23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

‘ಮಕ್ಕಳಿಗೆ ಓದುವುದು ಎಷ್ಟು ಮಹತ್ವ’ ವಿಷಯದ ಕುರಿತು ಪದ್ಮಲತಾ ಮೋಹನ್ ನಿಡ್ಲೆಯವರಿಂದ ಉಪನ್ಯಾಸ

ಶ್ರೀ ಅಯ್ಯಪ್ಪ ಎಜುಕೇಷನ್ ಸೆಂಟರ್ ಸಿಬಿಎಸ್ ಇ ಸ್ಕೂಲ್ ಬೆಂಗಳೂರು ಹತ್ತು ಹನ್ನೊಂದು ಮತ್ತು ಹನ್ನೆರಡನೇ ತರಗತಿಯ ಮಕ್ಕಳಿಗಾಗಿ ಆಯೋಜಿಸಿದ್ದ. ಮಕ್ಕಳಿಗೆ ಓದುವುದು ಎಷ್ಟು ಮಹತ್ವ ಎಂಬ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿದ್ದ ಪದ್ಮಲತಾ ಮೋಹನ್ ನಿಡ್ಲೆ ಸಾಹಿತಿ ಉಪನ್ಯಾಸಕಿ ಇವರು ವಿದ್ಯಾರ್ಥಿಗಳಿಗೆ ಪುಸ್ತಕ ಓದುವುದರ ಮಹತ್ವ ಹಾಗು ಓದುವುದರ ಅಭ್ಯಾಸ ವನ್ನು ಹೇಗೆ ಬೆಳೆಸಬಹುದೆಂದು ವಿವರವಾಗಿ ತಿಳಿಸುತ್ತಾ, ಮಕ್ಕಳಿಗೆ ಅಂಕಗಳ ಜೊತೆ ತಿಳುವಳಿಕೆ ಕೂಡ ಮುಖ್ಯ ಅದಕ್ಕಾಗಿ ವಿವಿಧ ರೀತಿಯ ಪುಸ್ತಕಗಳನ್ನು ಓದಬೇಕು ಎಂಬ ಕಿವಿ ಮಾತು ಹೇಳಿದರು.

ಓದುವ ಹವ್ಯಾಸವನ್ನು ಬೆಳೆಸುವಲ್ಲಿ ಪೋಷಕರ ಮತ್ತು ಹೆತ್ತವರ ಪಾತ್ರವನ್ನು ಒತ್ತಿ ಹೇಳಿದ ಇವರು ಶಾಲೆಗಳಲ್ಲಿ ಓದುವುದನ್ನು ಪ್ರೋತ್ಸಾಹಿಸಲು ಅನುಕೂಲವಾಗುವಂತಹ ಚಟುವಟಿಕೆಯನ್ನು ಮಾಡಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಸ್ಕೂಲ್ ಪ್ರಾಂಶುಪಾಲರಾದ ಶ್ರೀಮತಿ ಕಮಲಾ ಸೆಲ್ವರಾಜನ್ , ಮುಖ್ಯಶಿಕ್ಷಕಿ ಶ್ರೀಮತಿ ಅಮಿತಾ ಡಿ ರಾವ್ ಉದಯೋನ್ಮುಖ ಬರಹಗಾರ್ತಿ ಕುಮಾರಿ ಶ್ರೇಯಾ ಮತ್ತು ಉಳಿದ ಶಿಕ್ಷಕರು ಉಪಸ್ಥಿತರಿದ್ದರು.

Related posts

ಮಾ.14-15: ನಿಡ್ಲೆ ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya

ಕಲ್ಮಂಜ : ಶ್ರೀ ಬದಿನಡೆ ಕ್ಷೇತ್ರದಲ್ಲಿ ವೀರ ಯೋಧರ ರಕ್ಷಣೆಗಾಗಿ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

Suddi Udaya

ಬೆಳ್ತಂಗಡಿ: ಪಂಚಾಯತ್‌ರಾಜ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಸಂಜೀವ ನಾಯ್ಕರಿಗೆ ಬೀಳ್ಕೊಡುಗೆ

Suddi Udaya

ಮರೋಡಿ ಗ್ರಾಮಸಭೆ: ಅವಧಿ ಮೀರಿದ ವಿದ್ಯುತ್ ಕಂಬ ಹಾಗೂ ತಂತಿಗಳನ್ನು ತೆರವುಗೊಳಿಸಲು ಗ್ರಾಮಸ್ಥರ ಒತ್ತಾಯ

Suddi Udaya

ತಾಲೂಕು ಗ್ಯಾರಂಟಿ ಯೋಜನಾ ಸಮಿತಿಯ ಸದಸ್ಯರಾಗಿ ಯತೀಶ್ ಧರ್ಮಸ್ಥಳ ಆಯ್ಕೆ

Suddi Udaya
error: Content is protected !!