22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

ಉಜಿರೆ : “ಜನಸಂಖ್ಯೆ ನಿಯಂತ್ರಣದ ಹೊರತು ಅಭಿವೃದ್ಧಿ ಅಸಾಧ್ಯ, ಅಭಿವೃದ್ಧಿಯ ಮೂಲ ಬೇರು ಜನಸಂಖ್ಯೆ. ನಮಗಿರುವ ನೈಸರ್ಗಿಕ ಸಂಪನ್ಮೂಲಗಳು ಮಿತವಾಗಿದೆ, ಜನಸಂಖ್ಯೆ ಅಮಿತವಾಗಿದೆ ಅದನ್ನು ಮಿತಗೊಳಿಸುವ ಕಡೆಗಿರಲಿ ನಮ್ಮ ನಡೆ” ಎಂದು ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯ ನಿವೃತ್ತ ಪ್ರಾಂಶುಪಾಲರಾದ ಡಾ. ಅಂತೋನಿ ಟಿ. ಪಿ ಹೇಳಿದರು.


ಇವರು ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಜು.11 ರಂದು ನಡೆದ ‘ವಿಶ್ವ ಜನಸಂಖ್ಯಾ ದಿನ’ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಜನಸಂಖ್ಯಾ ನಿಯಂತ್ರಣದ ಕುರಿತಾಗಿ ಸಂಗೀತ, ನೃತ್ಯ ಹಾಗೂ ಕಿರು ಪ್ರಹಸನ ಪ್ರದರ್ಶಿಸಲಾಯಿತು.
ವೇದಿಕೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ಮತ್ತು ಶಿಕ್ಷಕಿ ಶಾಂಟಿ ಜಾರ್ಜ್ ಉಪಸ್ಥಿತರಿದ್ದರು.
ಶಿಕ್ಷಕಿ ಶೋಭಿತ ಸಂಯೋಜಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಇಶಿಕ.ಕೆ ಪ್ರಕಾಶ್ ನಿರೂಪಣೆ ಮತ್ತು ಸ್ವಾಗತಿಸಿ, ವಿದ್ಯಾರ್ಥಿ ತೇಜಸ್ ವಂದಿಸಿದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಲಿಂಗ ಸೂಕ್ಷ್ಮತೆ ಅರಿವು ತರಬೇತಿ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಎ.13-15: ಪಡಂಗಡಿ ಪೆರಣಮಂಜ ಮೂಜಿಲ್ನಾಯ ಬ್ರಹ್ಮ ದೈವಸ್ಥಾನದ ಜಾತ್ರೋತ್ಸವ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾಗಿ ಪ್ರಕಾಶ್ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಂ.ಎಂ ದಯಾಕರ್ ಆಯ್ಕೆ

Suddi Udaya

ಮಾ.1: ಗ್ರಾ.ಪಂ. ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಕೈಗೆ ಕಪ್ಪು ಪಟ್ಟಿ ಧರಿಸಿ ವಿಭಿನ್ನ ಪ್ರತಿಭಟನೆ

Suddi Udaya

ಧರ್ಮಸ್ಥಳ ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!