March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪೆರ್ಮುಡ: ಸ.ಹಿ.ಪ್ರಾ.ಶಾಲೆಯಲ್ಲಿ ಉಚಿತ ಬರವಣಿಗೆ ಪುಸ್ತಕ ವಿತರಣೆ

ಪೆರ್ಮುಡ: ಸ.ಹಿ.ಪ್ರಾ.ಶಾಲೆ ಪೆರ್ಮುಡಲ್ಲಿ ಉಚಿತ ಬರವಣಿಗೆ ಪುಸ್ತಕ ವಿತರಣಾ ಕಾರ್ಯಕ್ರಮವು ಇತ್ತೀಚೆಗೆ ಜರಗಿತು. ಕುಕ್ಕೇಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಅಶೋಕ್ ಪಾಣೂರುರವರ ವತಿಯಿಂದ ನಡೆದ 11ನೇ ವರ್ಷದ ಈ ಕಾರ್ಯಕ್ರಮದಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಬರವಣಿಗೆ ಪುಸ್ತಕ ಹಾಗೂ ಲೇಖನ ಸಾಮಾಗ್ರಿಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಹಳೇ ವಿದ್ಯಾರ್ಥಿ ಸಂದೀಪ್ ಮೆಂಡೋನ್ಸ ಮೈಕ್ ಹಾಗೂ ಸೌಂಡ್‌ ಸಿಸ್ಟಮ್ ಕೊಡುಗೆಯಾಗಿ ನೀಡಿದರು.

ವೇದಿಕೆಯಲ್ಲಿ ಎಸ್. ಡಿ.ಎಂ.ಸಿ.ಯ ಅಧ್ಯಕ್ಷರಾದ ಪ್ರಭಾಕರ, ಗ್ರಾಮ ಪಂಚಾಯತ್ ಸದಸ್ಯರಾದ ಪ್ರವೀತಾ, ನವೋದಯ ಬ್ಯಾಂಕ್‌ನ ವ್ಯವಸ್ಥಾಪಕರಾದ ನಿತೇಶ್, ಊರಿನ ಪ್ರಗತಿಪರ ಕೃಷಿಕರಾದ ಸ್ಟೀವನ್, ಶಾಲಾ ಮುಖ್ಯಶಿಕ್ಷಕಿ ಸವಿತಾರವರು ಉಪಸ್ಥಿತರಿದ್ದರು.

ಗೌರವ ಶಿಕ್ಷಕಿ ಸುಜಾತಾ ಸ್ವಾಗತಿಸಿ, ಅತಿಥಿ ಶಿಕ್ಷಕಿ ಮೋಹಿನಿ ವಂದಿಸಿದರು. ಸಹಶಿಕ್ಷಕರಾದ ಬಿ. ಟಿ. ಧನಂಜಯ ಕಾರ್ಯಕ್ರಮ ನಿರೂಪಿಸಿದರು.

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವ ಸಿದ್ಧತಾ ಸಭೆ

Suddi Udaya

ನೇತಾಜಿ ಸುಭಾಶ್ ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ಮುಗುಳಿ ಶಾಲೆಗೆ ಆವರಣ ಗೋಡೆ ನಿರ್ಮಿಸುವ ಮತ್ತು ಭದ್ರತಾ ಸಿಬ್ಬಂದಿ ನೇಮಕ ಮಾಡುವಂತೆ ಜಿಲ್ಲಾ ಕೆ.ಡಿ.ಪಿ ಸದಸ್ಯ ಸಂತೋಷ್ ಕುಮಾರ್ ರಿಂದ ಜಿಲ್ಲಾಧಿಕಾರಿಗೆ ಮನವಿ

Suddi Udaya

ನಾವೂರು: ವಾಲ್ಟರ್ ಪಾಯಸ್ ನಿಧನ

Suddi Udaya

ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಕಬ್ & ಬುಲ್ ಬುಲ್ ದಳಗಳ ಉದ್ಘಾಟನಾ ಸಮಾರಂಭ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ

Suddi Udaya

ಉಜಿರೆ: “ಯಕ್ಷಸಿರಿ” ಪ್ರಶಸ್ತಿಗೆ ಆಯ್ಕೆಯಾದ ದಿವಾಕರ್ ದಾಸ್ ಕಾವಳಕಟ್ಟೆ ರವರಿಗೆ ಗೌರವಾರ್ಪಣೆ

Suddi Udaya
error: Content is protected !!