22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭ

ಬೆಳ್ತಂಗಡಿ :ವಾಣಿ ಆಂಗ್ಲ ಮಾಧ್ಯಮ ಶಾಲೆ ಹಳೆಕೋಟೆ ಬೆಳ್ತಂಗಡಿ 2023-24 ರ ವರ್ಷದ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭ ಜು.12 ರಂದು ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಇವರ ಘನ ಅಧ್ಯಕ್ಷತೆಯಲ್ಲಿ ನೆರವೇರಿತು.
ವಾಣಿ ಶಿಕ್ಷಣ ಸಂಸ್ಥೆಯ ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷರಾದ ನಾರಾಯಣ ಗೌಡ ಇವರು ದೀಪವನ್ನು ಬೆಳಗಿಸಿ ವಿದ್ಯಾರ್ಥಿಗಳಿಗೆ ಎಳವೆಯಲ್ಲಿಯೇ ಪ್ರಜಾಪ್ರಭುತ್ವ ವ್ಯವಸ್ಥೆಯ ಅರಿವನ್ನು ನೀಡುವುದರಿಂದ ಪ್ರಜಾಪ್ರಭುತ್ವದ ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಲು ಸಹಕಾರಿಯಾಗಬಲ್ಲದು, ಶಿಸ್ತು, ಕಠಿಣ ಪರಿಶ್ರಮ, ನಿರ್ದಿಷ್ಟ ಗುರಿ ವಿದ್ಯಾರ್ಥಿ ಜೀವನದಲ್ಲಿ ಸಾಗುವಂತಾಗಬೇಕು ಎಂದು ಹಿತವಚನ ನೀಡಿದರು.
ಮುಖ್ಯ ಅತಿಥಿಗಳಾಗಿ ವಾಣಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಜೊತೆ ಕಾರ್ಯದರ್ಶಿ ಕೆ. ಎಮ್. ಶ್ರೀನಾಥ್ ಭಾಗವಹಿಸಿ ನೂತನ ಮಂತ್ರಿಮಂಡಲ ಪದಾಧಿಕಾರಿಗಳಿಗೆ ಶುಭಹಾರೈಸಿದರು.
ಸಮಾರಂಭದಲ್ಲಿ ಬೆಂಗಳೂರು ದಂತ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರಥಮ ಸ್ಥಾನದೊಂದಿಗೆ ಬಿ.ಡಿ.ಎಸ್ ಪದವಿಯನ್ನು ಪೂರೈಸಿದ ಶಾಲಾ ಹಳೆವಿದ್ಯಾರ್ಥಿನಿ ಡಾ. ಅನುದೀಕ್ಷಾ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಳೆದ ಶಾಲಾ ದಿನಗಳನ್ನು ನೆನಪಿಸಿಕೊಳ್ಳುತ್ತಾ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಸಮಾರಂಭದ ಅಧ್ಯಕ್ಷರಾದ ಮುಖ್ಯೋಪಾಧ್ಯಾಯರು ಲಕ್ಷ್ಮೀನಾರಾಯಣ ಕೆ. ಇವರು ಪ್ರಮಾಣ ವಚನ ಭೋದಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯ ಪರಿಕಲ್ಪನೆ ಹಾಗೂ ಎಳವೆಯಲ್ಲಿ ನಾಯಕತ್ವ ಗುಣಗಳನ್ನು ತಮ್ಮಲ್ಲಿ ಅಳವಡಿಸಿಕೊಳ್ಳಲು ನೂತನ ಮಂತ್ರಿಮಂಡಲದ ವ್ಯವಸ್ಥೆಯು ಸಹಕಾರಿಯಾಗುತ್ತದೆ ವಿದ್ಯಾರ್ಥಿಗಳು ಇದರ ಸಂಪೂರ್ಣ ಪ್ರಯೋಜನವನ್ನು ಪಡೆಯುವಂತಾಗಬೇಕೆಂದು ಆಶಯವನ್ನು ವ್ಯಕ್ತಪಡಿಸಿದರು.


ವೇದಿಕೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿಯಾದ ಪ್ರಸಾದ್ ಕುಮಾರ್, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ, ಶ್ರೀಮತಿ ಸುಹಾಸಿನಿ. ಎ, ಮಂತ್ರಿಮಂಡಲದ ರಚನೆಯ ನಿರ್ವಹಣೆ ಮಾಡಿದ ಶಿಕ್ಷಕರಾದ ಹರಿಪ್ರಸಾದ್ ಮತ್ತು ಶ್ರೀಮತಿ ಮಮತಾ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಸಮಾರಂಭ ಪ್ರಾರಂಭಗೊಂಡಿತು. 10ನೇ ತರಗತಿ ವಿಧ್ಯಾರ್ಥಿನಿ ಕು. ತೃಪ್ತಿ, ಸ್ವಾಗತಿಸಿ,10ನೇ ತರಗತಿ ವಿಧ್ಯಾರ್ಥಿನಿ ಕು. ಅಭಿಜ್ಞಾ ವಂದನಾರ್ಪಣೆಗೈದರು. 9ನೇ ತರಗತಿ ವಿಧ್ಯಾರ್ಥಿನಿ ಕು. ಮಾನ್ಯ ಕಾರ್ಯಕ್ರಮ ನಿರೂಪಿಸಿದರು.

Related posts

ಕಲ್ಮಂಜ: ಮೃತ್ಯುಂಜಯ-ನೇತ್ರಾವತಿ ನದಿಯ ಸಂಗಮ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಕರ್ನಾಟಕ ದೇವಸ್ಥಾನ- ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಜಿಲ್ಲಾ ಮಟ್ಟದ ಪರಿಷತ್ತು

Suddi Udaya

ಕುತ್ಲೂರು ಉ.ಸ.ಹಿ. ಪ್ರಾಥಮಿಕ ಶಾಲೆಯಲ್ಲಿ “ಚಿಣ್ಣರ ಅಂಗಳ” ಉದ್ಘಾಟನೆ

Suddi Udaya

ಬೆಳ್ತಂಗಡಿ ಸುವರ್ಣ ಆರ್ಕೇಡ್‌ನಲ್ಲಿ ರಾಜ್‌ಎಂಟರ್‌ಪ್ರೈಸಸ್ ಸೈಬರ್ ಸೆಂಟರ್ ಶುಭಾರಂಭ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಉಚಿತ ವೈದ್ಯಕೀಯ ದಂತ ಚಿಕಿತ್ಸೆ ಶಿಬಿರ

Suddi Udaya

ಬೆಳ್ತಂಗಡಿ: ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ ಡ್ರೋನ್‌ ತರಬೇತಿಗೆ ಅರ್ಜಿ ಆಹ್ವಾನ

Suddi Udaya
error: Content is protected !!