23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ

ತಣ್ಣೀರುಪಂತ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಜು. 9ರಂದು ಬೆಳ್ತಂಗಡಿ ತಾಲೂಕಿನ ಪುರುಷರ ಮಜಲು ಪರಿಸರದಲ್ಲಿ ತಣ್ಣೀರುಪಂಥ ಮೀಸಲು ಅರಣ್ಯ ಪ್ರದೇಶದಲ್ಲಿ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ ನಡೆಯಿತು.

ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದ್ಘಾಟಿಸಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಎಂಎಲ್ಸಿ ಪ್ರತಾಪಸಿಂಹ ನಾಯಕ್ ಭಾಗವಹಿಸಿದ್ದರು.ಮಂಗಳೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಡಾ. ಕರಿಕಾಲನ್ ಮತ್ತು ಉಪರಣ್ಯ ಸಂರಕ್ಷಣಾಧಿಕಾರಿ ಡಾ. ದಿನೇಶ್ ಕುಮಾರ್, ವೈ.ಕೆ. ಸಸಿಗಳನ್ನು ವಿತರಿಸಿದರು.ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್ ಸ್ವಾಗತಿಸಿದರು. ಯೋಜನಾ ನಿರ್ದೇಶಕ ಅನಿಲ್ ಕುಮಾರ್, ಕಾಸಿಂ ಮಲ್ಲಿಗೆಮನೆ, ಪ್ರಭಾಕರ ಗೌಡ ಪೋಸಂದೋಡಿ, ವಿವೇಕ್ ವಿನ್ಸಂಟ್ ಪಾಯಿಸ್, ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.

ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಈ ವರ್ಷ ಹತ್ತು ಲಕ್ಷಕ್ಕೂ ಮಿಕ್ಕಿ ಸಸಿಗಳನ್ನು ನಾಟಿ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತಣ್ಣೀರುಪಂಥ ಮೀಸಲು ಅರಣ್ಯ ಪ್ರದೇಶದಲ್ಲಿ 4500 ಗಿಡಗಳನ್ನು ನಾಟಿ ಮಾಡಲಾಯಿತು. ರಾಜ್ಯದೆಲ್ಲೆಡೆ ಈಗಾಗಲೆ 4332 ಕಾರ್ಯಕ್ರಮಗಳ ಮೂಲಕ 2,40,399 ಹಣ್ಣುಹಂಪಲಿನ ಗಿಡಗಳನ್ನು ಹಾಗೂ 5,27,898 ಇತರ ಗಿಡಗಳನ್ನು 4300 ಎಕ್ರೆ ಪ್ರದೇಶದಲ್ಲಿ ನಾಟಿ ಮಾಡಲಾಗಿದೆ. ಇದಕ್ಕಾಗಿ 36 ಲಕ್ಷ ರೂ. ಅನುದಾನ ವಿನಿಯೋಗಿಸಲಾಗಿದೆ.

Related posts

ರಾಜ್ಯ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪ್ರತಿಭಟನೆ

Suddi Udaya

ಬಳಂಜ ವೈಭವದ ಶಾರದೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನಿಯೋಗದಿಂದ ದ. ಕ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿಗಳ ಭೇಟಿ, ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆ ಬಗ್ಗೆ ಚರ್ಚೆ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ 3 ನೇ ವರ್ಷದ ಪಾದರ್ಪಣೆಯ ಸಂಭ್ರಮಾಚರಣೆ

Suddi Udaya

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಹಿಳಾ ಹವಾನಿಯಂತ್ರಿತ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ ಯುವಮೋರ್ಚಾ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

Suddi Udaya
error: Content is protected !!