25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಕರಾಯ ಕಲ್ಲೇರಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟ : ಉಪ್ಪಿನಂಗಡಿ ಪೊಲೀಸರ ದಾಳಿ‌ ನಗದು ಸಹಿತ ಐವರು ವಶಕ್ಕೆ

ಬೆಳ್ತಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಕರಾಯ ಗ್ರಾಮದ ಕಲ್ಲೇರಿ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟವಾಡುತ್ತಿದ್ದ ಐವರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ನಗದು ರೂ. 6680 ವಶಪಡೆಸಿಕೊಂಡಿದ್ದಾರೆ. ಕರಾಯ ಗ್ರಾಮದ ಕಲ್ಲೇರಿ ಎಂಬಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಎಲೆಗಳನ್ನು ಉಪಯೋಗಿಸಿ ಹಣವನ್ನು ಪಣವಾಗಿಟ್ಟು ಜುಗಾರಿ ಆಟ ಆಡುತ್ತಿದ್ದಾರೆ ಎಂದು ಉಪ್ಪಿನಂಗಡಿ ಪೊಲೀಸರಿಗೆ ದೊರೆತ ಮಾಹಿತಿಯಂತೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿದಾಗ‌ ಐದು ಮಂದಿ ಹಣವನ್ನು ಪಣವಾಗಿಟ್ಟು ಉಲಾಯಿ-ಪಿದಾಯಿ ಎಂಬ ಆಟವನ್ನು ಆಡುವುದು ಕಂಡು ಬಂತು. ಕೂಡಲೇ ಸುತ್ತುವರಿದು ಆಟವಾಡುತ್ತಿದ್ದ ಕೆ. ಶೇಖರ, .ಎಸ್. ಮುಸ್ತಾಫ, ಶ್ರೀನಾಥ, . ಕೆ. ರಮೇಶ, . ಎಂ.ಎ. ಅಬ್ದುಲ್ ಲತೀಫ್ , ಎಂಬವರನ್ನು ಹಿಡಿದು ಒಟ್ಟು ರೂ.6680 ವಶಪಡೆಸಿಕೊಂಡಿದ್ದಾರೆ. ‌ಅವರು ಆಟ ಆಡುತ್ತಿದ್ದ ಸ್ಥಳವನ್ನು ಪರಿಶೀಲಿಸಲಾಗಿ ನೆಲದಲ್ಲಿ ಒಂದು ತಿಳಿ ಹಳದಿ ಬಣ್ಣದ ಒಂದು ಪಾಲಿಥಿನ್ ಪ್ಲಾಸ್ಟಿಕನ್ನು ಬಿಡಿಸಿ ಹಾಕಿದ್ದು ಅದರ ಮೇಲೆ ವಿವಿಧ ಮಾದರಿಯ ಒಟ್ಟು 52 ಇಸ್ಪೀಟ್ ಎಲೆಗಳು ಇದ್ದು ನೆಲದಲ್ಲಿ ಹಾಸಿದ ಪಾಲಿಥಿನ್ ಪ್ಲಾಸ್ಟಿಕ್ ನ ಮೇಲೆ ಒಟ್ಟು ರೂ.2920 ಇದ್ದವು. ಅವುಗಳನ್ನು ವಶಕ್ಕೆ ಪಡೆದುಕೊಂಡು ಉಪ್ಪಿನಂಗಡಿ ಪೊಲೀಸ್‌ ಠಾಣಾ ಅ.ಕ್ರ 93/2023 ಕಲಂ:87 ಕೆ.ಪಿ ಆ್ಯಕ್ಟ್ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಕಾಷ್ಠಶಿಲ್ಪ ರಚನೆ ಮತ್ತು ಪ್ರಾತ್ಯಕ್ಷಿಕೆ ಕಾರ್ಯಾಗಾರ

Suddi Udaya

ಬಾಯ೯ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಭಕ್ತರಿಂದ ಭಜನಾ ಸಂಕೀರ್ತನೆ

Suddi Udaya

ಬಳಂಜ ಜ್ಯೋತಿ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ ಸಭೆ: ಅಧ್ಯಕ್ಷರಾಗಿ ಚೇತನಾ ಜೈನ್, ಪ್ರ.ಕಾರ್ಯದರ್ಶಿಯಾಗಿ ಯಕ್ಷಿತಾ ದೇವಾಡಿಗ

Suddi Udaya

ಆ.15: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ‘ವಿಜ್ಞಾನ – ವಿಸ್ಮಯ ಮತ್ತು ಕುತೂಹಲ’ – ವಿಮರ್ಶಾ ಕಾರ್ಯಾಗಾರ

Suddi Udaya

ಪುಂಜಾಲಕಟ್ಟೆ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪಣಾ ದಿನಾಚರಣೆ

Suddi Udaya

ದಲಿತ ಮುಖಂಡ ಚಂದು ಎಲ್ ರವರ ಪ್ರಥಮ ವರ್ಷದ ಪುಣ್ಯ ಸ್ಮರಣಾ ಕಾರ್ಯಕ್ರಮ

Suddi Udaya
error: Content is protected !!