23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಮತ್ತು ಕುವೆಟ್ಟು ಗ್ರಾಮ ಸಮಿತಿಯ ತ್ರೈಮಾಸಿಕ ಸಭೆ ಹಾಗೂ ವನಮಹೋತ್ಸವ


ಓಡಿಲ್ನಾಳ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಮತ್ತು ಕುವೆಟ್ಟು ಗ್ರಾಮ ಸಮಿತಿ ಇದರ ತ್ರೈಮಾಸಿಕ ಸಭೆ ಹಾಗೂ ವನ ಮಹೋತ್ಸವ ಜು. 9 ರಂದು ಸಂಘದ ಅಧ್ಯಕ್ಷ ಗೋಪಾಲ್ ಗೌಡ ಇವರ ನೇತೃತ್ವದಲ್ಲಿ ರಾಘವೇಂದ್ರ ಗೌಡ ಇವರ ಮನೆಯಲ್ಲಿ ಜರಗಿತು.
ತಾಲೂಕು ಸಮಿತಿಯ ಉಪಾಧ್ಯಕ್ಷರಾದ ಕೃಷ್ಣಪ್ಪ ಗೌಡ ಸವಣಾಲು ಇವರು ಮಾತನಾಡಿ. ವಾಣಿ ಶಿಕ್ಷಣ ಸಂಸ್ಥೆ ಮತ್ತು ನೂತನ ಕಟ್ಟಡದ ಬಗ್ಗೆ ಸಭೆಗೆ ಮಾಹಿತಿ ನೀಡಿದರು. ಗೌಡ ಸಮಾಜದ ಮುಂದಿನ ದಿನಗಳಲ್ಲಿ ಮಾದರಿ ಸಮಾಜವನ್ನಾಗಿ ಬೆಳೆಸಲು ಸಹಕಾರ ನೀಡಿ ಎಂದರು. ತಾಲೂಕು ಸಮಿತಿಯ ಕೋಶಾಧಿಕಾರಿ ಬಾಲಕೃಷ್ಣ ಬಿರ್ಮೊಟ್ಟು ಸಸಿ ವಿತರಿಸಿ ಪರಿಸರದ ಬಗ್ಗೆ ತಿಳಿಸಿದರು.

ವೇದಿಕೆಯಲ್ಲಿ ಗೌರವಾಧ್ಯಕ್ಷರಾದ ಚೆನ್ನಪ್ಪ ಗೌಡ, ಶಿವಪ್ಪಗೌಡ, ಉಪಾಧ್ಯಕ್ಷ ಜನಾರ್ದನ ಗೌಡ, ಜೊತೆ ಕಾರ್ಯದರ್ಶಿ ಗಣೇಶ್ ಗೌಡ, ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಉಪಸಿತರಿದ್ದರು.
ಬೇಬಿ ಸಾನ್ವಿ ಪ್ರಾರ್ಥನೆಯೊಂದಿಗೆ ಪುರಂದರ ಗೌಡ ಸ್ವಾಗತಿಸಿ, ಪುರಂದರ. ಕೆ. ಕಾರ್ಯಕ್ರಮ ನಿರೂಪಿಸಿ. ಶ್ರೀಕಾಂತ್ ಧನ್ಯವಾದವಿತ್ತರು.

Related posts

ವಾಹನ ಡಿಕ್ಕಿ ಹೊಡೆದು ಅನಾಥವಾಗಿ ರಸ್ತೆಯಲ್ಲಿ ಬಿದ್ದವರನ್ನು ಆಸ್ಪತ್ರೆಗೆ ದಾಖಲಿಸಿದ ಸ್ಥಳೀಯರು

Suddi Udaya

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಗರ್ಡಾಡಿ ರೊನಾಲ್ಡ್ ಪ್ರಕಾಶ್ ಫೆರ್ನಾಂಡಿಸ್ ನಿಧನ

Suddi Udaya

ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ವಿವಿಧ ಕುಂದುಕೊರತೆಗಳ ಬಗ್ಗೆ ಚರ್ಚೆ

Suddi Udaya

ನೆರಿಯ: ಬಾಂಜಾರು ಶ್ರೀ ಮಹಾಗಣಪತಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ

Suddi Udaya

ಜೆಸಿಂತಾ ಡಿ ಸೋಜ ಅವರಿಗೆ ಉದ್ಯೋಗ ರತ್ನ ಪ್ರಶಸ್ತಿ: ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ಪ್ರಶಸ್ತಿಗಳ ಗರಿ

Suddi Udaya
error: Content is protected !!