April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಇಂದಬೆಟ್ಟು : ಮಾತೃಶ್ರೀ ಮುಗೇರ ಸೇವಾ ಸಂಘದಿಂದ ಪುಸ್ತಕ ವಿತರಣೆ

ಇಂದಬೆಟ್ಟು : ಮಾತೃಶ್ರೀ ಮುಗೇರ ಸೇವಾ ಸಂಘ ಇಂದಬೆಟ್ಟು ಇದರ ವತಿಯಿಂದ 2023-24 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ನಡ, ನಾವೂರು, ಇಂದಬೆಟ್ಟು, ಮಿತ್ತಬಾಗಿಲು ಗ್ರಾಮದ ಮುಗೇರ ಸಮುದಾಯದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಸಮಾರಂಭವು ಜು. 9 ರಂದು ಸ.ಹಿ.ಪ್ರಾ.ಶಾಲೆ ದೇವನಾರಿ ಇಂದಬೆಟ್ಟುವಿನಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕೇಶವ ಬೈರೊಟ್ಟು ಇವರು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಇಂದಬೆಟ್ಟು ಗ್ರಾ.ಪಂ ಉಪಾಧ್ಯಕ್ಷೆ ಶ್ರೀಮತಿ ಆಶಾಲತಾ, ಮಾಜಿ ಜಿ.ಪಂ ಸದಸ್ಯೆ ಶ್ರೀಮತಿ ಸಿ.ಕೆ ಚಂದ್ರಕಲಾ, ಸಮುದಾಯದ ಮುಖಂಡರಾದ ವಿಜಯ ವಿಕ್ರಮ್ ರಾಮಕುಂಜ, ಕೊರಗಪ್ಪ ಅಳದಂಗಡಿ, ಸರಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿನ ಉಪನ್ಯಾಸಕರಾದ ಡಾ. ಕುಶಾಲಪ್ಪ ಕೊಯ್ಯೂರು, ಬಂಗಾಡಿ ಸಿ.ಎ ಬ್ಯಾಂಕ್ ನಿರ್ದೇಶಕರಾದ ರಘುನಾಥ್ ಕೊಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸುಮಾರು 50 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಲಾಯಿತು. ಸಂಘದ ಕಾರ್ಯದರ್ಶಿ ಸುಂದರ.ಎ ಇಂದಬೆಟ್ಟು ಪ್ರಾಸ್ತಾವಿಕ ಮಾತನಾಡಿ, ಅತಿಥಿಗಳನ್ನುಸ್ವಾಗತಿಸಿದರು. ಹರಿಣಾಕ್ಷಿ ಧನ್ಯವಾದವಿತ್ತರು. ಜಗದೀಶ್ ಕಕ್ಕಿಂಜೆ ಕಾರ್ಯಕ್ರಮ ನಿರೂಪಿಸಿದರು.

Related posts

ಜೆ ಡಿ ಎಸ್ ಅಭ್ಯರ್ಥಿಯಿಂದ ತಾಲೂಕಿನಲ್ಲಿ ಮತಯಾಚನೆ   

Suddi Udaya

ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ದಿವಿತ್ ದೇವಾಡಿಗ ಆಯ್ಕೆ

Suddi Udaya

ಮಾಲಾಡಿ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಿದ್ಯಾರ್ಥಿ ಸಂಘ ರಚನೆ

Suddi Udaya

ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕ ಸಾವು

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಸಾರಿ ಮೇಳ: ಸೀರೆಗಳ ಮೇಲೆ ಶೇ.50 ಡಿಸ್ಕೌಂಟ್: ಕೆಲವೇ ದಿನಗಳು ಮಾತ್ರ

Suddi Udaya
error: Content is protected !!