July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪೆರ್ಮುಡ: ಸ.ಹಿ.ಪ್ರಾ.ಶಾಲೆಯಲ್ಲಿ ಉಚಿತ ಬರವಣಿಗೆ ಪುಸ್ತಕ ವಿತರಣೆ

ಪೆರ್ಮುಡ: ಸ.ಹಿ.ಪ್ರಾ.ಶಾಲೆ ಪೆರ್ಮುಡಲ್ಲಿ ಉಚಿತ ಬರವಣಿಗೆ ಪುಸ್ತಕ ವಿತರಣಾ ಕಾರ್ಯಕ್ರಮವು ಇತ್ತೀಚೆಗೆ ಜರಗಿತು. ಕುಕ್ಕೇಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಅಶೋಕ್ ಪಾಣೂರುರವರ ವತಿಯಿಂದ ನಡೆದ 11ನೇ ವರ್ಷದ ಈ ಕಾರ್ಯಕ್ರಮದಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಬರವಣಿಗೆ ಪುಸ್ತಕ ಹಾಗೂ ಲೇಖನ ಸಾಮಾಗ್ರಿಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಹಳೇ ವಿದ್ಯಾರ್ಥಿ ಸಂದೀಪ್ ಮೆಂಡೋನ್ಸ ಮೈಕ್ ಹಾಗೂ ಸೌಂಡ್‌ ಸಿಸ್ಟಮ್ ಕೊಡುಗೆಯಾಗಿ ನೀಡಿದರು.

ವೇದಿಕೆಯಲ್ಲಿ ಎಸ್. ಡಿ.ಎಂ.ಸಿ.ಯ ಅಧ್ಯಕ್ಷರಾದ ಪ್ರಭಾಕರ, ಗ್ರಾಮ ಪಂಚಾಯತ್ ಸದಸ್ಯರಾದ ಪ್ರವೀತಾ, ನವೋದಯ ಬ್ಯಾಂಕ್‌ನ ವ್ಯವಸ್ಥಾಪಕರಾದ ನಿತೇಶ್, ಊರಿನ ಪ್ರಗತಿಪರ ಕೃಷಿಕರಾದ ಸ್ಟೀವನ್, ಶಾಲಾ ಮುಖ್ಯಶಿಕ್ಷಕಿ ಸವಿತಾರವರು ಉಪಸ್ಥಿತರಿದ್ದರು.

ಗೌರವ ಶಿಕ್ಷಕಿ ಸುಜಾತಾ ಸ್ವಾಗತಿಸಿ, ಅತಿಥಿ ಶಿಕ್ಷಕಿ ಮೋಹಿನಿ ವಂದಿಸಿದರು. ಸಹಶಿಕ್ಷಕರಾದ ಬಿ. ಟಿ. ಧನಂಜಯ ಕಾರ್ಯಕ್ರಮ ನಿರೂಪಿಸಿದರು.

Related posts

ವೇಣೂರು: ಶ್ರೀ ಧ. ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಶಿಕ್ಷಕ ಸನತ್ ಕುಮಾರ್ ಬೀಳ್ಕೊಡುಗೆ ಸಮಾರಂಭ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನ ಇದರ ವತಿಯಿಂದ ಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಸುದೀರ್ಘಾವಧಿ ಸೇವೆ ಸಲ್ಲಿಸಿರುವ ಚಂದು ನಾಯ್ಕರಿಗೆ ಸನ್ಮಾನ

Suddi Udaya

ಸ್ಪಂದನಾ ಸೇವಾ ಸಂಘದ 116ನೇ ಸೇವಾ ಯೋಜನೆಯ ಧನಸಹಾಯ ವಿತರಣೆ

Suddi Udaya

ಫೆ.22: ಟೀಂ ಅಭಯಹಸ್ತ ಕಾರ್ಯಕ್ರಮದ ಸಮಾಲೋಚನಾಸಭೆ: ಸಂದೀಪ್ ಸುಂದರ್ ನೀರಲ್ಕೆ

Suddi Udaya

ಜನಸ್ನೇಹಿ ಅಧಿಕಾರಿ ಜುಬಿನ್ ಮೊಹಾಪಾತ್ರ ದಿಢೀರ್ ವಗಾವಣೆ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಮಂಜುನಾಥ ಜಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!