ಪೆರ್ಮುಡ: ಸ.ಹಿ.ಪ್ರಾ.ಶಾಲೆಯಲ್ಲಿ ಉಚಿತ ಬರವಣಿಗೆ ಪುಸ್ತಕ ವಿತರಣೆ

Suddi Udaya

ಪೆರ್ಮುಡ: ಸ.ಹಿ.ಪ್ರಾ.ಶಾಲೆ ಪೆರ್ಮುಡಲ್ಲಿ ಉಚಿತ ಬರವಣಿಗೆ ಪುಸ್ತಕ ವಿತರಣಾ ಕಾರ್ಯಕ್ರಮವು ಇತ್ತೀಚೆಗೆ ಜರಗಿತು. ಕುಕ್ಕೇಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಅಶೋಕ್ ಪಾಣೂರುರವರ ವತಿಯಿಂದ ನಡೆದ 11ನೇ ವರ್ಷದ ಈ ಕಾರ್ಯಕ್ರಮದಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಬರವಣಿಗೆ ಪುಸ್ತಕ ಹಾಗೂ ಲೇಖನ ಸಾಮಾಗ್ರಿಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಹಳೇ ವಿದ್ಯಾರ್ಥಿ ಸಂದೀಪ್ ಮೆಂಡೋನ್ಸ ಮೈಕ್ ಹಾಗೂ ಸೌಂಡ್‌ ಸಿಸ್ಟಮ್ ಕೊಡುಗೆಯಾಗಿ ನೀಡಿದರು.

ವೇದಿಕೆಯಲ್ಲಿ ಎಸ್. ಡಿ.ಎಂ.ಸಿ.ಯ ಅಧ್ಯಕ್ಷರಾದ ಪ್ರಭಾಕರ, ಗ್ರಾಮ ಪಂಚಾಯತ್ ಸದಸ್ಯರಾದ ಪ್ರವೀತಾ, ನವೋದಯ ಬ್ಯಾಂಕ್‌ನ ವ್ಯವಸ್ಥಾಪಕರಾದ ನಿತೇಶ್, ಊರಿನ ಪ್ರಗತಿಪರ ಕೃಷಿಕರಾದ ಸ್ಟೀವನ್, ಶಾಲಾ ಮುಖ್ಯಶಿಕ್ಷಕಿ ಸವಿತಾರವರು ಉಪಸ್ಥಿತರಿದ್ದರು.

ಗೌರವ ಶಿಕ್ಷಕಿ ಸುಜಾತಾ ಸ್ವಾಗತಿಸಿ, ಅತಿಥಿ ಶಿಕ್ಷಕಿ ಮೋಹಿನಿ ವಂದಿಸಿದರು. ಸಹಶಿಕ್ಷಕರಾದ ಬಿ. ಟಿ. ಧನಂಜಯ ಕಾರ್ಯಕ್ರಮ ನಿರೂಪಿಸಿದರು.

Leave a Comment

error: Content is protected !!