32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹತೆಗೊಳಿಸಿರುವುದಕ್ಕೆ ಖಂಡನೆ: ಬೆಳ್ತಂಗಡಿ ಮೂರು ಮಾರ್ಗದ ಬಳಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮೌನ ಪ್ರತಿಭಟನೆ

ಬೆಳ್ತಂಗಡಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ, ( ನಗರ ಮತ್ತು ಗ್ರಾಮೀಣ) ವತಿಯಿಂದ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನದ ಅನರ್ಹತೆಯನ್ನು ಖಂಡಿಸಿ , ಬೆಳ್ತಂಗಡಿ ಮೂರು ಮಾರ್ಗದ ಬಳಿ ಮೌನ ಪ್ರತಿಭಟನೆಯು ಜು.12ರಂದು ನಡೆಯಿತು.

ಮಾಜಿ ಸಚಿವ ಕೆ ಗಂಗಾಧರ ಗೌಡ ಮಾತನಾಡಿ “ಭಾರತವನ್ನು ಒಗ್ಗೂಡಿಸುವ ಉದ್ದೇಶಕ್ಕಾಗಿ ರಾಹುಲ್ ಗಾಂಧಿಯವರು ದೇಶದ ಉದ್ದಗಲಕ್ಕೂ ನಡೆಸಿದ ಪಾದಯಾತ್ರೆಯ ಯಶಸ್ಸನ್ನು ಸಹಿಸದ ಕೇಂದ್ರ ಸರಕಾರ,ಹಳೆ ಪ್ರಕರಣವನ್ನು ಎತ್ತಿಕೊಂಡು ಕೇಸು ದಾಖಲಿಸಿ ಇಡೀ ವ್ಯವಸ್ಥೆಗಳನ್ನೇ ಕೈಗೊಂಬೆಯಾಗಿಸಿ ಅವರ ಸದಸ್ಯತ್ವ ರದ್ದು ಪಡಿಸಿದೆ.ಕೀಳು ರಾಜಕೀಯದ ಮೂಲಕ ಕಾಂಗ್ರೆಸ್ ಹಾಗೂ ಇಂದಿರಾ ಗಾಂಧಿ ಕುಟುಂಬವನ್ನು ನಾಶ ಮಾಡುವ ಬಿಜೆಪಿಯವರ ಯಾವುದೇ ಪ್ರಯತ್ನಗಳು ಸಫಲವಾಗದಾಗ ಇಂತಹ ದುಷ್ಟ ಯೋಚನೆಗಳನ್ನು ಮಾಡುತ್ತಿರುವುದು ವಿಪರ್ಯಾಸವಾಗಿದೆ ಎಂದರು.


ಮಾಜಿ ಶಾಸಕ ಕೆ ವಸಂತ ಬಂಗೇರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಶೈಲೇಶ್ ಕು‌ಮಾರ್, ರಂಜನ್ ಜಿ.ಗೌಡ, ಕೆ.ಪಿ‌.ಸಿ.ಸಿ ಸದಸ್ಯರುಗಳಾದ ಮೋಹನ ಶೆಟ್ಟಿಗಾರ್, ಕೇಶವ ಗೌಡ, ಪಕ್ಷದ ಮುಖಂಡರುಗಳಾದ ಲೋಕೇಶ್ವರಿ ವಿನಯ ಚಂದ್ರ, ಇ.ಸುಂದರ ಗೌಡ,ಅಭಿನಂದನ್ ಹರೀಶ್,ಉಷಾ ಶರತ್,ಎ.ಸಿ. ಮ್ಯಾಥ್ಯೂ,ಅಶ್ರಫ್ ನೆರಿಯ,ಸಲೀಂ ಗುರುವಾಯನಕೆರೆ, ಮೆಹಬೂಬ್,ಬಿ.ಕೆ. ವಸಂತ್,ಜಗದೀಶ್ ಡಿ., ಹಾಗೂ ಇತರರು ಉಪಸ್ಥಿತರಿದ್ದರು.
ಒಂದು ಗಂಟೆ ಕಾಲ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಮೌನ ಪ್ರತಿಭಟನೆ ನಡೆಸಿದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಕಡಿರುದ್ಯಾವರದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಆಟಿಡೊಂಜಿ ದಿನ

Suddi Udaya

ಕನ್ಯಾಡಿ ಗ್ರಾಮದ ಪಾರ್ನಡ್ಕ ದಲ್ಲಿ ದಿ| ರಾಜೇಂದ್ರ ಎಸ್ ಸುರಕ್ಕ್ಯೆಗುತ್ತು ಇವರ ಸ್ಮರಣಾರ್ಥ ಬಸ್ ತಂಗುದಾಣ ಉದ್ಘಾಟನೆ

Suddi Udaya

ಮಡಂತ್ಯಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ 35ನೇ ವರ್ಷದ ಮೊಸರು ಕುಡಿಕೆ ಉತ್ಸವದ ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಅಧ್ಯಕ್ಷರಾಗಿ ಪ್ರಶಾಂತ್ ಎಂ. ಪಾರೆಂಕಿ ಆಯ್ಕೆ

Suddi Udaya

ಕಾಂಗ್ರೆಸ್‌ ಕಾರ್ಯಕರ್ತರಾದ ಜೋಜಿ ಕಳೆಂಜ ಹಾಗೂ ಗಂಡಿಬಾಗಿಲಿನ ಅಜಿತ್ ಪಿ.ಎಮ್ ರವರು ಬಿಜೆಪಿ ಸೇರ್ಪಡೆ

Suddi Udaya
error: Content is protected !!