25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

ಉಜಿರೆ : “ಜನಸಂಖ್ಯೆ ನಿಯಂತ್ರಣದ ಹೊರತು ಅಭಿವೃದ್ಧಿ ಅಸಾಧ್ಯ, ಅಭಿವೃದ್ಧಿಯ ಮೂಲ ಬೇರು ಜನಸಂಖ್ಯೆ. ನಮಗಿರುವ ನೈಸರ್ಗಿಕ ಸಂಪನ್ಮೂಲಗಳು ಮಿತವಾಗಿದೆ, ಜನಸಂಖ್ಯೆ ಅಮಿತವಾಗಿದೆ ಅದನ್ನು ಮಿತಗೊಳಿಸುವ ಕಡೆಗಿರಲಿ ನಮ್ಮ ನಡೆ” ಎಂದು ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯ ನಿವೃತ್ತ ಪ್ರಾಂಶುಪಾಲರಾದ ಡಾ. ಅಂತೋನಿ ಟಿ. ಪಿ ಹೇಳಿದರು.


ಇವರು ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಜು.11 ರಂದು ನಡೆದ ‘ವಿಶ್ವ ಜನಸಂಖ್ಯಾ ದಿನ’ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಜನಸಂಖ್ಯಾ ನಿಯಂತ್ರಣದ ಕುರಿತಾಗಿ ಸಂಗೀತ, ನೃತ್ಯ ಹಾಗೂ ಕಿರು ಪ್ರಹಸನ ಪ್ರದರ್ಶಿಸಲಾಯಿತು.
ವೇದಿಕೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ಮತ್ತು ಶಿಕ್ಷಕಿ ಶಾಂಟಿ ಜಾರ್ಜ್ ಉಪಸ್ಥಿತರಿದ್ದರು.
ಶಿಕ್ಷಕಿ ಶೋಭಿತ ಸಂಯೋಜಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಇಶಿಕ.ಕೆ ಪ್ರಕಾಶ್ ನಿರೂಪಣೆ ಮತ್ತು ಸ್ವಾಗತಿಸಿ, ವಿದ್ಯಾರ್ಥಿ ತೇಜಸ್ ವಂದಿಸಿದರು.

Related posts

ವಿದ್ಯಾಶ್ರೀ ಅಡೂರ್ ಅವರ 3 ನೇ ಕವನಸಂಕಲನ “ಪಯಣ” ಕವನಗಳ ಹಾದಿಯಲ್ಲಿ ಬಿಡುಗಡೆ

Suddi Udaya

ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

Suddi Udaya

ಪದ್ಮುಂಜ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.92 ಫಲಿತಾಂಶ

Suddi Udaya

ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಶ್ರೀ ದುರ್ಗಾ ಫರ್ನಿಚರ್ ಮತ್ತು ಇಲೆಕ್ಟ್ರಾನಿಕ್ಸ್‌ನಲ್ಲಿ ಖರೀದಿಗೆ ವಿಶೇಷ ಡಿಸ್ಕೌಂಟ್

Suddi Udaya

ಶಿಶಿಲ ಒಟ್ಲ ಗರಡಿಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!