September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.17: ಧರ್ಮಸ್ಥಳದಲ್ಲಿ ಪುರಾಣ ಕಾವ್ಯ ವಾಚನ-ಪ್ರವಚನ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಐವತ್ತೆರಡನೇ ವರ್ಷದ ಪುರಾಣ ಕಾವ್ಯವಾಚನ – ಪ್ರವಚನದ ಅಂಗವಾಗಿ ಜು.17 ಸೋಮವಾರದಿಂದ ಎರಡು ತಿಂಗಳ ಕಾಲ ಕುಮಾರ ವಾಲ್ಮೀಕಿ ವಿರಚಿತ “ತೊರವೆ ರಾಮಾಯಣ”ದ ಬಗ್ಗೆ ವಾಚನ-ಪ್ರವಚನ ನಡೆಯಲಿದೆ.

ದೇವಸ್ಥಾನದ ಎದುರು ಇರುವ ಪ್ರಚನ ಮಂಟಪದಲ್ಲಿ ಪ್ರತಿದಿನ ಸಂಜೆ ಗಂಟೆ 6.30 ರಿಂದ 8 ಗಂಟೆ ವರೆಗೆ ಪುರಾಣ ವಾಚನ-ಪ್ರವಚನ ನಡೆಯಲಿದೆ.

ಹಿರಿಯ ಯಕ್ಷಗಾನ ಕಲಾವಿದ ಪೆರುವಡಿ ನಾರಾಯಣ ಭಟ್ ಜು. 17 ರಂದು ಸೋಮವಾರ ಸಂಜೆ ಗಂಟೆ 5.30ಕ್ಕೆ ಕಾರ್ಯಕ್ರಮವನ್ನು ಉದ್ಘಾಟಿಸುವರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು.

ಖ್ಯಾತ ಸಾಹಿತಿ ಬಿ.ಎಲ್. ನಾಗರಾಜು ಬರೆದ “ಶ್ರೀಮದಾದಿತ್ಯ ದರ್ಶನಂ” ಕೃತಿಯನ್ನು ಇದೇ ಸಂದರ್ಭ ಲೋಕಾರ್ಪಣೆ ಮಾಡಲಾಗುವುದು.
ಬಿಲ್.ಎಲ್. ನಾಗರಾಜು, ಹರಿಕೃಷ್ಣ ಪುನರೂರು ಮತ್ತು ಪಾದೆಕಲ್ಲು ವಿಷ್ಣುಭಟ್ ಶುಭಾಶಂಸನೆ ಮಾಡುವರು.

Related posts

ಬೆಳ್ತಂಗಡಿ: ಜೀವ ವೈವಿಧ್ಯ ನಿರ್ವಹಣಾ ಸಮಿತಿಗಳ ತರಬೇತಿ

Suddi Udaya

ಜೂ. 8: ಧರ್ಮಸ್ಥಳ ವಿದ್ಯುತ್ ನಿಲುಗಡೆ

Suddi Udaya

ಬಳಂಜ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ, ವಿವಿಧ ಸಂಘ ಸಂಸ್ಥೆಗಳು ಭಾಗಿ

Suddi Udaya

ರೆಖ್ಯ : ಪರಕಳದಲ್ಲಿ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

Suddi Udaya

ಪುತ್ತಿಲ: ಆಟೋ ಚಾಲಕ ದೀಕ್ಷಿತ್ ಬಿ. ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya
error: Content is protected !!