22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.17: ಧರ್ಮಸ್ಥಳದಲ್ಲಿ ಪುರಾಣ ಕಾವ್ಯ ವಾಚನ-ಪ್ರವಚನ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಐವತ್ತೆರಡನೇ ವರ್ಷದ ಪುರಾಣ ಕಾವ್ಯವಾಚನ – ಪ್ರವಚನದ ಅಂಗವಾಗಿ ಜು.17 ಸೋಮವಾರದಿಂದ ಎರಡು ತಿಂಗಳ ಕಾಲ ಕುಮಾರ ವಾಲ್ಮೀಕಿ ವಿರಚಿತ “ತೊರವೆ ರಾಮಾಯಣ”ದ ಬಗ್ಗೆ ವಾಚನ-ಪ್ರವಚನ ನಡೆಯಲಿದೆ.

ದೇವಸ್ಥಾನದ ಎದುರು ಇರುವ ಪ್ರಚನ ಮಂಟಪದಲ್ಲಿ ಪ್ರತಿದಿನ ಸಂಜೆ ಗಂಟೆ 6.30 ರಿಂದ 8 ಗಂಟೆ ವರೆಗೆ ಪುರಾಣ ವಾಚನ-ಪ್ರವಚನ ನಡೆಯಲಿದೆ.

ಹಿರಿಯ ಯಕ್ಷಗಾನ ಕಲಾವಿದ ಪೆರುವಡಿ ನಾರಾಯಣ ಭಟ್ ಜು. 17 ರಂದು ಸೋಮವಾರ ಸಂಜೆ ಗಂಟೆ 5.30ಕ್ಕೆ ಕಾರ್ಯಕ್ರಮವನ್ನು ಉದ್ಘಾಟಿಸುವರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು.

ಖ್ಯಾತ ಸಾಹಿತಿ ಬಿ.ಎಲ್. ನಾಗರಾಜು ಬರೆದ “ಶ್ರೀಮದಾದಿತ್ಯ ದರ್ಶನಂ” ಕೃತಿಯನ್ನು ಇದೇ ಸಂದರ್ಭ ಲೋಕಾರ್ಪಣೆ ಮಾಡಲಾಗುವುದು.
ಬಿಲ್.ಎಲ್. ನಾಗರಾಜು, ಹರಿಕೃಷ್ಣ ಪುನರೂರು ಮತ್ತು ಪಾದೆಕಲ್ಲು ವಿಷ್ಣುಭಟ್ ಶುಭಾಶಂಸನೆ ಮಾಡುವರು.

Related posts

ನಾರಾವಿ ಪಂಚಾಯತು ಮೀಸಲು ಜಾಗದಲ್ಲಿ ಅಕ್ರಮವಾಗಿ ಶೆಡ್ ನಿರ್ಮಾಣ: ಕಂದಾಯ ಇಲಾಖೆ, ಪೊಲೀಸರ ಸಹಕಾರದಲ್ಲಿ ತೆರವು

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಲಯದ ಮಟ್ಟದ ಪ್ರಗತಿ ಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya

ಕುವೆಟ್ಟು ಗ್ರಾಮದ ಆಲಂದಿಲ ಮನೆಯ ಜನಾರ್ದನ ಸಾಲ್ಯಾನ್ ನಿಧನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಬೆಳ್ತಂಗಡಿ ತಾಲೂಕು ವಕ್ತಾರರಾಗಿ ಸಂದೀಪ್ ಎಸ್ ನೀರಲ್ಕೆ ನೇಮಕ

Suddi Udaya
error: Content is protected !!