September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಜಿರೆ‌ ಕೊರಗಲ್ಲು ಸ್ವಾಮಿ ಕೊರಗಜ್ಜ ಚಪ್ಪರಕ್ಕೆ ಬೆಂಕಿ ಕೊಟ್ಟು ಆರಾಧನಾ ಕೇಂದ್ರಕ್ಕೆ ಹಾನಿ ಮಾಡಿದ ಆರೋಪ: ಐವರ ಮೇಲೆ ಪ್ರಕರಣ: ಓವ೯ರ ಬಂಧನ

ಬೆಳ್ತಂಗಡಿ: ಬಜಿರೆ‌ ಗ್ರಾಮದ ಕೊರಗಲ್ಲು ಸ್ವಾಮಿ ಕೊರಗಜ್ಜ ಚಪ್ಪರಕ್ಕೆ ಬೆಂಕಿ ಕೊಟ್ಟು ಆರಾಧನಾ ಕೇಂದ್ರಕ್ಕೆ ಹಾನಿ ಉಂಟು ಮಾಡಿದ ಆರೋಪದಲ್ಲಿ ವೇಣೂರು ಪೊಲೀಸರು ಐವರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರದೀಪ್ ಕುಮಾರ್ ಹೆಗ್ಡೆ ಅಧ್ಯಕ್ಷರು, ಕೊರಗಲ್ಲು ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು , ಇವರು‌ ನೀಡಿದ ದೂರಿನಲ್ಲಿ ‌ಏನೀದೆ..? :
ಬಜಿರೆ ಗ್ರಾಮದ ಬಾಡಾರು ಎಂಬಲ್ಲಿ ಸರಕಾರಿ ಜಮೀನಿನಲ್ಲಿ ಇದ್ದುದನ್ನು ಊರಿನ ಹತ್ತು ಸಮಸ್ತರು ಸೇರಿಕೊಂಡು ಆರಾಧಿಸಿಕೊಂಡು ಬರುತ್ತಿದ್ದು, ಸದ್ರಿ ಕೊರಗಜ್ಜ ಕಟ್ಟೆಯನ್ನು ಹರೀಶ್ ಮತ್ತು ಇತರರು ಸೇರಿಕೊಂಡು ಊರಿನ ಸಾರ್ವಜನಿಕ ಭಕ್ತಾಧಿಗಳಿಗೆ ತಿಳಿಸದೆ ತಮ್ಮ ಸ್ವಂತ ಸ್ಥಳಕ್ಕೆ ಕೊಂಡು ಹೋಗಿ ಪ್ರತಿಷ್ಠಾಪನೆ ಮಾಡಿದ್ದು, ತದನಂತರ ಡಾ. ರಾಜೇಶ್ ಮತ್ತಿತ್ತರರು ಜು.11 ರಂದು ವಿವಾದಿತ ಕೊರಗಜ್ಜ ಕಟ್ಟೆಯನ್ನು ಕೆಡವಿ ಹೊಸದಾಗಿ ಕೆಸರು ಕಲ್ಲು ಹಾಕಲು ಯತ್ನಿಸಿದ್ದು, ಆ ಸಮಯ ಪ್ರದೀಪ್ ಕುಮಾರ್ ಹೆಗ್ಡೆ ಮತ್ತು ಇತರ ಭಕ್ತಾಧಿಗಳು ಆಕ್ಷೇಪ ವ್ಯಕ್ತ ಪಡಿಸಿದ್ದರು .ಡಾ. ರಾಜೇಶ್ ರವರು ಅವರ ಸ್ವಂತ ಸ್ಥಳದಲ್ಲಿ ಪ್ರತಿಷ್ಠಾಪನೆ ಮಾಡಿದ ಬಳಿಕ ಹಳೆಯ ಕೊರಗಜ್ಜ ಕಟ್ಟೆಯನ್ನು ಪ್ರದೀಪ್ ಕುಮಾರ್ ಹೆಗ್ಡೆ ಮತ್ತು ಇತರ ಸಾರ್ವಜನಿಕ ಭಕ್ತರು ಚಪ್ಪರ ಹಾಕಿ ಆರಾಧಿಸಿಕೊಂಡು ಬರುತ್ತಿದ್ದುದಕ್ಕೆ ಜು. 11 ರಂದು ಬೆಳಿಗ್ಗೆ ಸುಮಾರು 10:30 ಗಂಟೆಗೆ ಹರೀಶ್ ಪೂಜಾರಿ ಎಂಬವರು ಇತರಾದ ಡಾ.ರಾಜೇಶ್ , ರಮೇಶ್ ಕುಡ್ಮೇರು, ಓಂ ಪ್ರಕಾಶ್, ಮತ್ತು ಪ್ರಶಾಂತ್ ರವರ ಕುಮ್ಮಕ್ಕಿನಿಂದ ಚಪ್ಪರಕ್ಕೆ ಬೆಂಕಿ ಕೊಟ್ಟು ಆರಾಧನಾ ಕೇಂದ್ರಕ್ಕೆ ಹಾನಿ ಉಂಟು ಮಾಡಿ ಮತ್ತು ಇತರ ಸಾರ್ವಜನಿಕ ಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿರುತ್ತಾರೆ ಎಂದು ಆರೋಪಿಸಿದ್ದರು.
ದೂರನ್ನು ಸ್ವೀಕರಿಸಿದ ವೇಣೂರು ಪೊಲೀಸರು ಠಾಣಾ ಅಕ್ರ 39/2023 ಕಲಂ: 295(A) ,436,109 ಜೊತೆಗೆ 34 ಐ.ಪಿ.ಸಿ ಯಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ . ಸ್ಥಳಕ್ಕೆ ಡಿವೈಎಸ್ಪಿ ಗಾನ ಕುಮಾರ್, ಬೆಳ್ತಂಗಡಿ ತಹಶೀಲ್ದಾರ್ ಸುರೇಶ್ ಕುಮಾರ್, ಎಸ್.ಐ ಸೌಮ್ಯ ಆಗಮಿಸಿ ಪರಿಶೀಲನೆ ನಡೆಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಹರೀಶ್ ಪೂಜಾರಿ ಅವರನ್ನು ಪೊಲೀಸರು ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Related posts

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ಕಾರ್ಯಕ್ರಮ

Suddi Udaya

2024 ಫೆಬ್ರವರಿ ತಿಂಗಳಲ್ಲಿ ವೇಣೂರು ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

Suddi Udaya

ಕೊಯ್ಯೂರು ಪಂಚದುರ್ಗ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಮೇಲಂತಬೆಟ್ಟು ಕೊಡ ಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿನಿ ಹಸ್ತವಿ ಪ್ರಥಮ ಸ್ಥಾನ

Suddi Udaya

ಪೆರಾಡಿ ಬಿಜೆಪಿ ಶಕ್ತಿಕೇಂದ್ರದ ಬೂತ್ ಸಮಿತಿಯ ನೂತನ ಅದ್ಯಕ್ಷರಾಗಿ ರವಿ ಕುಲಾಲ್ , ಕಾರ್ಯದರ್ಶಿಯಾಗಿ ವಿಶ್ವನಾಥ ಶೆಟ್ಟಿ

Suddi Udaya
error: Content is protected !!