September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ನಿಡ್ಲೆ ನಾಗೇಶ್ ಕುಮಾರ್ ಕೆ.ಎಂ ಅಭಿಮಾನಿ ಬಳಗದಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ, ಕೊಡೆ ಹಾಗೂ ಹಣ್ಣು ಹಂಪಲು ಸಸಿಗಳ ವಿತರಣೆ

ನಿಡ್ಲೆ: ನಾಗೇಶ್ ಕುಮಾರ್ ಕೆ.ಎಂ ಅಭಿಮಾನಿ ಬಳಗದ ವತಿಯಿಂದ ಸರಕಾರಿ ಪ್ರೌಢ ಶಾಲೆ, ಹಿರಿಯ ಪ್ರಾಥಮಿಕ ಶಾಲೆ ನಿಡ್ಲೆ ಹಾಗೂ ಅಂಗನವಾಡಿ ಕೇಂದ್ರ ನಿಡ್ಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆ ಹೊಕ್ಕಾಡಿಗೋಳಿ ಹಾಗೂ ಇಲ್ಲಿಯ ಅಂಗನವಾಡಿ ಕೇಂದ್ರಗಳಿಗೆ ಶಾಲಾ ಪಠ್ಯಕ್ಕೆ ಉಪಯೋಗವಾಗುವಂತಹ ಪುಸ್ತಕ, ಪೆನ್, ಪೆನ್ಸಿಲ್, ಕೊಡೆ ಹಾಗೂ ಹಣ್ಣು ಹಂಪಲು ಇನ್ನಿತರ ವಸ್ತುಗಳನ್ನು ಉಚಿತವಾಗಿ ಜು.10 ರಂದು ವಿತರಿಸಲಾಯಿತು.

ಇವರು ಹತ್ತು ಹಲವಾರು ಸಮಾಜಮುಖಿ ಕಾರ್ಯಗಳ ಮೂಲಕ ತಾಲೂಕಿನ ಗಮನ ಸೆಳೆಯುತ್ತಿರುವ ನಿಡ್ಲೆ ಗ್ರಾಮದ ಯುವ ಉದ್ಯಮಿ ಕೆ.ಎಂ ನಾಗೇಶ್ ಕುಮಾರ್ ಇವರು ಶೈಕ್ಷಣಿಕ ಸಾಮಾಜಿಕ ಕಾರ್ಯಗಳ ಮುಖೇನ ಬಡವರ ಪಾಲಿನ ಆಶಾಕಿರಣವಾಗಿದ್ದಾರೆ. ಇವರು ಸ್ವಾಮೀಪ್ರಸಾದ್ ಅಸೋಸಿಯೇಟ್ಸ್ ಸಂಸ್ಥೆಯಲ್ಲಿ ಹಲವಾರು ಜನರಿಗೆ ಉದ್ಯೋಗ ನೀಡಿ, ಬಡವರ ಪಾಲಿನ ಆಶಾಕಿರಣವಾಗಿದ್ದಾರೆ.


ಈ ಸಂದರ್ಭದಲ್ಲಿ ಆಯೋಜಕರಾದ ನಾಗೇಶ್ ಕುಮಾರ್, ಬೆಸ್ಟ್ ಪೌಂಡೇಶನ್ ಇದರ ಅಧ್ಯಕ್ಷ ರಕ್ಷಿತ್ ಶಿವರಾಂ, ಸುಧಾ ನಾಗೇಶ್ ಕುಮಾರ್ ಹಾಗೂ ನಾಗೇಶ್ ಕುಮಾರ್ ಅಭಿಮಾನಿ ಬಳಗದ ಉಸ್ತುವಾರಿಗಳಾದ ಉಮೇಶ್ ಬಂಗೇರ ಕಾಪಿನಡ್ಕ, ಅಶಿಪ್ ಐಡಿಯಲ್, ಧನುಷ್ ನಿಡ್ಲೆ ,ಅಶ್ವಿನ್ ಕಿರಣ್ ,ಹರಿಶ್ಚಂದ್ರ, ಗಣೇಶ್ ಪಿಜಿನಡ್ಕ, ಅಚ್ಯುತ್ ನಾಯ್ಕ, ಉಸ್ಮಾನ್ ಲಿಯೋ ಮೊಂತೆರೋ, ಆರಿಫ್ ಶಪ್ವಾನ್ ಹಾಗೂ ಕಲಂದರ್ ಎಂ ಎಚ್ ಉಪಸ್ಥಿತರಿದ್ದರು.

Related posts

ನೆಲ್ಯಾಡಿ: ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಪುತ್ತೂರು ಧರ್ಮಾಧ್ಯಕ್ಷ ಗೀವರ್ಗೀಸ್ ಮಾರ್ ಮಕಾರಿಯೋಸ್ ಅವರಿಂದ ಪೂಜಾರ್ಪಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಲ್ಲಿ ವರ್ಷ ಕಾಮತ್ ರಿಂದ ಟೆಮ್ ದಿ ಟೈಮ್ ತರಬೇತಿ ಕಾರ್ಯಾಗಾರ

Suddi Udaya

ಉಜಿರೆ: ಪದ್ಮಶ್ರೀ ಎಂಟರ್‌ಪ್ರೈಸಸ್‌ನ ದಿನಚರಿ ಪುಸ್ತಕ ಬಿಡುಗಡೆ

Suddi Udaya

ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರರಾದ ಕೊಕ್ಕಡದ ಶ್ರೀಧರ ಗೌಡ ಕೆಂಗುಡೇಲುರವರಿಗೆ “ವಿಕ ಹಿರೋಸ್” ಪ್ರಶಸ್ತಿ

Suddi Udaya

ಗ್ರಾಮೀಣ ಪ್ರತಿಭೆ ಉತ್ತಮ‌ ಸಾಧನೆ, ಅಂಡಿಂಜೆಯ ದ್ವಿಶಾನ್ ಜೈನ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಇಳಂತಿಲ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ವೆಂಕಟ್ರಮಣ ಭಟ್, ಉಪಾಧ್ಯಕ್ಷರಾಗಿ ಉಮಾವತಿ ಆಯ್ಕೆ

Suddi Udaya
error: Content is protected !!