July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಲ್ಲು ಇಲ್ಲದೆ ಅಡಿಕೆ ಸಾಗಾಟ ವಾಹನ ವಶಕ್ಕೆ: ವಾಣಿಜ್ಯ ತೆರಿಗೆ ಇಲಾಖೆಯಿಂದ ದಂಡ

ಬೆಳ್ತಂಗಡಿ : ಸುಲಿದ ಒಣ ಅಡಕೆಯನ್ನು ವಾಣಿಜ್ಯ ತೆರಿಗೆಇಲಾಖೆಯ ಬಿಲ್ಲು ಇಲ್ಲದೆ ಸಾಗಾಟ ಮಾಡುತ್ತಿದ್ದಾಗ ಧರ್ಮಸ್ಥಳಧಮ೯ಸ್ಥಳ ಪೊಲೀಸರ ತಂಡ ತಪಾಸಣೆ ವೇಳೆ ವಾಹನವನ್ನು ಪತ್ತೆ ಹಚ್ಚಿ ವಾಣಿಜ್ಯ ತೆರಿಗೆ ಇಲಾಖೆಗೆ ಹಸ್ತಾಂತರಿಸಿದೆ.ಅಡಕೆ ಮತ್ತು ವಾಹನವಕ್ಕೆ ಇಲಾಖೆ ದಂಡ ವಿಧಿಸಿದೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ಡಿ ಮತ್ತು ಸಿಬ್ಬಂದಿಗಳು ಕರ್ತವ್ಯದಲ್ಲಿರುವಾಗ ಜು. 12 ರಂದು ಬೆಳಗ್ಗೆ 11 ಗಂಟೆಗೆ ಮುಂಡಾಜೆ ಗ್ರಾಮದ ಪರಶುರಾಮ ರಾಮ ದೇವಸ್ಥಾನದ ಕ್ರಾಸ್ ಬಳಿ ಅಶೋಕ್ ಲೈಲಾಂಡ್ ವಾಹನವನ್ನು ನಿಲ್ಲಿಸಿ ತಪಾಸಣೆ ನಡೆಸಿದಾಗ ಅದರೊಳಗೆ ಸುಲಿದ ಒಣ ಅಡಿಕೆ ಇದ್ದು ಇದರ ಚಾಲಕ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಶಾಬೀರ್ ಎಂಬವರನ್ನು ವಿಚಾರಿಸಿದಾಗ ಸುಳ್ಯದ ಅಡಕೆ ಅಂಗಡಿಯಿಂದ ಪಡೆದುಕೊಂಡು ಕಡೂರಿಗೆ ತೆಗೆದುಕೊಂಡು ಹೋಗುತ್ತಿರುವುದಾಗಿ ತಿಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಬಿಲ್ಲು / ದಾಖಲಾತಿ ಕೇಳಿದಾಗ ಬಿರೂರು ಅಜ್ಜಂಪುರ ರಸ್ತೆಯಲ್ಲಿರುವ ನಿದಾ ಟ್ರೇಡರ್ಸ್ ಸಂಬಂಧಿಸಿದ ಚೀಟಿಗಳನ್ನು ಸಲ್ಲಿಸಿದ್ದು. ಬೇರೆ ಯಾವುದೇ ಬಿಲ್ಲುಗಳಿಲ್ಲ ಎಂದು ತಿಳಿಸಿದ್ದಾರೆ. ವಾಹನ ಅಡಿಕೆ ಹಾಗೂ ಚಾಲಕನನ್ನು ಧರ್ಮಸ್ಥಳ ಪೊಲೀಸ್ ಠಾಣಾ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಳ್ಳಲು ವಾಣಿಜ್ಯ ತೆರಿಗೆ ಜಂಟಿ ಆಯುಕ್ತರು ಜಾರಿ, ಪಶ್ಚಿಮ ವಲಯ ಮಂಗಳೂರು ವರದಿ ನೀಡಿದ್ದು ಅದರಂತೆ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ 81,900 ರೂಪಾಯಿ ದಂಡ ವಿಧಿಸಲಾಯಿತು.

Related posts

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ಶಿಕ್ಷಕ ಯುವರಾಜ್ ರವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಕನ್ನಾಜೆ ನಿವಾಸಿ ಕುಸುಮ ನಿಧನ

Suddi Udaya

ರುಡ್‌ಸೆಟ್ ಸಂಸ್ಥೆ ವತಿಯಿಂದ ಕೃಷಿ ಉದ್ಯಮಿ–ಕೋಳಿ ಸಾಕಾಣಿಕೆ ತರಬೇತಿಯ ಸಮಾರೋಪ

Suddi Udaya

ಬೆಳ್ತಂಗಡಿ ರೋಟರಿ ಆಯನ್ಸ್ ಕ್ಲಬ್ ವತಿಯಿಂದ ಸರ್ಕಾರಿ ಪ್ರೌಢಶಾಲೆ ನೇಲ್ಯಡ್ಕಕ್ಕೆ ವಿಜ್ಞಾನ ಉಪಕರಣಗಳ ಕೊಡುಗೆ

Suddi Udaya

ಕೊಯ್ಯೂರು ಸರಕಾರಿ ಪದವಿ ಪೂರ್ವ ಕಾಲೇಜು-ತರಗತಿ ಕೊಠಡಿಗಳ ಕಾಮಗಾರಿಗೆ ಶಿಲಾನ್ಯಾಸ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಆಟಿಡೊಂಜಿ ದಿನಾಚರಣೆ

Suddi Udaya
error: Content is protected !!