32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹತೆಗೊಳಿಸಿರುವುದಕ್ಕೆ ಖಂಡನೆ: ಬೆಳ್ತಂಗಡಿ ಮೂರು ಮಾರ್ಗದ ಬಳಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮೌನ ಪ್ರತಿಭಟನೆ

ಬೆಳ್ತಂಗಡಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ, ( ನಗರ ಮತ್ತು ಗ್ರಾಮೀಣ) ವತಿಯಿಂದ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನದ ಅನರ್ಹತೆಯನ್ನು ಖಂಡಿಸಿ , ಬೆಳ್ತಂಗಡಿ ಮೂರು ಮಾರ್ಗದ ಬಳಿ ಮೌನ ಪ್ರತಿಭಟನೆಯು ಜು.12ರಂದು ನಡೆಯಿತು.

ಮಾಜಿ ಸಚಿವ ಕೆ ಗಂಗಾಧರ ಗೌಡ ಮಾತನಾಡಿ “ಭಾರತವನ್ನು ಒಗ್ಗೂಡಿಸುವ ಉದ್ದೇಶಕ್ಕಾಗಿ ರಾಹುಲ್ ಗಾಂಧಿಯವರು ದೇಶದ ಉದ್ದಗಲಕ್ಕೂ ನಡೆಸಿದ ಪಾದಯಾತ್ರೆಯ ಯಶಸ್ಸನ್ನು ಸಹಿಸದ ಕೇಂದ್ರ ಸರಕಾರ,ಹಳೆ ಪ್ರಕರಣವನ್ನು ಎತ್ತಿಕೊಂಡು ಕೇಸು ದಾಖಲಿಸಿ ಇಡೀ ವ್ಯವಸ್ಥೆಗಳನ್ನೇ ಕೈಗೊಂಬೆಯಾಗಿಸಿ ಅವರ ಸದಸ್ಯತ್ವ ರದ್ದು ಪಡಿಸಿದೆ.ಕೀಳು ರಾಜಕೀಯದ ಮೂಲಕ ಕಾಂಗ್ರೆಸ್ ಹಾಗೂ ಇಂದಿರಾ ಗಾಂಧಿ ಕುಟುಂಬವನ್ನು ನಾಶ ಮಾಡುವ ಬಿಜೆಪಿಯವರ ಯಾವುದೇ ಪ್ರಯತ್ನಗಳು ಸಫಲವಾಗದಾಗ ಇಂತಹ ದುಷ್ಟ ಯೋಚನೆಗಳನ್ನು ಮಾಡುತ್ತಿರುವುದು ವಿಪರ್ಯಾಸವಾಗಿದೆ ಎಂದರು.


ಮಾಜಿ ಶಾಸಕ ಕೆ ವಸಂತ ಬಂಗೇರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಶೈಲೇಶ್ ಕು‌ಮಾರ್, ರಂಜನ್ ಜಿ.ಗೌಡ, ಕೆ.ಪಿ‌.ಸಿ.ಸಿ ಸದಸ್ಯರುಗಳಾದ ಮೋಹನ ಶೆಟ್ಟಿಗಾರ್, ಕೇಶವ ಗೌಡ, ಪಕ್ಷದ ಮುಖಂಡರುಗಳಾದ ಲೋಕೇಶ್ವರಿ ವಿನಯ ಚಂದ್ರ, ಇ.ಸುಂದರ ಗೌಡ,ಅಭಿನಂದನ್ ಹರೀಶ್,ಉಷಾ ಶರತ್,ಎ.ಸಿ. ಮ್ಯಾಥ್ಯೂ,ಅಶ್ರಫ್ ನೆರಿಯ,ಸಲೀಂ ಗುರುವಾಯನಕೆರೆ, ಮೆಹಬೂಬ್,ಬಿ.ಕೆ. ವಸಂತ್,ಜಗದೀಶ್ ಡಿ., ಹಾಗೂ ಇತರರು ಉಪಸ್ಥಿತರಿದ್ದರು.
ಒಂದು ಗಂಟೆ ಕಾಲ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಮೌನ ಪ್ರತಿಭಟನೆ ನಡೆಸಿದರು.

Related posts

ಬೆಳ್ತಂಗಡಿ: ಅಪಘಾತ ಪ್ರಕರಣ: ಬಸ್ ಚಾಲಕನಿಗೆ ಶಿಕ್ಷೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಧರ್ಮಸ್ಥಳ ಸಿಎ ಬ್ಯಾಂಕಿಗೆ ಸತತ 3 ನೇ ಬಾರಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಟೀಮ್ ನವ ಭಾರತ್ ಬೆಳ್ತಂಗಡಿ ಆಶ್ರಯದಲ್ಲಿ ದಿವಂಗತ ತುಷಾರ್ ಕೆ ಇವರ ಸ್ಮರಣಾರ್ಥ ತಾಲೂಕು ಮಟ್ಟದ ಹೊನಲ ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ನಾರಾವಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮ್ಯಾನೇಜರ್ ಸುಧೀರ್ ಎಸ್.ಪಿ ಬೆಳ್ತಂಗಡಿ ಶಾಖೆಗೆ ವರ್ಗಾವಣೆ: ಗ್ರಾಹಕರು ಹಾಗೂ ಸಿಬ್ಬಂದಿಗಳಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಮೊಗ್ರು : ಮುಗೇರಡ್ಕ ಅಲೆಕ್ಕಿ ಜೈ ಶ್ರೀ ರಾಮ ಶಿಶುಮಂದಿರ ಆಶ್ರಯದಲ್ಲಿ ನಡೆದ ರೀಲ್ಸ್ ರಂಗೋಲಿ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya
error: Content is protected !!