25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ನಿಡ್ಲೆ ನಾಗೇಶ್ ಕುಮಾರ್ ಕೆ.ಎಂ ಅಭಿಮಾನಿ ಬಳಗದಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ, ಕೊಡೆ ಹಾಗೂ ಹಣ್ಣು ಹಂಪಲು ಸಸಿಗಳ ವಿತರಣೆ

ನಿಡ್ಲೆ: ನಾಗೇಶ್ ಕುಮಾರ್ ಕೆ.ಎಂ ಅಭಿಮಾನಿ ಬಳಗದ ವತಿಯಿಂದ ಸರಕಾರಿ ಪ್ರೌಢ ಶಾಲೆ, ಹಿರಿಯ ಪ್ರಾಥಮಿಕ ಶಾಲೆ ನಿಡ್ಲೆ ಹಾಗೂ ಅಂಗನವಾಡಿ ಕೇಂದ್ರ ನಿಡ್ಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆ ಹೊಕ್ಕಾಡಿಗೋಳಿ ಹಾಗೂ ಇಲ್ಲಿಯ ಅಂಗನವಾಡಿ ಕೇಂದ್ರಗಳಿಗೆ ಶಾಲಾ ಪಠ್ಯಕ್ಕೆ ಉಪಯೋಗವಾಗುವಂತಹ ಪುಸ್ತಕ, ಪೆನ್, ಪೆನ್ಸಿಲ್, ಕೊಡೆ ಹಾಗೂ ಹಣ್ಣು ಹಂಪಲು ಇನ್ನಿತರ ವಸ್ತುಗಳನ್ನು ಉಚಿತವಾಗಿ ಜು.10 ರಂದು ವಿತರಿಸಲಾಯಿತು.

ಇವರು ಹತ್ತು ಹಲವಾರು ಸಮಾಜಮುಖಿ ಕಾರ್ಯಗಳ ಮೂಲಕ ತಾಲೂಕಿನ ಗಮನ ಸೆಳೆಯುತ್ತಿರುವ ನಿಡ್ಲೆ ಗ್ರಾಮದ ಯುವ ಉದ್ಯಮಿ ಕೆ.ಎಂ ನಾಗೇಶ್ ಕುಮಾರ್ ಇವರು ಶೈಕ್ಷಣಿಕ ಸಾಮಾಜಿಕ ಕಾರ್ಯಗಳ ಮುಖೇನ ಬಡವರ ಪಾಲಿನ ಆಶಾಕಿರಣವಾಗಿದ್ದಾರೆ. ಇವರು ಸ್ವಾಮೀಪ್ರಸಾದ್ ಅಸೋಸಿಯೇಟ್ಸ್ ಸಂಸ್ಥೆಯಲ್ಲಿ ಹಲವಾರು ಜನರಿಗೆ ಉದ್ಯೋಗ ನೀಡಿ, ಬಡವರ ಪಾಲಿನ ಆಶಾಕಿರಣವಾಗಿದ್ದಾರೆ.


ಈ ಸಂದರ್ಭದಲ್ಲಿ ಆಯೋಜಕರಾದ ನಾಗೇಶ್ ಕುಮಾರ್, ಬೆಸ್ಟ್ ಪೌಂಡೇಶನ್ ಇದರ ಅಧ್ಯಕ್ಷ ರಕ್ಷಿತ್ ಶಿವರಾಂ, ಸುಧಾ ನಾಗೇಶ್ ಕುಮಾರ್ ಹಾಗೂ ನಾಗೇಶ್ ಕುಮಾರ್ ಅಭಿಮಾನಿ ಬಳಗದ ಉಸ್ತುವಾರಿಗಳಾದ ಉಮೇಶ್ ಬಂಗೇರ ಕಾಪಿನಡ್ಕ, ಅಶಿಪ್ ಐಡಿಯಲ್, ಧನುಷ್ ನಿಡ್ಲೆ ,ಅಶ್ವಿನ್ ಕಿರಣ್ ,ಹರಿಶ್ಚಂದ್ರ, ಗಣೇಶ್ ಪಿಜಿನಡ್ಕ, ಅಚ್ಯುತ್ ನಾಯ್ಕ, ಉಸ್ಮಾನ್ ಲಿಯೋ ಮೊಂತೆರೋ, ಆರಿಫ್ ಶಪ್ವಾನ್ ಹಾಗೂ ಕಲಂದರ್ ಎಂ ಎಚ್ ಉಪಸ್ಥಿತರಿದ್ದರು.

Related posts

ಮೀಯಾರು ಕೆಮ್ಮಟ್ಟೆಯಲ್ಲಿ ಎಸ್.ಕೆ.ಡಿ.ಆರ್.ಡಿ.ಪಿ ಟ್ರಸ್ಟ್ ವತಿಯಿಂದ ನೀರು ಉಳಿಸಿ ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ

Suddi Udaya

ದ.ಕ. ಜಿಲ್ಲಾ ತುಳು ಪರಿಷತ್ ನ ಉಪಾಧ್ಯಕ್ಷರಾಗಿ ಧರಣೇಂದ್ರ ಕುಮಾರ್, ಸದಸ್ಯರಾಗಿ ಇಸ್ಮಾಯಿಲ್ ಕೆ. ಆಯ್ಕೆ

Suddi Udaya

ಜು.12: ವೇಣೂರು ತುರ್ತು ಕಾಮಗಾರಿಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya

ನೋಡಿ ತಿಳಿ, ಮಾಡಿ ಕಲಿ: ಧರ್ಮಸ್ಥಳದಲ್ಲಿ ಎಸ್.ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿಶಿಷ್ಠ ರೀತಿಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಸೆ.21: ಧರ್ಮಸ್ಥಳದಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಮಹಾ ಸಮ್ಮಿಲನ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 552 ನೇ ಸೇವಾ ಯೋಜನೆ ಹಸ್ತಾಂತರ: ಬೆನ್ನುಮೂಳೆ ಮುರಿತಕ್ಕೊಳಗಾದವರಿಗೆ ಆಸರೆಯಾದ ರಾಜ ಕೇಸರಿ

Suddi Udaya
error: Content is protected !!