25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹತೆಗೊಳಿಸಿರುವುದಕ್ಕೆ ಖಂಡನೆ: ಬೆಳ್ತಂಗಡಿ ಮೂರು ಮಾರ್ಗದ ಬಳಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮೌನ ಪ್ರತಿಭಟನೆ

ಬೆಳ್ತಂಗಡಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ, ( ನಗರ ಮತ್ತು ಗ್ರಾಮೀಣ) ವತಿಯಿಂದ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನದ ಅನರ್ಹತೆಯನ್ನು ಖಂಡಿಸಿ , ಬೆಳ್ತಂಗಡಿ ಮೂರು ಮಾರ್ಗದ ಬಳಿ ಮೌನ ಪ್ರತಿಭಟನೆಯು ಜು.12ರಂದು ನಡೆಯಿತು.

ಮಾಜಿ ಸಚಿವ ಕೆ ಗಂಗಾಧರ ಗೌಡ ಮಾತನಾಡಿ “ಭಾರತವನ್ನು ಒಗ್ಗೂಡಿಸುವ ಉದ್ದೇಶಕ್ಕಾಗಿ ರಾಹುಲ್ ಗಾಂಧಿಯವರು ದೇಶದ ಉದ್ದಗಲಕ್ಕೂ ನಡೆಸಿದ ಪಾದಯಾತ್ರೆಯ ಯಶಸ್ಸನ್ನು ಸಹಿಸದ ಕೇಂದ್ರ ಸರಕಾರ,ಹಳೆ ಪ್ರಕರಣವನ್ನು ಎತ್ತಿಕೊಂಡು ಕೇಸು ದಾಖಲಿಸಿ ಇಡೀ ವ್ಯವಸ್ಥೆಗಳನ್ನೇ ಕೈಗೊಂಬೆಯಾಗಿಸಿ ಅವರ ಸದಸ್ಯತ್ವ ರದ್ದು ಪಡಿಸಿದೆ.ಕೀಳು ರಾಜಕೀಯದ ಮೂಲಕ ಕಾಂಗ್ರೆಸ್ ಹಾಗೂ ಇಂದಿರಾ ಗಾಂಧಿ ಕುಟುಂಬವನ್ನು ನಾಶ ಮಾಡುವ ಬಿಜೆಪಿಯವರ ಯಾವುದೇ ಪ್ರಯತ್ನಗಳು ಸಫಲವಾಗದಾಗ ಇಂತಹ ದುಷ್ಟ ಯೋಚನೆಗಳನ್ನು ಮಾಡುತ್ತಿರುವುದು ವಿಪರ್ಯಾಸವಾಗಿದೆ ಎಂದರು.


ಮಾಜಿ ಶಾಸಕ ಕೆ ವಸಂತ ಬಂಗೇರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಶೈಲೇಶ್ ಕು‌ಮಾರ್, ರಂಜನ್ ಜಿ.ಗೌಡ, ಕೆ.ಪಿ‌.ಸಿ.ಸಿ ಸದಸ್ಯರುಗಳಾದ ಮೋಹನ ಶೆಟ್ಟಿಗಾರ್, ಕೇಶವ ಗೌಡ, ಪಕ್ಷದ ಮುಖಂಡರುಗಳಾದ ಲೋಕೇಶ್ವರಿ ವಿನಯ ಚಂದ್ರ, ಇ.ಸುಂದರ ಗೌಡ,ಅಭಿನಂದನ್ ಹರೀಶ್,ಉಷಾ ಶರತ್,ಎ.ಸಿ. ಮ್ಯಾಥ್ಯೂ,ಅಶ್ರಫ್ ನೆರಿಯ,ಸಲೀಂ ಗುರುವಾಯನಕೆರೆ, ಮೆಹಬೂಬ್,ಬಿ.ಕೆ. ವಸಂತ್,ಜಗದೀಶ್ ಡಿ., ಹಾಗೂ ಇತರರು ಉಪಸ್ಥಿತರಿದ್ದರು.
ಒಂದು ಗಂಟೆ ಕಾಲ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಮೌನ ಪ್ರತಿಭಟನೆ ನಡೆಸಿದರು.

Related posts

ಕುವೆಟ್ಟು :ಶ್ರೀ ಗುರುನಾರಾಯಣ‌ ಸ್ವಾಮಿ ಸೇವಾ‌ ಸಂಘ ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ, ಕುವೆಟ್ಟು ಗ್ರಾಮ ಸಮಿತಿಯಿಂದ  ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ 2ನೇ ಬಾರಿ ಎನ್.ಎ.ಬಿ.ಹೆಚ್ ಪ್ರಮಾಣಪತ್ರ

Suddi Udaya

ಮದ್ದಡ್ಕ ರಾಮ ಭಜನಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆ

Suddi Udaya

ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಗೆ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 7 ರ‍್ಯಾಂಕ್‌ಗಳ ದಾಖಲೆ

Suddi Udaya

ಉಜಿರೆಯಲ್ಲಿ ಡಾ| ಸೂರಜ್ ರವರ ಡೆಂಟಲ್ ಕ್ಲಿನಿಕ್ ಶುಭಾರಂಭ

Suddi Udaya

ನಿಡ್ಲೆ ಸರ್ಕಾರಿ ಪ್ರೌಢ ಶಾಲೆಯ ನೂತನ ಕಟ್ಟಡದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya
error: Content is protected !!