September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹತೆಗೊಳಿಸಿರುವುದಕ್ಕೆ ಖಂಡನೆ: ಬೆಳ್ತಂಗಡಿ ಮೂರು ಮಾರ್ಗದ ಬಳಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮೌನ ಪ್ರತಿಭಟನೆ

ಬೆಳ್ತಂಗಡಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ, ( ನಗರ ಮತ್ತು ಗ್ರಾಮೀಣ) ವತಿಯಿಂದ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನದ ಅನರ್ಹತೆಯನ್ನು ಖಂಡಿಸಿ , ಬೆಳ್ತಂಗಡಿ ಮೂರು ಮಾರ್ಗದ ಬಳಿ ಮೌನ ಪ್ರತಿಭಟನೆಯು ಜು.12ರಂದು ನಡೆಯಿತು.

ಮಾಜಿ ಸಚಿವ ಕೆ ಗಂಗಾಧರ ಗೌಡ ಮಾತನಾಡಿ “ಭಾರತವನ್ನು ಒಗ್ಗೂಡಿಸುವ ಉದ್ದೇಶಕ್ಕಾಗಿ ರಾಹುಲ್ ಗಾಂಧಿಯವರು ದೇಶದ ಉದ್ದಗಲಕ್ಕೂ ನಡೆಸಿದ ಪಾದಯಾತ್ರೆಯ ಯಶಸ್ಸನ್ನು ಸಹಿಸದ ಕೇಂದ್ರ ಸರಕಾರ,ಹಳೆ ಪ್ರಕರಣವನ್ನು ಎತ್ತಿಕೊಂಡು ಕೇಸು ದಾಖಲಿಸಿ ಇಡೀ ವ್ಯವಸ್ಥೆಗಳನ್ನೇ ಕೈಗೊಂಬೆಯಾಗಿಸಿ ಅವರ ಸದಸ್ಯತ್ವ ರದ್ದು ಪಡಿಸಿದೆ.ಕೀಳು ರಾಜಕೀಯದ ಮೂಲಕ ಕಾಂಗ್ರೆಸ್ ಹಾಗೂ ಇಂದಿರಾ ಗಾಂಧಿ ಕುಟುಂಬವನ್ನು ನಾಶ ಮಾಡುವ ಬಿಜೆಪಿಯವರ ಯಾವುದೇ ಪ್ರಯತ್ನಗಳು ಸಫಲವಾಗದಾಗ ಇಂತಹ ದುಷ್ಟ ಯೋಚನೆಗಳನ್ನು ಮಾಡುತ್ತಿರುವುದು ವಿಪರ್ಯಾಸವಾಗಿದೆ ಎಂದರು.


ಮಾಜಿ ಶಾಸಕ ಕೆ ವಸಂತ ಬಂಗೇರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಶೈಲೇಶ್ ಕು‌ಮಾರ್, ರಂಜನ್ ಜಿ.ಗೌಡ, ಕೆ.ಪಿ‌.ಸಿ.ಸಿ ಸದಸ್ಯರುಗಳಾದ ಮೋಹನ ಶೆಟ್ಟಿಗಾರ್, ಕೇಶವ ಗೌಡ, ಪಕ್ಷದ ಮುಖಂಡರುಗಳಾದ ಲೋಕೇಶ್ವರಿ ವಿನಯ ಚಂದ್ರ, ಇ.ಸುಂದರ ಗೌಡ,ಅಭಿನಂದನ್ ಹರೀಶ್,ಉಷಾ ಶರತ್,ಎ.ಸಿ. ಮ್ಯಾಥ್ಯೂ,ಅಶ್ರಫ್ ನೆರಿಯ,ಸಲೀಂ ಗುರುವಾಯನಕೆರೆ, ಮೆಹಬೂಬ್,ಬಿ.ಕೆ. ವಸಂತ್,ಜಗದೀಶ್ ಡಿ., ಹಾಗೂ ಇತರರು ಉಪಸ್ಥಿತರಿದ್ದರು.
ಒಂದು ಗಂಟೆ ಕಾಲ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಮೌನ ಪ್ರತಿಭಟನೆ ನಡೆಸಿದರು.

Related posts

ವಿಧಾನಪರಿಷತ್ ಉಪಚುನಾವಣೆ: ಮತದಾರರ ಪಟ್ಟಿಯಲ್ಲಿ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರಿಗೆ ಮತದಾನದ ಅವಕಾಶವಿಲ್ಲ

Suddi Udaya

ನಡ: ಪ್ರಗತಿಪರ ಕೃಷಿಕ ಫ್ರಾನ್ಸಿಸ್ ಮೊರಾಸ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ : ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಂದಾಯ ಇಲಾಖೆ ಮತ್ತು ಬೆಳ್ತಂಗಡಿ ತಾ.ಪಂ. ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಕೊಯ್ಯೂರು ಪ್ರಾ.ಕೃ.ಪ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.157 ಕೋಟಿ ವಾರ್ಷಿಕ ವ್ಯವಹಾರ, ರೂ.61.70ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 10.25 ಡಿವಿಡೆಂಟ್

Suddi Udaya
error: Content is protected !!