25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪೆರ್ಮುಡ: ಸ.ಹಿ.ಪ್ರಾ.ಶಾಲೆಯಲ್ಲಿ ಉಚಿತ ಬರವಣಿಗೆ ಪುಸ್ತಕ ವಿತರಣೆ

ಪೆರ್ಮುಡ: ಸ.ಹಿ.ಪ್ರಾ.ಶಾಲೆ ಪೆರ್ಮುಡಲ್ಲಿ ಉಚಿತ ಬರವಣಿಗೆ ಪುಸ್ತಕ ವಿತರಣಾ ಕಾರ್ಯಕ್ರಮವು ಇತ್ತೀಚೆಗೆ ಜರಗಿತು. ಕುಕ್ಕೇಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಅಶೋಕ್ ಪಾಣೂರುರವರ ವತಿಯಿಂದ ನಡೆದ 11ನೇ ವರ್ಷದ ಈ ಕಾರ್ಯಕ್ರಮದಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಬರವಣಿಗೆ ಪುಸ್ತಕ ಹಾಗೂ ಲೇಖನ ಸಾಮಾಗ್ರಿಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಹಳೇ ವಿದ್ಯಾರ್ಥಿ ಸಂದೀಪ್ ಮೆಂಡೋನ್ಸ ಮೈಕ್ ಹಾಗೂ ಸೌಂಡ್‌ ಸಿಸ್ಟಮ್ ಕೊಡುಗೆಯಾಗಿ ನೀಡಿದರು.

ವೇದಿಕೆಯಲ್ಲಿ ಎಸ್. ಡಿ.ಎಂ.ಸಿ.ಯ ಅಧ್ಯಕ್ಷರಾದ ಪ್ರಭಾಕರ, ಗ್ರಾಮ ಪಂಚಾಯತ್ ಸದಸ್ಯರಾದ ಪ್ರವೀತಾ, ನವೋದಯ ಬ್ಯಾಂಕ್‌ನ ವ್ಯವಸ್ಥಾಪಕರಾದ ನಿತೇಶ್, ಊರಿನ ಪ್ರಗತಿಪರ ಕೃಷಿಕರಾದ ಸ್ಟೀವನ್, ಶಾಲಾ ಮುಖ್ಯಶಿಕ್ಷಕಿ ಸವಿತಾರವರು ಉಪಸ್ಥಿತರಿದ್ದರು.

ಗೌರವ ಶಿಕ್ಷಕಿ ಸುಜಾತಾ ಸ್ವಾಗತಿಸಿ, ಅತಿಥಿ ಶಿಕ್ಷಕಿ ಮೋಹಿನಿ ವಂದಿಸಿದರು. ಸಹಶಿಕ್ಷಕರಾದ ಬಿ. ಟಿ. ಧನಂಜಯ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ವರ್ತಕರ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಬಂದಾರು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ದ.ಕ.ಜಿ.ಪಂ.ಹಿ. ಪ್ರಾ. ಕೊಡಿಯಾಲಬೈಲು ಶಾಲೆಯಲ್ಲಿ ಸಾಮಾಜಿಕ ಪರಿಶೋಧನಾ ಶಾಲಾ ಪೋಷಕರ ಸಭೆ

Suddi Udaya

ಬೆಳ್ತಂಗಡಿ :ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಕೊಯ್ಯೂರು: ಸೋಮಾವತಿ ನದಿ ಕಿನಾರೆಯಿಂದ ಅಕ್ರಮ ಮರಳು ಸಾಗಟ: ಬೆಳ್ತಂಗಡಿ ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಸ್ಥಳದಲ್ಲಿದ್ದ ರೂ. 23.56 ಲಕ್ಷ ಮೌಲ್ಯದ ವಾಹನ ಹಾಗೂ ಸೊತ್ತುಗಳ ವಶ

Suddi Udaya

ಕೊಕ್ಕಡ ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!