23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಅಳದಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಾಲಯ ಹಾಗೂ ಸೇವಾ ಸಿಂಧು ಕೇಂದ್ರದ ಉದ್ಘಾಟನೆ

ಅಳದಂಗಡಿ: ಕರ್ನಾಟಕ ಸರಕಾರದ ಉಚಿತ ಗ್ಯಾರಂಟಿ ಯೋಜನೆಗಳ ನೊಂದಾವಣೆಗೆ ಅಳದಂಗಡಿ ಮತ್ತು ಸುಲ್ಕೇರಿ ಗ್ರಾಮ ಪಂಚಾಯತ್‌ಗೆ ಒಳಪಟ್ಟ ಅರ್ಹ ಫಲಾನುಭವಿ ಸಾರ್ವಜನಿಕ ಬಂಧುಗಳಿಗೆ ಉಚಿತ ಸೇವೆ ನೀಡಲು ಪಕ್ಷದ ವರಿಷ್ಠರ ಅನುಮತಿ ಮೇರೆಗೆ ಕಾಂಗ್ರೆಸ್ ಪಕ್ಷದ ಕಾರ್ಯಾಲಯ ಹಾಗೂ ಸೇವಾ ಸಿಂಧು ಕೇಂದ್ರದ ಉದ್ಘಾಟನಾ ಸಮಾರಂಭವು ಜು.9ರಂದು ಪದ್ಮಾಂಬ ಕಾಂಪ್ಲೆಕ್ಸ್, ಅಳದಂಗಡಿಯಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಶಾಸಕ ವಸಂತ ಬಂಗೇರ ನೆರವೇರಿಸಿದರು.
ಸಭಾಧ್ಯಕ್ಷತೆಯನ್ನು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶೈಲೇಶ್ ಕುಮಾರ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಪದ್ಮಾಂಬ ಕಾಂಪ್ಲೆಕ್ಸ್‌ನ ಮಾಲಕ ಪಾಶ್ವನಾಥ ಜೈನ್, ನಾಗಕುಮಾರ್ ಜೈನ್, ಅಳದಂಗಡಿ ಗ್ರಾ.ಪಂ. ಸದಸ್ಯ ಪ್ರಶಾಂತ್ ವೇಗಸ್ ಹಾಗೂ ಸಭೆಯಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶೇಖರ ಕುಕ್ಕೇಡಿ, ವಿಶ್ವನಾಥ ಡೋಂಗ್ರೆ, ಚಂದ್ರ ಮೋಹನ ಜೈನ್, ವಿಶ್ವನಾಥ ಪೂಜಾರಿ ಕುದ್ಯಾಡಿ, ಜಯಾನಂದ ಪೂಜಾರಿ, ಕೊರಗಪ್ಪ ಪೂಜಾರಿ ಸುಲ್ಕೇರಿ, ಗ್ರಾ.ಪಂ ಹಾಲಿ ಮಾಜಿ ಸದಸ್ಯರುಗಳು, ತಾಲೂಕು ಪಂಚಾಯತ್ ಮಾಜಿ ಸದಸ್ಯೆ ವಿನೂಷಾ ಪ್ರಕಾಶ್, ತಾಲೂಕು ಬಿಲ್ಲವ ಸಂಘದ ಅಧ್ಯಕ್ಷರಾದ ಚಿದಾನಂದ ಪೂಜಾರಿ ಎಲ್ದಡ್ಕ, ಸುನೀಲ್ ಜೈನ್ ಶಿರ್ಲಾಲು ಹಾಗೂ ಇತರರು ಭಾಗವಹಿಸಿದ್ದರು.

ಕು.ಪಂಚಮಿ ಮಯ್ಯ ಪ್ರಾರ್ಥಿಸಿ, ಸಂಜೀವ ಪೂಜಾರಿ ಕೊಡಂಗೆ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳ್ನಾಡಿದರು, ಎನ್.ವೀರೇಂದ್ರ ಕುಮಾರ್ ಜೈನ್ ನಿರೂಪಿಸಿ, ಸುಭಾಶ್ಚಂದ್ರ ರೈ ಧನ್ಯವಾದವಿತ್ತರು.

Related posts

ಮಚ್ಚಿನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ಶ್ರೀ ಧ. ಮಂ. ಪ ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿ

Suddi Udaya

ಎಸ್‌ಡಿಎಂ ಆಯುರ್ವೇದ ಆಸ್ಪತ್ರೆಯಲ್ಲಿ ಉಚಿತ ಮಧುಮೇಹ ಪಾದ ತಪಾಸಣಾ ಶಿಬಿರ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದ್ವೇಷ ರಾಜಕೀಯ ಹಾಗೂ ಬೆಲೆ ಏರಿಕೆ ಖಂಡಿಸಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ದಕ್ಷಿಣ ಕಾಶಿ ಗಯಾಪದ ಕ್ಷೇತ್ರ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ಉಪ್ಪಿನಂಗಡಿಯಲ್ಲಿ ಇಂದು ರಾತ್ರಿ 8.10 ಗಂಟೆಗೆ ನೇತ್ರಾವತಿ ಮತ್ತು ಕುಮಾರಧಾರ ನದಿಗಳು ಸಂಗಮ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೆ.50 ರಷ್ಟು ಡಿಸ್ಕೌಂಟ್

Suddi Udaya
error: Content is protected !!