April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ನಿಡ್ಲೆ ನಾಗೇಶ್ ಕುಮಾರ್ ಕೆ.ಎಂ ಅಭಿಮಾನಿ ಬಳಗದಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ, ಕೊಡೆ ಹಾಗೂ ಹಣ್ಣು ಹಂಪಲು ಸಸಿಗಳ ವಿತರಣೆ

ನಿಡ್ಲೆ: ನಾಗೇಶ್ ಕುಮಾರ್ ಕೆ.ಎಂ ಅಭಿಮಾನಿ ಬಳಗದ ವತಿಯಿಂದ ಸರಕಾರಿ ಪ್ರೌಢ ಶಾಲೆ, ಹಿರಿಯ ಪ್ರಾಥಮಿಕ ಶಾಲೆ ನಿಡ್ಲೆ ಹಾಗೂ ಅಂಗನವಾಡಿ ಕೇಂದ್ರ ನಿಡ್ಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆ ಹೊಕ್ಕಾಡಿಗೋಳಿ ಹಾಗೂ ಇಲ್ಲಿಯ ಅಂಗನವಾಡಿ ಕೇಂದ್ರಗಳಿಗೆ ಶಾಲಾ ಪಠ್ಯಕ್ಕೆ ಉಪಯೋಗವಾಗುವಂತಹ ಪುಸ್ತಕ, ಪೆನ್, ಪೆನ್ಸಿಲ್, ಕೊಡೆ ಹಾಗೂ ಹಣ್ಣು ಹಂಪಲು ಇನ್ನಿತರ ವಸ್ತುಗಳನ್ನು ಉಚಿತವಾಗಿ ಜು.10 ರಂದು ವಿತರಿಸಲಾಯಿತು.

ಇವರು ಹತ್ತು ಹಲವಾರು ಸಮಾಜಮುಖಿ ಕಾರ್ಯಗಳ ಮೂಲಕ ತಾಲೂಕಿನ ಗಮನ ಸೆಳೆಯುತ್ತಿರುವ ನಿಡ್ಲೆ ಗ್ರಾಮದ ಯುವ ಉದ್ಯಮಿ ಕೆ.ಎಂ ನಾಗೇಶ್ ಕುಮಾರ್ ಇವರು ಶೈಕ್ಷಣಿಕ ಸಾಮಾಜಿಕ ಕಾರ್ಯಗಳ ಮುಖೇನ ಬಡವರ ಪಾಲಿನ ಆಶಾಕಿರಣವಾಗಿದ್ದಾರೆ. ಇವರು ಸ್ವಾಮೀಪ್ರಸಾದ್ ಅಸೋಸಿಯೇಟ್ಸ್ ಸಂಸ್ಥೆಯಲ್ಲಿ ಹಲವಾರು ಜನರಿಗೆ ಉದ್ಯೋಗ ನೀಡಿ, ಬಡವರ ಪಾಲಿನ ಆಶಾಕಿರಣವಾಗಿದ್ದಾರೆ.


ಈ ಸಂದರ್ಭದಲ್ಲಿ ಆಯೋಜಕರಾದ ನಾಗೇಶ್ ಕುಮಾರ್, ಬೆಸ್ಟ್ ಪೌಂಡೇಶನ್ ಇದರ ಅಧ್ಯಕ್ಷ ರಕ್ಷಿತ್ ಶಿವರಾಂ, ಸುಧಾ ನಾಗೇಶ್ ಕುಮಾರ್ ಹಾಗೂ ನಾಗೇಶ್ ಕುಮಾರ್ ಅಭಿಮಾನಿ ಬಳಗದ ಉಸ್ತುವಾರಿಗಳಾದ ಉಮೇಶ್ ಬಂಗೇರ ಕಾಪಿನಡ್ಕ, ಅಶಿಪ್ ಐಡಿಯಲ್, ಧನುಷ್ ನಿಡ್ಲೆ ,ಅಶ್ವಿನ್ ಕಿರಣ್ ,ಹರಿಶ್ಚಂದ್ರ, ಗಣೇಶ್ ಪಿಜಿನಡ್ಕ, ಅಚ್ಯುತ್ ನಾಯ್ಕ, ಉಸ್ಮಾನ್ ಲಿಯೋ ಮೊಂತೆರೋ, ಆರಿಫ್ ಶಪ್ವಾನ್ ಹಾಗೂ ಕಲಂದರ್ ಎಂ ಎಚ್ ಉಪಸ್ಥಿತರಿದ್ದರು.

Related posts

ಕನ್ಯಾಡಿ: ಶ್ರೀ ರಾಮ‌ ನಾಮ ಸಪ್ತಾಹದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಭಜನಾ ಸೇವೆ

Suddi Udaya

ಮಾ.2: ಟೀಮ್ ದುರ್ಗಾನುಗ್ರಹ ಮುಗೇರಡ್ಕ, ನಮೋ ಬ್ರಿಗೇಡ್ ಮುಗೇರಡ್ಕ ಹಾಗೂ ಕಬಡ್ಡಿ ಅಸೊಸೀಯೇಶನ್ ಆಶ್ರಯದಲ್ಲಿ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಾಣಿ ಸೌಹಾರ್ದಕೋ ಆಪರೇಟಿವ್ ಸೊಸೈಟಿ ಮಹಾಸಭೆ

Suddi Udaya

ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಮುಂಜಾಗೃತ ಮಾಹಿತಿ

Suddi Udaya

ಕುಮಟಾ ನೆರೆಪೀಡಿತ ಪ್ರದೇಶಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತುರ್ತು ನೆರವು

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya
error: Content is protected !!