ಇಲಾಖೆ ಅಧಿಕಾರಿಗಳ ಅನುಪಸ್ಥಿತಿ ಶಿಶಿಲ ಗ್ರಾಮ ಕೆ. ಡಿ. ಪಿ ಸಭೆ ಮೂಂದೂಡಿಕೆ

Suddi Udaya

ಶಿಶಿಲ : ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಜು.12ರಂದು ಶಿಶಿಲ ಗ್ರಾ.ಪಂ. ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಸಭೆಗೆ ಅರಣ್ಯ ಇಲಾಖೆ, ಆಹಾರ ಇಲಾಖೆ, ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪಶು ಸಂಗೋಪನಾ ಇಲಾಖೆ, ಮೆಸ್ಕಾಂ ಇಲಾಖೆ, ಶಿಕ್ಷಣ ಇಲಾಖೆ ಆಹಾರ ಇಲಾಖೆ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಭಾಗವಹಿಸಬೇಕಿದ್ದು ಆದರೆ ಆರೋಗ್ಯ ಇಲಾಖೆ ಮತ್ತು ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಮಾತ್ರ ಉಪಸ್ಥಿತರಿದ್ದು, ಬೇರೆ ಯಾವುದೇ ಇಲಾಖಾಧಿಕಾರಿಗಳು ಬಾರದ ಕಾರಣ ಪಂಚಾಯತ್ ಸದಸ್ಯರು ಅಕ್ರೋಶ ವ್ಯಕ್ತಪಡಿಸಿ ಸಭೆಯನ್ನು ಮುಂದೂಡಲಾಯಿತು.

Leave a Comment

error: Content is protected !!