24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

ಉಜಿರೆ : “ಜನಸಂಖ್ಯೆ ನಿಯಂತ್ರಣದ ಹೊರತು ಅಭಿವೃದ್ಧಿ ಅಸಾಧ್ಯ, ಅಭಿವೃದ್ಧಿಯ ಮೂಲ ಬೇರು ಜನಸಂಖ್ಯೆ. ನಮಗಿರುವ ನೈಸರ್ಗಿಕ ಸಂಪನ್ಮೂಲಗಳು ಮಿತವಾಗಿದೆ, ಜನಸಂಖ್ಯೆ ಅಮಿತವಾಗಿದೆ ಅದನ್ನು ಮಿತಗೊಳಿಸುವ ಕಡೆಗಿರಲಿ ನಮ್ಮ ನಡೆ” ಎಂದು ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯ ನಿವೃತ್ತ ಪ್ರಾಂಶುಪಾಲರಾದ ಡಾ. ಅಂತೋನಿ ಟಿ. ಪಿ ಹೇಳಿದರು.


ಇವರು ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಜು.11 ರಂದು ನಡೆದ ‘ವಿಶ್ವ ಜನಸಂಖ್ಯಾ ದಿನ’ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಜನಸಂಖ್ಯಾ ನಿಯಂತ್ರಣದ ಕುರಿತಾಗಿ ಸಂಗೀತ, ನೃತ್ಯ ಹಾಗೂ ಕಿರು ಪ್ರಹಸನ ಪ್ರದರ್ಶಿಸಲಾಯಿತು.
ವೇದಿಕೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ಮತ್ತು ಶಿಕ್ಷಕಿ ಶಾಂಟಿ ಜಾರ್ಜ್ ಉಪಸ್ಥಿತರಿದ್ದರು.
ಶಿಕ್ಷಕಿ ಶೋಭಿತ ಸಂಯೋಜಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಇಶಿಕ.ಕೆ ಪ್ರಕಾಶ್ ನಿರೂಪಣೆ ಮತ್ತು ಸ್ವಾಗತಿಸಿ, ವಿದ್ಯಾರ್ಥಿ ತೇಜಸ್ ವಂದಿಸಿದರು.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಡಿ. 17: ಶ್ರೀ ಕ್ಷೇತ್ರ ಸೌತಡ್ಕದ ಗಣೇಶ ಸಭಾಭವನದಲ್ಲಿ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವ

Suddi Udaya

ಕಳಿಯ ಗ್ರಾ.ಪಂ. ವತಿಯಿಂದ ನ್ಯಾಯತರ್ಪು ಪರಿಮ ಬಳಿ ಉದ್ಯೋಗ ಖಾತರಿ ಯೋಜನೆಯಲ್ಲಿ ರಸ್ತೆ ಕಾಂಕ್ರೀಟಿಕರಣ

Suddi Udaya

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya

ನೆರಿಯ ಕುವೆತ್ತಿಲ್ ಎಂಬಲ್ಲಿ ಆಕಸ್ಮಿಕ ಬೆಂಕಿ ಅನಾಹುತ: ಅನಿಲ್ ಎಂಬವರ ಮನೆಗೆ ಸಂಪೂರ್ಣ ಹಾನಿ

Suddi Udaya

ಅರಸಿನಮಕ್ಕಿ : ಸೈನಿಕ ಕೆ. ಮಹಾಬಲ ಮುದ್ದಿಗೆಯವರಿಗೆ ನಾಗರಿಕರಿಂದ ಅಭಿನಂದನೆ

Suddi Udaya
error: Content is protected !!