22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಇಂದಬೆಟ್ಟು : ಮಾತೃಶ್ರೀ ಮುಗೇರ ಸೇವಾ ಸಂಘದಿಂದ ಪುಸ್ತಕ ವಿತರಣೆ

ಇಂದಬೆಟ್ಟು : ಮಾತೃಶ್ರೀ ಮುಗೇರ ಸೇವಾ ಸಂಘ ಇಂದಬೆಟ್ಟು ಇದರ ವತಿಯಿಂದ 2023-24 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ನಡ, ನಾವೂರು, ಇಂದಬೆಟ್ಟು, ಮಿತ್ತಬಾಗಿಲು ಗ್ರಾಮದ ಮುಗೇರ ಸಮುದಾಯದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಸಮಾರಂಭವು ಜು. 9 ರಂದು ಸ.ಹಿ.ಪ್ರಾ.ಶಾಲೆ ದೇವನಾರಿ ಇಂದಬೆಟ್ಟುವಿನಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕೇಶವ ಬೈರೊಟ್ಟು ಇವರು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಇಂದಬೆಟ್ಟು ಗ್ರಾ.ಪಂ ಉಪಾಧ್ಯಕ್ಷೆ ಶ್ರೀಮತಿ ಆಶಾಲತಾ, ಮಾಜಿ ಜಿ.ಪಂ ಸದಸ್ಯೆ ಶ್ರೀಮತಿ ಸಿ.ಕೆ ಚಂದ್ರಕಲಾ, ಸಮುದಾಯದ ಮುಖಂಡರಾದ ವಿಜಯ ವಿಕ್ರಮ್ ರಾಮಕುಂಜ, ಕೊರಗಪ್ಪ ಅಳದಂಗಡಿ, ಸರಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿನ ಉಪನ್ಯಾಸಕರಾದ ಡಾ. ಕುಶಾಲಪ್ಪ ಕೊಯ್ಯೂರು, ಬಂಗಾಡಿ ಸಿ.ಎ ಬ್ಯಾಂಕ್ ನಿರ್ದೇಶಕರಾದ ರಘುನಾಥ್ ಕೊಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸುಮಾರು 50 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಲಾಯಿತು. ಸಂಘದ ಕಾರ್ಯದರ್ಶಿ ಸುಂದರ.ಎ ಇಂದಬೆಟ್ಟು ಪ್ರಾಸ್ತಾವಿಕ ಮಾತನಾಡಿ, ಅತಿಥಿಗಳನ್ನುಸ್ವಾಗತಿಸಿದರು. ಹರಿಣಾಕ್ಷಿ ಧನ್ಯವಾದವಿತ್ತರು. ಜಗದೀಶ್ ಕಕ್ಕಿಂಜೆ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳಾಲು ಶ್ರೀ.ಧ. ಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಎ.28 – ಮೇ1: ಮರೋಡಿ ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ,ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರಿಂದ ಆಮಂತ್ರಣ ಪತ್ರಿಕೆ ಬಿಡುಗಡೆಶ್ರೀ ದೈವ,ಶ್ರೀ ಕೊಡಮಣಿತ್ತಾಯ ,ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತು ಬ್ರಹ್ಮ ಬೈದರ್ಕಳ ಗರಡಿ

Suddi Udaya

ಬಳಂಜ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

Suddi Udaya

ಕಲ್ಮಂಜ : ಬೆರ್ಕೆಯಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

Suddi Udaya

ಕಟ್ಟಡ ಕಾರ್ಮಿಕರ ವೈದ್ಯಕೀಯ ಸಹಾಯಧನ ಹಾಗೂ ಅಪಘಾತ ಚಿಕಿತ್ಸಾ ವೆಚ್ಚದ ಮರುಪಾವತಿಯಲ್ಲಿರುವ ಅವ್ಯವಸ್ಥೆಯ ಬಗ್ಗೆ ಮತ್ತು ಕಾರ್ಮಿಕರ ಹೆಲ್ತ್ ಚೆಕಪ್‌ನ ಯೋಜನೆಯಲ್ಲಿ ಮಂಡಳಿಯ ಹಣ ದುರುಪಯೋಗ: ಕೂಡಲೇ ಕ್ರಮ ವಹಿಸುವಂತೆ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ರಿಗೆ ಮನವಿ

Suddi Udaya

ಬೆಳಾಲು ಶಿಲ್ಪಿ ಶಶಿಧರ ಆಚಾರ್ಯರಿಗೆ ಶಿಲ್ಪ ಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿ ಪ್ರಧಾನ

Suddi Udaya
error: Content is protected !!