25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ

ತಣ್ಣೀರುಪಂತ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಜು. 9ರಂದು ಬೆಳ್ತಂಗಡಿ ತಾಲೂಕಿನ ಪುರುಷರ ಮಜಲು ಪರಿಸರದಲ್ಲಿ ತಣ್ಣೀರುಪಂಥ ಮೀಸಲು ಅರಣ್ಯ ಪ್ರದೇಶದಲ್ಲಿ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ ನಡೆಯಿತು.

ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದ್ಘಾಟಿಸಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಎಂಎಲ್ಸಿ ಪ್ರತಾಪಸಿಂಹ ನಾಯಕ್ ಭಾಗವಹಿಸಿದ್ದರು.ಮಂಗಳೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಡಾ. ಕರಿಕಾಲನ್ ಮತ್ತು ಉಪರಣ್ಯ ಸಂರಕ್ಷಣಾಧಿಕಾರಿ ಡಾ. ದಿನೇಶ್ ಕುಮಾರ್, ವೈ.ಕೆ. ಸಸಿಗಳನ್ನು ವಿತರಿಸಿದರು.ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್ ಸ್ವಾಗತಿಸಿದರು. ಯೋಜನಾ ನಿರ್ದೇಶಕ ಅನಿಲ್ ಕುಮಾರ್, ಕಾಸಿಂ ಮಲ್ಲಿಗೆಮನೆ, ಪ್ರಭಾಕರ ಗೌಡ ಪೋಸಂದೋಡಿ, ವಿವೇಕ್ ವಿನ್ಸಂಟ್ ಪಾಯಿಸ್, ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.

ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಈ ವರ್ಷ ಹತ್ತು ಲಕ್ಷಕ್ಕೂ ಮಿಕ್ಕಿ ಸಸಿಗಳನ್ನು ನಾಟಿ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತಣ್ಣೀರುಪಂಥ ಮೀಸಲು ಅರಣ್ಯ ಪ್ರದೇಶದಲ್ಲಿ 4500 ಗಿಡಗಳನ್ನು ನಾಟಿ ಮಾಡಲಾಯಿತು. ರಾಜ್ಯದೆಲ್ಲೆಡೆ ಈಗಾಗಲೆ 4332 ಕಾರ್ಯಕ್ರಮಗಳ ಮೂಲಕ 2,40,399 ಹಣ್ಣುಹಂಪಲಿನ ಗಿಡಗಳನ್ನು ಹಾಗೂ 5,27,898 ಇತರ ಗಿಡಗಳನ್ನು 4300 ಎಕ್ರೆ ಪ್ರದೇಶದಲ್ಲಿ ನಾಟಿ ಮಾಡಲಾಗಿದೆ. ಇದಕ್ಕಾಗಿ 36 ಲಕ್ಷ ರೂ. ಅನುದಾನ ವಿನಿಯೋಗಿಸಲಾಗಿದೆ.

Related posts

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಉರುವಾಲು ನಿವಾಸಿ ಸೀತಾ ರವರು ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ವಿಶ್ವ ಮಾನವ ದಿನಾಚರಣೆ

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡೊಂಕುಬೆಟ್ಟು ವೀರಮ್ಮ ಸಂಜೀವ ಸಾಲಿಯಾನ್ ಕುಟುಂಬಸ್ಥರಿಂದ ಶ್ರೀ ಕೊಡಮಣಿತ್ತಾಯ ದೈವಕ್ಕೆ ಮರದ ಮಂಚ ಸಮರ್ಪಣೆ

Suddi Udaya

ಕೊಕ್ಕಡ: ಮುಂಡೂರುಪಳಿಕೆ ಸ.ಕಿ.ಪ್ರಾ. ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಆಟಿ ಅಮಾವಾಸ್ಯೆಯ ಪ್ರಯುಕ್ತ ಮುಗುಳಿ ಸವಣಾಲು ಮತ್ತು ಶ್ರವಣಗುಂಡ ಅತಿಶಯ ಕ್ಷೇತ್ರಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya
error: Content is protected !!