾಲೂಕಿನ ಪುರುಷರ ಮಜಲು ಪರಿಸರದಲ್ಲಿ ತಣ್ಣೀರುಪಂಥ ಮೀಸಲು ಅರಣ್ಯ ಪ್ರದೇಶದಲ್ಲಿ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ ನಡೆಯಿತು.

ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದ್ಘಾಟಿಸಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಎಂಎಲ್ಸಿ ಪ್ರತಾಪಸಿಂಹ ನಾಯಕ್ ಭಾಗವಹಿಸಿದ್ದರು.ಮಂಗಳೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಡಾ. ಕರಿಕಾಲನ್ ಮತ್ತು ಉಪರಣ್ಯ ಸಂರಕ್ಷಣಾಧಿಕಾರಿ ಡಾ. ದಿನೇಶ್ ಕುಮಾರ್, ವೈ.ಕೆ. ಸಸಿಗಳನ್ನು ವಿತರಿಸಿದರು.ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್ ಸ್ವಾಗತಿಸಿದರು. ಯೋಜನಾ ನಿರ್ದೇಶಕ ಅನಿಲ್ ಕುಮಾರ್, ಕಾಸಿಂ ಮಲ್ಲಿಗೆಮನೆ, ಪ್ರಭಾಕರ ಗೌಡ ಪೋಸಂದೋಡಿ, ವಿವೇಕ್ ವಿನ್ಸಂಟ್ ಪಾಯಿಸ್, ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.

ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಈ ವರ್ಷ ಹತ್ತು ಲಕ್ಷಕ್ಕೂ ಮಿಕ್ಕಿ ಸಸಿಗಳನ್ನು ನಾಟಿ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತಣ್ಣೀರುಪಂಥ ಮೀಸಲು ಅರಣ್ಯ ಪ್ರದೇಶದಲ್ಲಿ 4500 ಗಿಡಗಳನ್ನು ನಾಟಿ ಮಾಡಲಾಯಿತು. ರಾಜ್ಯದೆಲ್ಲೆಡೆ ಈಗಾಗಲೆ 4332 ಕಾರ್ಯಕ್ರಮಗಳ ಮೂಲಕ 2,40,399 ಹಣ್ಣುಹಂಪಲಿನ ಗಿಡಗಳನ್ನು ಹಾಗೂ 5,27,898 ಇತರ ಗಿಡಗಳನ್ನು 4300 ಎಕ್ರೆ ಪ್ರದೇಶದಲ್ಲಿ ನಾಟಿ ಮಾಡಲಾಗಿದೆ. ಇದಕ್ಕಾಗಿ 36 ಲಕ್ಷ ರೂ. ಅನುದಾನ ವಿನಿಯೋಗಿಸಲಾಗಿದೆ.

Related posts

ಕೃಷಿ ಪಂಪುಗಳ ಸ್ಥಾವರಗಳಿಗೆ ಆಧಾರ್ ಜೋಡಣೆ ಹಿನ್ನಲೆ ಸರಕಾರಿ ರಜಾ ದಿನವಾದ ಆ.24,25 ರಂದು ಬೆಳ್ತಂಗಡಿ ಮೆಸ್ಕಾಂ ಕಛೇರಿ ಕಾರ್ಯನಿರ್ವಹಿಸಲಿದೆ

Suddi Udaya

ಲಾಯಿಲ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿಯಲ್ಲಿ “ಶ್ರೀ ಶಾರದಾ ಒಪ್ಟಿಕಲ್ಸ್” ದೃಷ್ಟಿ ಕನ್ನಡಕಗಳ ಮಳಿಗೆ ಶುಭಾರಂಭ

Suddi Udaya

ಬಳಂಜ ಜ್ಯೋತಿ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ ಸಭೆ: ಅಧ್ಯಕ್ಷರಾಗಿ ಚೇತನಾ ಜೈನ್, ಪ್ರ.ಕಾರ್ಯದರ್ಶಿಯಾಗಿ ಯಕ್ಷಿತಾ ದೇವಾಡಿಗ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಗ್ರಾಮ‌ ಸುಭೀಕ್ಷೆಗಾಗಿ ಶ್ರೀ ದೇವರ ಲೋಕ ಸಂಚಾರ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ಪ್ರಶಿಕ್ಷಣ ಕಾರ್ಯಾಗಾರ

Suddi Udaya
error: Content is protected !!