25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ: ಶ್ರೀ ನೇಮಿನಾಥ ಸ್ವಾಮಿ ಬಸದಿಯ ನೂತನ ಗೋಪುರದ ಶಿಲಾನ್ಯಾಸ

ಸುಲ್ಕೇರಿ : ಶ್ರೀ ನೇಮಿನಾಥ ಸ್ವಾಮಿ ಬಸದಿ ಜೀರ್ಣೋದ್ಧಾರಗೊಳ್ಳುತ್ತಿದ್ದು ಬಸದಿಯ ನೂತನ ಗೋಪುರದ ಶಿಲಾನ್ಯಾಸ ಸಮಾರಂಭ ಜು. 9 ರಂದು ಸುಲ್ಕೇರಿ ಬಸದಿಯಲ್ಲಿ ನಡೆಯಿತು.


ಪುರೋಹಿತರ ಧಾರ್ಮಿಕ ಪೂಜೆಗಳೊಂದಿಗೆ ಪ್ರಾರಂಭಗೊಂಡ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಕೆ.ಹರೀಶ್ ಕುಮಾರ್, ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರು, ಮೂಡಬಿದ್ರೆ ಎಕ್ಸ್ ಲೆಂಟ್ ಶಿಕ್ಷಣ ಸಂಸ್ಥೆಯ ಯುವರಾಜ ಜೈನ್, ನೂರಾಳ್ ಬೆಟ್ಟು ಜಯಧವಳದ ವಿಜಯ ಕುಮಾರ್ ಜೈನ್, ಮನ್ಮಥ ಕುಮಾರ್ ನೆಲ್ಲಿಕಾರು, ಸತೀಶ್ ಪಡಿವಾಳ್ ಪುತ್ತೂರು ಭಾಗವಹಿಸಿ ಬಸದಿಯ ಕೆಲಸ ಕಾರ್ಯಗಳಿಗೆ ಸಹಾಯ ಮಾಡುವುದರೊಂದಿಗೆ ಶುಭ ಕೋರಿದರು.


ಈ ಸಂದರ್ಭದಲ್ಲಿ ಗಣ್ಯರನ್ನು ಬಸದಿಯ ವತಿಯಿಂದ ಗೌರವಿಸಲಾಯಿತು.
ಆಡಳಿತ ಸಮಿತಿಯ‌ ಮೊಕ್ತೇಸರರಾದ ಎನ್.ರವಿರಾಜ ಹೆಗ್ಡೆ ನಾವರ ಗುತ್ತು ಮತ್ತು ಸಮಸ್ತ ಜೈನ ಭಾಂಧವರು ಭಾಗವಹಿಸಿದ್ದರು.

Related posts

ಬೆಳ್ತಂಗಡಿ ಸೈಂಟ್ ಮಿಲಾಗ್ರಿಸ್ ಸೊಸೈಟಿ ವತಿಯಿಂದ ದಯಾ ವಿಶೇಷ ಶಾಲಾ ಮಕ್ಕಳಿಗೆ ಬೆಡ್ ಶೀಟ್, ಟವಲ್ ವಿತರಣೆ

Suddi Udaya

ಮದ್ದಡ್ಕ ರೀನು ಫೂಟ್ ವೆರ್ ನ ಅಂಗಡಿ ಮಾಲಕ ಸುಮೋದ್ ದಾಸ್ ಹೃದಯಾಘಾತದಿಂದ ನಿಧನ

Suddi Udaya

ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಹೃದಯಾಘಾತ: ನ್ಯಾಯತರ್ಪು ಕೊಡಿಯಡ್ಕ ತಿಮ್ಮಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಹಬ್ಬಗಳ ಆಚರಣಾ ಸಮಿತಿ ಅಕ್ಕಮಹಾದೇವಿ ಜಯಂತಿ ಆಚರಣೆ

Suddi Udaya

ಬಿ ಎಂ ಎಸ್ ರಿಕ್ಷಾ ಚಾಲಕ ಸದಸ್ಯರಿಗೆ ಕ್ಷೇಮ ನಿಧಿ ಯೋಜನೆ

Suddi Udaya

ಉಜಿರೆ ಹಳೆಪೇಟೆ ಮಸೀದಿಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya
error: Content is protected !!