22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಮತ್ತು ಕುವೆಟ್ಟು ಗ್ರಾಮ ಸಮಿತಿಯ ತ್ರೈಮಾಸಿಕ ಸಭೆ ಹಾಗೂ ವನಮಹೋತ್ಸವ


ಓಡಿಲ್ನಾಳ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಮತ್ತು ಕುವೆಟ್ಟು ಗ್ರಾಮ ಸಮಿತಿ ಇದರ ತ್ರೈಮಾಸಿಕ ಸಭೆ ಹಾಗೂ ವನ ಮಹೋತ್ಸವ ಜು. 9 ರಂದು ಸಂಘದ ಅಧ್ಯಕ್ಷ ಗೋಪಾಲ್ ಗೌಡ ಇವರ ನೇತೃತ್ವದಲ್ಲಿ ರಾಘವೇಂದ್ರ ಗೌಡ ಇವರ ಮನೆಯಲ್ಲಿ ಜರಗಿತು.
ತಾಲೂಕು ಸಮಿತಿಯ ಉಪಾಧ್ಯಕ್ಷರಾದ ಕೃಷ್ಣಪ್ಪ ಗೌಡ ಸವಣಾಲು ಇವರು ಮಾತನಾಡಿ. ವಾಣಿ ಶಿಕ್ಷಣ ಸಂಸ್ಥೆ ಮತ್ತು ನೂತನ ಕಟ್ಟಡದ ಬಗ್ಗೆ ಸಭೆಗೆ ಮಾಹಿತಿ ನೀಡಿದರು. ಗೌಡ ಸಮಾಜದ ಮುಂದಿನ ದಿನಗಳಲ್ಲಿ ಮಾದರಿ ಸಮಾಜವನ್ನಾಗಿ ಬೆಳೆಸಲು ಸಹಕಾರ ನೀಡಿ ಎಂದರು. ತಾಲೂಕು ಸಮಿತಿಯ ಕೋಶಾಧಿಕಾರಿ ಬಾಲಕೃಷ್ಣ ಬಿರ್ಮೊಟ್ಟು ಸಸಿ ವಿತರಿಸಿ ಪರಿಸರದ ಬಗ್ಗೆ ತಿಳಿಸಿದರು.

ವೇದಿಕೆಯಲ್ಲಿ ಗೌರವಾಧ್ಯಕ್ಷರಾದ ಚೆನ್ನಪ್ಪ ಗೌಡ, ಶಿವಪ್ಪಗೌಡ, ಉಪಾಧ್ಯಕ್ಷ ಜನಾರ್ದನ ಗೌಡ, ಜೊತೆ ಕಾರ್ಯದರ್ಶಿ ಗಣೇಶ್ ಗೌಡ, ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಉಪಸಿತರಿದ್ದರು.
ಬೇಬಿ ಸಾನ್ವಿ ಪ್ರಾರ್ಥನೆಯೊಂದಿಗೆ ಪುರಂದರ ಗೌಡ ಸ್ವಾಗತಿಸಿ, ಪುರಂದರ. ಕೆ. ಕಾರ್ಯಕ್ರಮ ನಿರೂಪಿಸಿ. ಶ್ರೀಕಾಂತ್ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಕರ್ನಾಟಕ ಗಮಕ ಕಲಾ ಪರಿಷತ್, ವತಿಯಿಂದ ‘ಮನೆ ಮನೆ ಗಮಕ’ ವಿನೂತನ ಕಾರ್ಯಕ್ರಮ

Suddi Udaya

ಲೋಕಸಭಾ ಚುನಾವಣೆಯಲ್ಲಿ ಕೆ. ಆರ್.ಎಸ್. ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಮನವಿ

Suddi Udaya

ಬೆಳ್ತಂಗಡಿ ಹಳೆಕೋಟೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಕೆ.ಎಸ್.ಆರ್ ಟಿ.ಸಿ ಬಸ್ಸು

Suddi Udaya

ನಾವರ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕುಲಾಲ್, ಕಾರ್ಯದರ್ಶಿಯಾಗಿ ರತ್ನಾಕರ ಹೆಚ್ ಆಯ್ಕೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಕುವೆಟ್ಟು ಗ್ರಾ.ಪಂ.ನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!