23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

ಉಜಿರೆ : “ಜನಸಂಖ್ಯೆ ನಿಯಂತ್ರಣದ ಹೊರತು ಅಭಿವೃದ್ಧಿ ಅಸಾಧ್ಯ, ಅಭಿವೃದ್ಧಿಯ ಮೂಲ ಬೇರು ಜನಸಂಖ್ಯೆ. ನಮಗಿರುವ ನೈಸರ್ಗಿಕ ಸಂಪನ್ಮೂಲಗಳು ಮಿತವಾಗಿದೆ, ಜನಸಂಖ್ಯೆ ಅಮಿತವಾಗಿದೆ ಅದನ್ನು ಮಿತಗೊಳಿಸುವ ಕಡೆಗಿರಲಿ ನಮ್ಮ ನಡೆ” ಎಂದು ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯ ನಿವೃತ್ತ ಪ್ರಾಂಶುಪಾಲರಾದ ಡಾ. ಅಂತೋನಿ ಟಿ. ಪಿ ಹೇಳಿದರು.


ಇವರು ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಜು.11 ರಂದು ನಡೆದ ‘ವಿಶ್ವ ಜನಸಂಖ್ಯಾ ದಿನ’ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಜನಸಂಖ್ಯಾ ನಿಯಂತ್ರಣದ ಕುರಿತಾಗಿ ಸಂಗೀತ, ನೃತ್ಯ ಹಾಗೂ ಕಿರು ಪ್ರಹಸನ ಪ್ರದರ್ಶಿಸಲಾಯಿತು.
ವೇದಿಕೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ಮತ್ತು ಶಿಕ್ಷಕಿ ಶಾಂಟಿ ಜಾರ್ಜ್ ಉಪಸ್ಥಿತರಿದ್ದರು.
ಶಿಕ್ಷಕಿ ಶೋಭಿತ ಸಂಯೋಜಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಇಶಿಕ.ಕೆ ಪ್ರಕಾಶ್ ನಿರೂಪಣೆ ಮತ್ತು ಸ್ವಾಗತಿಸಿ, ವಿದ್ಯಾರ್ಥಿ ತೇಜಸ್ ವಂದಿಸಿದರು.

Related posts

ಎಕ್ಸಲೆಂಟ್ ಮೂಡಬಿದ್ರೆ ಆಶ್ರಯದಲ್ಲಿ ಜಾಗೃತಿ ಅಭಿಯಾನ

Suddi Udaya

ಧರ್ಮದಕಳ ಚಂದ್ರಶೇಖರ್ ಗೌಡರ ಮನೆಗೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ಕಾಪಿನಡ್ಕ ಶಾಲೆಯಲ್ಲಿ ಬುಲ್ ಬುಲ್ ದಳ ಉದ್ಘಾಟನೆ

Suddi Udaya

ಬೆಳ್ತಂಗಡಿ : ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ‘ಅಭಿನಂದನಂ’ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಕನ್ಯಾಡಿ : ಪಡ್ಪು- ಬೊಳಿಯೆಂಜಿ- ಮೂಡಬೆಟ್ಟು ರಸ್ತೆ ಅಭಿವೃದ್ಧಿಗೆ 3 ಕೋಟಿ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ಕೊಕ್ಕಡದಲ್ಲಿ ನಿಲ್ಲಿಸಿದ್ದ ಮಾರುತಿ 800 ಕಾರು ಕಳ್ಳತನ

Suddi Udaya
error: Content is protected !!