23.7 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕ

ಜೈನ ಮುನಿಯ ವಿಚಾರದಲ್ಲ ರಾಜಕಾರಣಿಗಳ ಬುದ್ಧಿಜೀವಿಗಳ ಪ್ರಗತಿಪರರ ಜಾತ್ಯಾತೀತರ ತಾರತಮ್ಯ

ಬೆಳ್ತಂಗಡಿ: ಬೆಳಗಾವಿಯ ಚಿಕ್ಕೋಡಿಯಲ್ಲಿ ಮುನಿಯೊಬ್ಬರ ಬರ್ಬರ ಹತ್ಯೆ ಮಾಡಲಾಗಿದೆ. ಇದರಿಂದ ಜೈನ ಸಮಾಜ ಆಘಾತಕ್ಕೆ ಒಳಗಾಗಿದೆ. ಮೈಕ್ರೋ ಸಂಖ್ಯೆಯಲ್ಲಿರುವ ಜೈನರಿಗೆ ಭಾರತದಲ್ಲಿಯೇ ಅದೂ ಮೂಲನಿವಾಸಿಗಳಾದ ಜೈನರಿಗೆ ಭಾರತದಲ್ಲಿಯೇ ಅಭದ್ರತೆಯ ವಾತಾವರಣ ಉಂಟಾಗಿರುವುದು ವಿಷಾದನೀಯ.
‌ಜೈನ ಮುನಿಯೊಬ್ಬರ ಕ್ಷುಲ್ಲಕ ಕಾರಣಕ್ಕಾಗಿ ಹತ್ಯೆ ಮಾಡಲಾಗಿದೆ.‌ ಸಹಾಯ ಪಡೆದುಕೊಂಡವರೇ ಕೃತಘ್ನರಾಗಿ ಹತ್ಯೆಗೈದಿದ್ದಾರೆ. ಆದರೆ ರಾಜಕಾರಣಿಗಳು, ರಾಜಕೀಯ ಪಕ್ಷಗಳು, ಬುದ್ಧಿ ಜೀವಿಗಳು, ಪ್ರಗತಿಪರರು, ಜಾತ್ಯಾತೀತರು ದಿವ್ಯ ಮೌನವಹಿಸಿದ್ದಾರೆ. ಬೆರಳಣಿಕೆಯ ಮಂದಿ ಪ್ರತಿಕ್ರಿಯೆ ನೀಡಿದ್ದಾರೆ.
ಇದೇ ಘಟನೆ ಬೇರೆ ಧರ್ಮದ್ದಾಗಿದ್ದರೆ ಇಡೀ ರಾಜ್ಯದಲ್ಲೇ ದಂಗೆಯಾಗುತ್ತಿತ್ತು. ಆದರೆ ಜೈನರು ಅಹಿಂಸಾವಾದಿಗಳು ಹಾಗೂ ಯಾವುದೇ ರಾಜಕೀಯ ಬೆಂಬಲ ಇಲ್ಲದವರು. ಬೇರೆಯವರ ಒಂದು ಕೂದಲು ಅಲುಗಾಡಿದರು ಹಾರಾಡುವ ಚೀರಾಡುವ ಮಂದಿಗಳು ಎಲ್ಲಿ ಹೋದರು ..? ಹಣದಾಸೆಗೆ , ಸ್ವಹಿತಾಸಕ್ತಿಗಾಗಿ ಬೊಬ್ಬಿರಿಯುವ ಈ ಪಡೆಗಳು ಈಗ ನಾಲಿಗೆ ಬಿದ್ದವರಂತೆ ಬಿದ್ದುಕೊಂಡಿದ್ದಾರೆ. ಸಣ್ಣಸಣ್ಣ ಕಾರಣಗಳಿಗೂ ರಾಜಾರೋಷವಾಗಿ ಬೊಬ್ಬಿಡುವ ಮಂದಿಗಳು ಈಗ ಯಾವ ರೀತಿ ಲಾಭ ಪಡೆದುಕೊಳ್ಳಬಹುದು ಎಂದು ಕನಸು ಕಾಣುತ್ತಿವೆ.

ಈಗ ಜೈನರಿಗೆ ಭದ್ರತೆ, ರಕ್ಷಣೆ ಒದಗಿಸುವ ಜೊತೆಗೆ, ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರಗಳೆರಡು ಜೈನರಿಗೆ ಸಾಮಾಜಿಕ ನ್ಯಾಯವನ್ನು ಒದಗಿಸಬೇಕಾದದ್ದು ಕರ್ತವ್ಯ. ನಿಮ್ಮಗಳ ಓಟುಬ್ಯಾಂಕನ್ನು ಬದಿಗಿರಿಸಿ ಸಾಮಾಜಿಕ ನ್ಯಾಯವನ್ನು ಜೈನರಿಗೆ ನೀಡಬೇಕಾದದ್ದು ನಿಮ್ಮಗಳ ಕರ್ತವ್ಯವಾಗಿದೆ. ಕೊಲೆಪಾತಕರಲ್ಲೂ ಜಾತಿಯನ್ನು ನೋಡದೇ ಕಾನೂನು ಪ್ರಕಾರ ಶಿಕ್ಷೆಯನ್ನು ಕೊಡಿ. ಜೈನರಿಗೆ ರಕ್ಷಣೆಯನ್ನು ನೀಡಿ. ನಿಷ್ಪಕ್ಷಪಾತವಾಗಿ ಜೈನರಿಗೆ ನ್ಯಾಯವನ್ನು ದೊರಕಿಸಿಕೊಡಿ.

  • ನಿರಂಜನ್ ಜೈನ್ ಕುದ್ಯಾಡಿ

Related posts

ಮೇ 20-23: ಬಡಕೋಡಿ ದಂದ್ಯೊಟ್ಟು ಬ್ರಹ್ಮಶ್ರೀ ಮುಗೇರ ದೈವಸ್ಥಾನ, ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಭ್ರಮ

Suddi Udaya

ಕನ್ಯಾಡಿ ಸ್ವಾಮೀಜಿ ಚಾತುರ್ಮಾಸ್ಯ: ಜು.3ರಿಂದ ಆ.31ರವರೆಗೆ ಎಂಟು ಭಾನುವಾರ ಹೊರತುಪಡಿಸಿ ಇತರ ದಿನಗಳಲ್ಲಿ ಮೌನ ಚಾತುರ್ಮಾಸ್ಯ

Suddi Udaya

ಕೊಕ್ಕಡ: ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ ಪ್ರಯುಕ್ತ ಗಣಹೋಮ

Suddi Udaya

ನಿವೃತ್ತ ಸೇನಾಧಿಕಾರಿ ಕುಮಾರ ಸ್ವಾಮಿ ಮತ್ತು ಕ್ಯಾಂಪ್ಕೊ ಕಂಪೆನಿಯ ಹಿರಿಯ ಮೇನೇಜರ್‌‌, ‌ನಿವೃತ್ತ ಸುಭೇದಾರ್‌ ರಂಗನಾಥ್ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಾಲಯಕ್ಕೆ ಭೇಟಿ

Suddi Udaya

ಜ.31-ಫೆ.4: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಲಾಯಿಲ: ಗುರು ರಾಘವೇಂದ್ರ ಸ್ವಾಮಿಯ ಮಠದಲ್ಲಿ ಶ್ರೀರಾಮಚಂದ್ರ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಸ್ವಚ್ಛತಾ ಕಾರ್ಯ

Suddi Udaya
error: Content is protected !!