23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹತೆಗೊಳಿಸಿರುವುದಕ್ಕೆ ಖಂಡನೆ: ಬೆಳ್ತಂಗಡಿ ಮೂರು ಮಾರ್ಗದ ಬಳಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮೌನ ಪ್ರತಿಭಟನೆ

ಬೆಳ್ತಂಗಡಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ, ( ನಗರ ಮತ್ತು ಗ್ರಾಮೀಣ) ವತಿಯಿಂದ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನದ ಅನರ್ಹತೆಯನ್ನು ಖಂಡಿಸಿ , ಬೆಳ್ತಂಗಡಿ ಮೂರು ಮಾರ್ಗದ ಬಳಿ ಮೌನ ಪ್ರತಿಭಟನೆಯು ಜು.12ರಂದು ನಡೆಯಿತು.

ಮಾಜಿ ಸಚಿವ ಕೆ ಗಂಗಾಧರ ಗೌಡ ಮಾತನಾಡಿ “ಭಾರತವನ್ನು ಒಗ್ಗೂಡಿಸುವ ಉದ್ದೇಶಕ್ಕಾಗಿ ರಾಹುಲ್ ಗಾಂಧಿಯವರು ದೇಶದ ಉದ್ದಗಲಕ್ಕೂ ನಡೆಸಿದ ಪಾದಯಾತ್ರೆಯ ಯಶಸ್ಸನ್ನು ಸಹಿಸದ ಕೇಂದ್ರ ಸರಕಾರ,ಹಳೆ ಪ್ರಕರಣವನ್ನು ಎತ್ತಿಕೊಂಡು ಕೇಸು ದಾಖಲಿಸಿ ಇಡೀ ವ್ಯವಸ್ಥೆಗಳನ್ನೇ ಕೈಗೊಂಬೆಯಾಗಿಸಿ ಅವರ ಸದಸ್ಯತ್ವ ರದ್ದು ಪಡಿಸಿದೆ.ಕೀಳು ರಾಜಕೀಯದ ಮೂಲಕ ಕಾಂಗ್ರೆಸ್ ಹಾಗೂ ಇಂದಿರಾ ಗಾಂಧಿ ಕುಟುಂಬವನ್ನು ನಾಶ ಮಾಡುವ ಬಿಜೆಪಿಯವರ ಯಾವುದೇ ಪ್ರಯತ್ನಗಳು ಸಫಲವಾಗದಾಗ ಇಂತಹ ದುಷ್ಟ ಯೋಚನೆಗಳನ್ನು ಮಾಡುತ್ತಿರುವುದು ವಿಪರ್ಯಾಸವಾಗಿದೆ ಎಂದರು.


ಮಾಜಿ ಶಾಸಕ ಕೆ ವಸಂತ ಬಂಗೇರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಶೈಲೇಶ್ ಕು‌ಮಾರ್, ರಂಜನ್ ಜಿ.ಗೌಡ, ಕೆ.ಪಿ‌.ಸಿ.ಸಿ ಸದಸ್ಯರುಗಳಾದ ಮೋಹನ ಶೆಟ್ಟಿಗಾರ್, ಕೇಶವ ಗೌಡ, ಪಕ್ಷದ ಮುಖಂಡರುಗಳಾದ ಲೋಕೇಶ್ವರಿ ವಿನಯ ಚಂದ್ರ, ಇ.ಸುಂದರ ಗೌಡ,ಅಭಿನಂದನ್ ಹರೀಶ್,ಉಷಾ ಶರತ್,ಎ.ಸಿ. ಮ್ಯಾಥ್ಯೂ,ಅಶ್ರಫ್ ನೆರಿಯ,ಸಲೀಂ ಗುರುವಾಯನಕೆರೆ, ಮೆಹಬೂಬ್,ಬಿ.ಕೆ. ವಸಂತ್,ಜಗದೀಶ್ ಡಿ., ಹಾಗೂ ಇತರರು ಉಪಸ್ಥಿತರಿದ್ದರು.
ಒಂದು ಗಂಟೆ ಕಾಲ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಮೌನ ಪ್ರತಿಭಟನೆ ನಡೆಸಿದರು.

Related posts

ಕಳೆಂಜ: ಮನೆ ಪಂಚಾಂಗ ದೂಡಿ ಹಾಕಿದ ಪ್ರಕರಣ: ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಪ್ರಕರಣ ದಾಖಲು

Suddi Udaya

ಪುದುವೆಟ್ಟು ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವನಮಹೋತ್ಸವ

Suddi Udaya

ಮಲ್ ಜಅ ದಅವಾ ಕೇಂದ್ರದಿಂದ ಒಂದು ಸಾವಿರ ಅರ್ಹ ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya

ಬಜಿರೆ: ಹೊಸಪಟ್ಣ ನಿವಾಸಿ ಸಂಜೀವ ಹೆಗ್ಡೆ ನಿಧನ

Suddi Udaya

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ಸಾರ್ಟಿಸಿ ಬಸ್ ಮಂಜೂರು – ಶಾಸಕರ ಶಿಫಾರಸ್ಸಿನಂತೆ ಬಸ್ಸು ಮಂಜೂರಾಗಿದ್ದರೆ, ಅವರು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ- ಬಸ್ಸು ಮಂಜೂರು ಮಾಡಿಸಿದ್ದು, ನಾನೇ ಎಂದು ನಾನು ಪ್ರಮಾಣ ಮಾಡುತ್ತೇನೆ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಕೆ. ವಸಂತ ಬಂಗೇರ ಸವಾಲು

Suddi Udaya

ಉಜಿರೆ ಪಂಚಾಯತ್ ನ ತ್ಯಾಜ್ಯ ನಿರ್ವಹಣಾ ಘಟಕ ಹಾಗೂ ಗ್ರಂಥಾಲಯಕ್ಕೆ ಎನ್ನೆಸ್ಸೆಸ್ ಸ್ವಯಂ ಸೇವಕರ ಭೇಟಿ

Suddi Udaya
error: Content is protected !!