23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ: ಶ್ರೀ ನೇಮಿನಾಥ ಸ್ವಾಮಿ ಬಸದಿಯ ನೂತನ ಗೋಪುರದ ಶಿಲಾನ್ಯಾಸ

ಸುಲ್ಕೇರಿ : ಶ್ರೀ ನೇಮಿನಾಥ ಸ್ವಾಮಿ ಬಸದಿ ಜೀರ್ಣೋದ್ಧಾರಗೊಳ್ಳುತ್ತಿದ್ದು ಬಸದಿಯ ನೂತನ ಗೋಪುರದ ಶಿಲಾನ್ಯಾಸ ಸಮಾರಂಭ ಜು. 9 ರಂದು ಸುಲ್ಕೇರಿ ಬಸದಿಯಲ್ಲಿ ನಡೆಯಿತು.


ಪುರೋಹಿತರ ಧಾರ್ಮಿಕ ಪೂಜೆಗಳೊಂದಿಗೆ ಪ್ರಾರಂಭಗೊಂಡ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಕೆ.ಹರೀಶ್ ಕುಮಾರ್, ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರು, ಮೂಡಬಿದ್ರೆ ಎಕ್ಸ್ ಲೆಂಟ್ ಶಿಕ್ಷಣ ಸಂಸ್ಥೆಯ ಯುವರಾಜ ಜೈನ್, ನೂರಾಳ್ ಬೆಟ್ಟು ಜಯಧವಳದ ವಿಜಯ ಕುಮಾರ್ ಜೈನ್, ಮನ್ಮಥ ಕುಮಾರ್ ನೆಲ್ಲಿಕಾರು, ಸತೀಶ್ ಪಡಿವಾಳ್ ಪುತ್ತೂರು ಭಾಗವಹಿಸಿ ಬಸದಿಯ ಕೆಲಸ ಕಾರ್ಯಗಳಿಗೆ ಸಹಾಯ ಮಾಡುವುದರೊಂದಿಗೆ ಶುಭ ಕೋರಿದರು.


ಈ ಸಂದರ್ಭದಲ್ಲಿ ಗಣ್ಯರನ್ನು ಬಸದಿಯ ವತಿಯಿಂದ ಗೌರವಿಸಲಾಯಿತು.
ಆಡಳಿತ ಸಮಿತಿಯ‌ ಮೊಕ್ತೇಸರರಾದ ಎನ್.ರವಿರಾಜ ಹೆಗ್ಡೆ ನಾವರ ಗುತ್ತು ಮತ್ತು ಸಮಸ್ತ ಜೈನ ಭಾಂಧವರು ಭಾಗವಹಿಸಿದ್ದರು.

Related posts

ಶಿಬಾಜೆ ಶ್ರೀ ಮೊಂಟೆತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಸದಸ್ಯರ ನೇಮಕ

Suddi Udaya

ಮಾಜಿ ಶಾಸಕ ವಸಂತ ಬಂಗೇರ ಅಗಲುವಿಕೆಗೆ ಕಾಜೂರು ಸಮಿತಿಯಿಂದ ಸಂತಾಪ

Suddi Udaya

ಉಜಿರೆ ಎಸ್.ಡಿ.ಎಂ ರತ್ನಮಾನಸ : ಅಕ್ಷರ ಜ್ಞಾನ ಶಿಬಿರ ಸಂಪನ್ನ

Suddi Udaya

ಕೊಕ್ಕಡ ವಿಶ್ವ ಹಿಂದೂ ಪರಿಷತ್ ಭಜರಂಗದಳ ಘಟಕದ ನೂತನ ಪದಾಧಿಕಾರಿಗಳ ರಚನೆ

Suddi Udaya

ಲಿಂಗ ಸಮಾನತೆ ಮತ್ತು ಮಹಿಳೆಯರ ಸಬಲೀಕರಣ ಕುರಿತು ಡಿ. ವೀರೇಂದ್ರ ಹೆಗ್ಗಡೆಯವರು ವೀಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಧಾರೆ ಮಂಡನೆ

Suddi Udaya

ಪೆರೋಡಿತ್ತಾಯಕಟ್ಟೆ ಸ. ಉ. ಪ್ರಾ. ಶಾಲಾ ಮೂವರು ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!