April 2, 2025
Uncategorizedಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಅಳದಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಾಲಯ ಹಾಗೂ ಸೇವಾ ಸಿಂಧು ಕೇಂದ್ರದ ಉದ್ಘಾಟನೆ

ಅಳದಂಗಡಿ: ಕರ್ನಾಟಕ ಸರಕಾರದ ಉಚಿತ ಗ್ಯಾರಂಟಿ ಯೋಜನೆಗಳ ನೊಂದಾವಣೆಗೆ ಅಳದಂಗಡಿ ಮತ್ತು ಸುಲ್ಕೇರಿ ಗ್ರಾಮ ಪಂಚಾಯತ್‌ಗೆ ಒಳಪಟ್ಟ ಅರ್ಹ ಫಲಾನುಭವಿ ಸಾರ್ವಜನಿಕ ಬಂಧುಗಳಿಗೆ ಉಚಿತ ಸೇವೆ ನೀಡಲು ಪಕ್ಷದ ವರಿಷ್ಠರ ಅನುಮತಿ ಮೇರೆಗೆ ಕಾಂಗ್ರೆಸ್ ಪಕ್ಷದ ಕಾರ್ಯಾಲಯ ಹಾಗೂ ಸೇವಾ ಸಿಂಧು ಕೇಂದ್ರದ ಉದ್ಘಾಟನಾ ಸಮಾರಂಭವು ಜು.9ರಂದು ಪದ್ಮಾಂಬ ಕಾಂಪ್ಲೆಕ್ಸ್, ಅಳದಂಗಡಿಯಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಶಾಸಕ ವಸಂತ ಬಂಗೇರ ನೆರವೇರಿಸಿದರು.
ಸಭಾಧ್ಯಕ್ಷತೆಯನ್ನು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶೈಲೇಶ್ ಕುಮಾರ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಪದ್ಮಾಂಬ ಕಾಂಪ್ಲೆಕ್ಸ್‌ನ ಮಾಲಕ ಪಾಶ್ವನಾಥ ಜೈನ್, ನಾಗಕುಮಾರ್ ಜೈನ್, ಅಳದಂಗಡಿ ಗ್ರಾ.ಪಂ. ಸದಸ್ಯ ಪ್ರಶಾಂತ್ ವೇಗಸ್ ಹಾಗೂ ಸಭೆಯಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶೇಖರ ಕುಕ್ಕೇಡಿ, ವಿಶ್ವನಾಥ ಡೋಂಗ್ರೆ, ಚಂದ್ರ ಮೋಹನ ಜೈನ್, ವಿಶ್ವನಾಥ ಪೂಜಾರಿ ಕುದ್ಯಾಡಿ, ಜಯಾನಂದ ಪೂಜಾರಿ, ಕೊರಗಪ್ಪ ಪೂಜಾರಿ ಸುಲ್ಕೇರಿ, ಗ್ರಾ.ಪಂ ಹಾಲಿ ಮಾಜಿ ಸದಸ್ಯರುಗಳು, ತಾಲೂಕು ಪಂಚಾಯತ್ ಮಾಜಿ ಸದಸ್ಯೆ ವಿನೂಷಾ ಪ್ರಕಾಶ್, ತಾಲೂಕು ಬಿಲ್ಲವ ಸಂಘದ ಅಧ್ಯಕ್ಷರಾದ ಚಿದಾನಂದ ಪೂಜಾರಿ ಎಲ್ದಡ್ಕ, ಸುನೀಲ್ ಜೈನ್ ಶಿರ್ಲಾಲು ಹಾಗೂ ಇತರರು ಭಾಗವಹಿಸಿದ್ದರು.

ಕು.ಪಂಚಮಿ ಮಯ್ಯ ಪ್ರಾರ್ಥಿಸಿ, ಸಂಜೀವ ಪೂಜಾರಿ ಕೊಡಂಗೆ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳ್ನಾಡಿದರು, ಎನ್.ವೀರೇಂದ್ರ ಕುಮಾರ್ ಜೈನ್ ನಿರೂಪಿಸಿ, ಸುಭಾಶ್ಚಂದ್ರ ರೈ ಧನ್ಯವಾದವಿತ್ತರು.

Related posts

ಗುರುವಾಯನಕೆರೆ : ಪಿಎಂ ಕುಸುಮ್ -ಸಿ ಯೋಜನೆಯಡಿ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಯೋಜನೆ

Suddi Udaya

ಗುರುವಾಯನಕೆರೆ : ಶಕ್ತಿ ನಗರದಲ್ಲಿ ರಸ್ತೆ ಮಧ್ಯೆ ಅಪಾಯಕಾರಿ ಹೊಂಡ

Suddi Udaya

ಆರಂಬೋಡಿ 135 ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಇಗ್ನೈಟ್ ವಿಜ್ಞಾನ ವಸ್ತು ಪ್ರದರ್ಶನ

Suddi Udaya

ವೇಣೂರು: ಮೂಡಕೋಡಿಯಲ್ಲಿ ಬಿಜೆಪಿ ಬೂತ್ ಮಟ್ಟದ ಸಭೆ

Suddi Udaya

ಮಡಂತ್ಯಾರು: ಎಲೆಕ್ಟ್ರಿಕಲ್ ಉದಯ ಹೃದಯಾಘಾತದಿಂದ ನಿಧನ

Suddi Udaya
error: Content is protected !!