27.8 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ: ಶ್ರೀ ನೇಮಿನಾಥ ಸ್ವಾಮಿ ಬಸದಿಯ ನೂತನ ಗೋಪುರದ ಶಿಲಾನ್ಯಾಸ

ಸುಲ್ಕೇರಿ : ಶ್ರೀ ನೇಮಿನಾಥ ಸ್ವಾಮಿ ಬಸದಿ ಜೀರ್ಣೋದ್ಧಾರಗೊಳ್ಳುತ್ತಿದ್ದು ಬಸದಿಯ ನೂತನ ಗೋಪುರದ ಶಿಲಾನ್ಯಾಸ ಸಮಾರಂಭ ಜು. 9 ರಂದು ಸುಲ್ಕೇರಿ ಬಸದಿಯಲ್ಲಿ ನಡೆಯಿತು.


ಪುರೋಹಿತರ ಧಾರ್ಮಿಕ ಪೂಜೆಗಳೊಂದಿಗೆ ಪ್ರಾರಂಭಗೊಂಡ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಕೆ.ಹರೀಶ್ ಕುಮಾರ್, ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರು, ಮೂಡಬಿದ್ರೆ ಎಕ್ಸ್ ಲೆಂಟ್ ಶಿಕ್ಷಣ ಸಂಸ್ಥೆಯ ಯುವರಾಜ ಜೈನ್, ನೂರಾಳ್ ಬೆಟ್ಟು ಜಯಧವಳದ ವಿಜಯ ಕುಮಾರ್ ಜೈನ್, ಮನ್ಮಥ ಕುಮಾರ್ ನೆಲ್ಲಿಕಾರು, ಸತೀಶ್ ಪಡಿವಾಳ್ ಪುತ್ತೂರು ಭಾಗವಹಿಸಿ ಬಸದಿಯ ಕೆಲಸ ಕಾರ್ಯಗಳಿಗೆ ಸಹಾಯ ಮಾಡುವುದರೊಂದಿಗೆ ಶುಭ ಕೋರಿದರು.


ಈ ಸಂದರ್ಭದಲ್ಲಿ ಗಣ್ಯರನ್ನು ಬಸದಿಯ ವತಿಯಿಂದ ಗೌರವಿಸಲಾಯಿತು.
ಆಡಳಿತ ಸಮಿತಿಯ‌ ಮೊಕ್ತೇಸರರಾದ ಎನ್.ರವಿರಾಜ ಹೆಗ್ಡೆ ನಾವರ ಗುತ್ತು ಮತ್ತು ಸಮಸ್ತ ಜೈನ ಭಾಂಧವರು ಭಾಗವಹಿಸಿದ್ದರು.

Related posts

ವೇಣೂರು ಸಿಎ ಬ್ಯಾಂಕ್ ನ ಮಾಜಿ ನಿರ್ದೇಶಕ ರತ್ನವರ್ಮ ಮುದ್ಯ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಐಸಿಯು ವೆಂಟಿಲೇಟರ್‌ಗಳ ಉದ್ಘಾಟನೆ

Suddi Udaya

ಬೆಳಾಲು ಪ್ರೌಢಶಾಲೆ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಭವಾನಿ ಮಾರ್ಪಾಲು, ಉಪಾಧ್ಯಕ್ಷರಾಗಿ ರಾಜೇಶ್ ಕುರ್ಕಿಲು

Suddi Udaya

ರೆಖ್ಯ: ಸಾರ್ವಜನಿಕ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಣಾ ಸಮಿತಿ ರಚನೆ

Suddi Udaya

ರಾಜ್ಯ ಮಟ್ಟದ ಕ್ರೀಡಾಕೂಟ: ನಾವೂರು ಸರಕಾರಿ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಜೀವಿತ್ 4ನೇ ಸ್ಥಾನ

Suddi Udaya

ಮಡಂತ್ಯಾರು: ಬುಲೆಟ್ ಟ್ಯಾಂಕರ್ ಮತ್ತು ಓಮ್ನಿ ಕಾರ್ ಮುಖಾಮುಖಿ ಡಿಕ್ಕಿ

Suddi Udaya
error: Content is protected !!