April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.17: ಧರ್ಮಸ್ಥಳದಲ್ಲಿ ಪುರಾಣ ಕಾವ್ಯ ವಾಚನ-ಪ್ರವಚನ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಐವತ್ತೆರಡನೇ ವರ್ಷದ ಪುರಾಣ ಕಾವ್ಯವಾಚನ – ಪ್ರವಚನದ ಅಂಗವಾಗಿ ಜು.17 ಸೋಮವಾರದಿಂದ ಎರಡು ತಿಂಗಳ ಕಾಲ ಕುಮಾರ ವಾಲ್ಮೀಕಿ ವಿರಚಿತ “ತೊರವೆ ರಾಮಾಯಣ”ದ ಬಗ್ಗೆ ವಾಚನ-ಪ್ರವಚನ ನಡೆಯಲಿದೆ.

ದೇವಸ್ಥಾನದ ಎದುರು ಇರುವ ಪ್ರಚನ ಮಂಟಪದಲ್ಲಿ ಪ್ರತಿದಿನ ಸಂಜೆ ಗಂಟೆ 6.30 ರಿಂದ 8 ಗಂಟೆ ವರೆಗೆ ಪುರಾಣ ವಾಚನ-ಪ್ರವಚನ ನಡೆಯಲಿದೆ.

ಹಿರಿಯ ಯಕ್ಷಗಾನ ಕಲಾವಿದ ಪೆರುವಡಿ ನಾರಾಯಣ ಭಟ್ ಜು. 17 ರಂದು ಸೋಮವಾರ ಸಂಜೆ ಗಂಟೆ 5.30ಕ್ಕೆ ಕಾರ್ಯಕ್ರಮವನ್ನು ಉದ್ಘಾಟಿಸುವರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು.

ಖ್ಯಾತ ಸಾಹಿತಿ ಬಿ.ಎಲ್. ನಾಗರಾಜು ಬರೆದ “ಶ್ರೀಮದಾದಿತ್ಯ ದರ್ಶನಂ” ಕೃತಿಯನ್ನು ಇದೇ ಸಂದರ್ಭ ಲೋಕಾರ್ಪಣೆ ಮಾಡಲಾಗುವುದು.
ಬಿಲ್.ಎಲ್. ನಾಗರಾಜು, ಹರಿಕೃಷ್ಣ ಪುನರೂರು ಮತ್ತು ಪಾದೆಕಲ್ಲು ವಿಷ್ಣುಭಟ್ ಶುಭಾಶಂಸನೆ ಮಾಡುವರು.

Related posts

ಟೆಲಿಗ್ರಾಂನಲ್ಲಿ ಬೆದರಿಸಿ ಹಣ ವಸೂಲಿಗೈದ ವಂಚಕ ಈಗ ಜೈಲಿನಲ್ಲಿ: ಆರೋಪಿಯನ್ನು ಕೆಲವೇ ಗಂಟೆಯಲ್ಲಿ ಸಿನಿಮೀಯ ರೀತಿಯಲ್ಲಿ ಪತ್ತೆ ಹಚ್ಚಿದ ವೇಣೂರು ಪೊಲೀಸರು

Suddi Udaya

ಪರೀಕ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ಗೆ “ಅತ್ಯುತ್ತಮ ಎನ್‌.ಜಿ.ಒ” ಪ್ರಶಸ್ತಿ

Suddi Udaya

ಪೆರ್ಲ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಮಾಧವ ಗೌಡ ಖಂಡಿಗ ರವರಿಂದ ಹಣ್ಣು ಹಂಪಲು ಗಿಡ ವಿತರಣೆ

Suddi Udaya

ನೆರಿಯದ ಶ್ವೇತಾರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಕಾಮೋಡ್ ವೀಲ್ ಚೇರ್ ವಿತರಣೆ.

Suddi Udaya
error: Content is protected !!