22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಜಿರೆ‌ ಕೊರಗಲ್ಲು ಸ್ವಾಮಿ ಕೊರಗಜ್ಜ ಚಪ್ಪರಕ್ಕೆ ಬೆಂಕಿ ಕೊಟ್ಟು ಆರಾಧನಾ ಕೇಂದ್ರಕ್ಕೆ ಹಾನಿ ಮಾಡಿದ ಆರೋಪ: ಐವರ ಮೇಲೆ ಪ್ರಕರಣ: ಓವ೯ರ ಬಂಧನ

ಬೆಳ್ತಂಗಡಿ: ಬಜಿರೆ‌ ಗ್ರಾಮದ ಕೊರಗಲ್ಲು ಸ್ವಾಮಿ ಕೊರಗಜ್ಜ ಚಪ್ಪರಕ್ಕೆ ಬೆಂಕಿ ಕೊಟ್ಟು ಆರಾಧನಾ ಕೇಂದ್ರಕ್ಕೆ ಹಾನಿ ಉಂಟು ಮಾಡಿದ ಆರೋಪದಲ್ಲಿ ವೇಣೂರು ಪೊಲೀಸರು ಐವರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರದೀಪ್ ಕುಮಾರ್ ಹೆಗ್ಡೆ ಅಧ್ಯಕ್ಷರು, ಕೊರಗಲ್ಲು ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು , ಇವರು‌ ನೀಡಿದ ದೂರಿನಲ್ಲಿ ‌ಏನೀದೆ..? :
ಬಜಿರೆ ಗ್ರಾಮದ ಬಾಡಾರು ಎಂಬಲ್ಲಿ ಸರಕಾರಿ ಜಮೀನಿನಲ್ಲಿ ಇದ್ದುದನ್ನು ಊರಿನ ಹತ್ತು ಸಮಸ್ತರು ಸೇರಿಕೊಂಡು ಆರಾಧಿಸಿಕೊಂಡು ಬರುತ್ತಿದ್ದು, ಸದ್ರಿ ಕೊರಗಜ್ಜ ಕಟ್ಟೆಯನ್ನು ಹರೀಶ್ ಮತ್ತು ಇತರರು ಸೇರಿಕೊಂಡು ಊರಿನ ಸಾರ್ವಜನಿಕ ಭಕ್ತಾಧಿಗಳಿಗೆ ತಿಳಿಸದೆ ತಮ್ಮ ಸ್ವಂತ ಸ್ಥಳಕ್ಕೆ ಕೊಂಡು ಹೋಗಿ ಪ್ರತಿಷ್ಠಾಪನೆ ಮಾಡಿದ್ದು, ತದನಂತರ ಡಾ. ರಾಜೇಶ್ ಮತ್ತಿತ್ತರರು ಜು.11 ರಂದು ವಿವಾದಿತ ಕೊರಗಜ್ಜ ಕಟ್ಟೆಯನ್ನು ಕೆಡವಿ ಹೊಸದಾಗಿ ಕೆಸರು ಕಲ್ಲು ಹಾಕಲು ಯತ್ನಿಸಿದ್ದು, ಆ ಸಮಯ ಪ್ರದೀಪ್ ಕುಮಾರ್ ಹೆಗ್ಡೆ ಮತ್ತು ಇತರ ಭಕ್ತಾಧಿಗಳು ಆಕ್ಷೇಪ ವ್ಯಕ್ತ ಪಡಿಸಿದ್ದರು .ಡಾ. ರಾಜೇಶ್ ರವರು ಅವರ ಸ್ವಂತ ಸ್ಥಳದಲ್ಲಿ ಪ್ರತಿಷ್ಠಾಪನೆ ಮಾಡಿದ ಬಳಿಕ ಹಳೆಯ ಕೊರಗಜ್ಜ ಕಟ್ಟೆಯನ್ನು ಪ್ರದೀಪ್ ಕುಮಾರ್ ಹೆಗ್ಡೆ ಮತ್ತು ಇತರ ಸಾರ್ವಜನಿಕ ಭಕ್ತರು ಚಪ್ಪರ ಹಾಕಿ ಆರಾಧಿಸಿಕೊಂಡು ಬರುತ್ತಿದ್ದುದಕ್ಕೆ ಜು. 11 ರಂದು ಬೆಳಿಗ್ಗೆ ಸುಮಾರು 10:30 ಗಂಟೆಗೆ ಹರೀಶ್ ಪೂಜಾರಿ ಎಂಬವರು ಇತರಾದ ಡಾ.ರಾಜೇಶ್ , ರಮೇಶ್ ಕುಡ್ಮೇರು, ಓಂ ಪ್ರಕಾಶ್, ಮತ್ತು ಪ್ರಶಾಂತ್ ರವರ ಕುಮ್ಮಕ್ಕಿನಿಂದ ಚಪ್ಪರಕ್ಕೆ ಬೆಂಕಿ ಕೊಟ್ಟು ಆರಾಧನಾ ಕೇಂದ್ರಕ್ಕೆ ಹಾನಿ ಉಂಟು ಮಾಡಿ ಮತ್ತು ಇತರ ಸಾರ್ವಜನಿಕ ಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿರುತ್ತಾರೆ ಎಂದು ಆರೋಪಿಸಿದ್ದರು.
ದೂರನ್ನು ಸ್ವೀಕರಿಸಿದ ವೇಣೂರು ಪೊಲೀಸರು ಠಾಣಾ ಅಕ್ರ 39/2023 ಕಲಂ: 295(A) ,436,109 ಜೊತೆಗೆ 34 ಐ.ಪಿ.ಸಿ ಯಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ . ಸ್ಥಳಕ್ಕೆ ಡಿವೈಎಸ್ಪಿ ಗಾನ ಕುಮಾರ್, ಬೆಳ್ತಂಗಡಿ ತಹಶೀಲ್ದಾರ್ ಸುರೇಶ್ ಕುಮಾರ್, ಎಸ್.ಐ ಸೌಮ್ಯ ಆಗಮಿಸಿ ಪರಿಶೀಲನೆ ನಡೆಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಹರೀಶ್ ಪೂಜಾರಿ ಅವರನ್ನು ಪೊಲೀಸರು ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Related posts

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ

Suddi Udaya

ಧರ್ಮಸ್ಥಳವನ್ನು ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ಗ್ರಾಮವೆಂದು ಸಚಿವ ಈಶ್ವರ ಖಂಡ್ರೆಯವರಿಂದ ಅಧಿಕೃತ ಘೋಷಣೆ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಮಂಚ ಗುರಿಪಳ್ಳ ಇವರಿಗೆ ವಾಟರ್ ಬೆಡ್ ಹಸ್ತಾಂತರ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ

Suddi Udaya

ಕರಾಟೆ ಪಂದ್ಯಾಟ: ಹೋಲಿ ರಿಡೀಮರ್ ಶಾಲೆಯ ವಿದ್ಯಾರ್ಥಿ ಶಮಂತ್ ತೃತೀಯ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ. ಆಪರೇಟಿವ್ ಸೊಸೈಟಿಯಲ್ಲಿ ಅಭಿನಂದನಾ ಕಾರ್ಯಕ್ರಮ ಹಾಗೂ ಗ್ರಾಹಕರ ಸಮಾಲೋಚನಾ ಸಭೆ

Suddi Udaya
error: Content is protected !!