22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹತೆಗೊಳಿಸಿರುವುದಕ್ಕೆ ಖಂಡನೆ: ಬೆಳ್ತಂಗಡಿ ಮೂರು ಮಾರ್ಗದ ಬಳಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮೌನ ಪ್ರತಿಭಟನೆ

ಬೆಳ್ತಂಗಡಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ, ( ನಗರ ಮತ್ತು ಗ್ರಾಮೀಣ) ವತಿಯಿಂದ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನದ ಅನರ್ಹತೆಯನ್ನು ಖಂಡಿಸಿ , ಬೆಳ್ತಂಗಡಿ ಮೂರು ಮಾರ್ಗದ ಬಳಿ ಮೌನ ಪ್ರತಿಭಟನೆಯು ಜು.12ರಂದು ನಡೆಯಿತು.

ಮಾಜಿ ಸಚಿವ ಕೆ ಗಂಗಾಧರ ಗೌಡ ಮಾತನಾಡಿ “ಭಾರತವನ್ನು ಒಗ್ಗೂಡಿಸುವ ಉದ್ದೇಶಕ್ಕಾಗಿ ರಾಹುಲ್ ಗಾಂಧಿಯವರು ದೇಶದ ಉದ್ದಗಲಕ್ಕೂ ನಡೆಸಿದ ಪಾದಯಾತ್ರೆಯ ಯಶಸ್ಸನ್ನು ಸಹಿಸದ ಕೇಂದ್ರ ಸರಕಾರ,ಹಳೆ ಪ್ರಕರಣವನ್ನು ಎತ್ತಿಕೊಂಡು ಕೇಸು ದಾಖಲಿಸಿ ಇಡೀ ವ್ಯವಸ್ಥೆಗಳನ್ನೇ ಕೈಗೊಂಬೆಯಾಗಿಸಿ ಅವರ ಸದಸ್ಯತ್ವ ರದ್ದು ಪಡಿಸಿದೆ.ಕೀಳು ರಾಜಕೀಯದ ಮೂಲಕ ಕಾಂಗ್ರೆಸ್ ಹಾಗೂ ಇಂದಿರಾ ಗಾಂಧಿ ಕುಟುಂಬವನ್ನು ನಾಶ ಮಾಡುವ ಬಿಜೆಪಿಯವರ ಯಾವುದೇ ಪ್ರಯತ್ನಗಳು ಸಫಲವಾಗದಾಗ ಇಂತಹ ದುಷ್ಟ ಯೋಚನೆಗಳನ್ನು ಮಾಡುತ್ತಿರುವುದು ವಿಪರ್ಯಾಸವಾಗಿದೆ ಎಂದರು.


ಮಾಜಿ ಶಾಸಕ ಕೆ ವಸಂತ ಬಂಗೇರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಶೈಲೇಶ್ ಕು‌ಮಾರ್, ರಂಜನ್ ಜಿ.ಗೌಡ, ಕೆ.ಪಿ‌.ಸಿ.ಸಿ ಸದಸ್ಯರುಗಳಾದ ಮೋಹನ ಶೆಟ್ಟಿಗಾರ್, ಕೇಶವ ಗೌಡ, ಪಕ್ಷದ ಮುಖಂಡರುಗಳಾದ ಲೋಕೇಶ್ವರಿ ವಿನಯ ಚಂದ್ರ, ಇ.ಸುಂದರ ಗೌಡ,ಅಭಿನಂದನ್ ಹರೀಶ್,ಉಷಾ ಶರತ್,ಎ.ಸಿ. ಮ್ಯಾಥ್ಯೂ,ಅಶ್ರಫ್ ನೆರಿಯ,ಸಲೀಂ ಗುರುವಾಯನಕೆರೆ, ಮೆಹಬೂಬ್,ಬಿ.ಕೆ. ವಸಂತ್,ಜಗದೀಶ್ ಡಿ., ಹಾಗೂ ಇತರರು ಉಪಸ್ಥಿತರಿದ್ದರು.
ಒಂದು ಗಂಟೆ ಕಾಲ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಮೌನ ಪ್ರತಿಭಟನೆ ನಡೆಸಿದರು.

Related posts

ನೆರಿಯ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ನೀಲಯ್ಯ ಮಲೆಕುಡಿಯ ನಿಧನ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಲಾರಿ: ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕುಕ್ಕಾವು ಸೇತುವೆ ಬಳಿ ಧ್ಯಾನಸಕ್ತ ಸದಾಶಿವನ 12 ಅಡಿ ಎತ್ತರದ ಪ್ರತಿಮೆ ಲೋಕಾರ್ಪಣೆ

Suddi Udaya

ಸುದ್ದಿ ಉದಯ ದೀಪಾವಳಿ ವಿಶೇಷಾಂಕ- 2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌.ಡಿ ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಸಹಕಾರಿ ಕ್ಷೇತ್ರದ ಅಪ್ರತಿಮ ಸಾಧಕ ಪೆರಾಡಿ ಸೊಸೈಟಿ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣರವರಿಗೆ ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿ ಪ್ರದಾನ

Suddi Udaya

“ಒಂದೇ ಭಾರತ ಒಂದೇ ತುರ್ತು ಕರೆ-112” ಸಹಾಯವಾಣಿ ಪ್ರಾರಂಭ

Suddi Udaya
error: Content is protected !!