September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಕರಾಯ ಕಲ್ಲೇರಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟ : ಉಪ್ಪಿನಂಗಡಿ ಪೊಲೀಸರ ದಾಳಿ‌ ನಗದು ಸಹಿತ ಐವರು ವಶಕ್ಕೆ

ಬೆಳ್ತಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಕರಾಯ ಗ್ರಾಮದ ಕಲ್ಲೇರಿ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟವಾಡುತ್ತಿದ್ದ ಐವರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ನಗದು ರೂ. 6680 ವಶಪಡೆಸಿಕೊಂಡಿದ್ದಾರೆ. ಕರಾಯ ಗ್ರಾಮದ ಕಲ್ಲೇರಿ ಎಂಬಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಎಲೆಗಳನ್ನು ಉಪಯೋಗಿಸಿ ಹಣವನ್ನು ಪಣವಾಗಿಟ್ಟು ಜುಗಾರಿ ಆಟ ಆಡುತ್ತಿದ್ದಾರೆ ಎಂದು ಉಪ್ಪಿನಂಗಡಿ ಪೊಲೀಸರಿಗೆ ದೊರೆತ ಮಾಹಿತಿಯಂತೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿದಾಗ‌ ಐದು ಮಂದಿ ಹಣವನ್ನು ಪಣವಾಗಿಟ್ಟು ಉಲಾಯಿ-ಪಿದಾಯಿ ಎಂಬ ಆಟವನ್ನು ಆಡುವುದು ಕಂಡು ಬಂತು. ಕೂಡಲೇ ಸುತ್ತುವರಿದು ಆಟವಾಡುತ್ತಿದ್ದ ಕೆ. ಶೇಖರ, .ಎಸ್. ಮುಸ್ತಾಫ, ಶ್ರೀನಾಥ, . ಕೆ. ರಮೇಶ, . ಎಂ.ಎ. ಅಬ್ದುಲ್ ಲತೀಫ್ , ಎಂಬವರನ್ನು ಹಿಡಿದು ಒಟ್ಟು ರೂ.6680 ವಶಪಡೆಸಿಕೊಂಡಿದ್ದಾರೆ. ‌ಅವರು ಆಟ ಆಡುತ್ತಿದ್ದ ಸ್ಥಳವನ್ನು ಪರಿಶೀಲಿಸಲಾಗಿ ನೆಲದಲ್ಲಿ ಒಂದು ತಿಳಿ ಹಳದಿ ಬಣ್ಣದ ಒಂದು ಪಾಲಿಥಿನ್ ಪ್ಲಾಸ್ಟಿಕನ್ನು ಬಿಡಿಸಿ ಹಾಕಿದ್ದು ಅದರ ಮೇಲೆ ವಿವಿಧ ಮಾದರಿಯ ಒಟ್ಟು 52 ಇಸ್ಪೀಟ್ ಎಲೆಗಳು ಇದ್ದು ನೆಲದಲ್ಲಿ ಹಾಸಿದ ಪಾಲಿಥಿನ್ ಪ್ಲಾಸ್ಟಿಕ್ ನ ಮೇಲೆ ಒಟ್ಟು ರೂ.2920 ಇದ್ದವು. ಅವುಗಳನ್ನು ವಶಕ್ಕೆ ಪಡೆದುಕೊಂಡು ಉಪ್ಪಿನಂಗಡಿ ಪೊಲೀಸ್‌ ಠಾಣಾ ಅ.ಕ್ರ 93/2023 ಕಲಂ:87 ಕೆ.ಪಿ ಆ್ಯಕ್ಟ್ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಹತ್ಯಡ್ಕ: ನಿವೃತ್ತ ಶಿಕ್ಷಕ ಮಹಾದೇವ ಹೆಬ್ಬಾರ್ ನಿಧನ

Suddi Udaya

ಗುರುವಾಯನಕೆರೆ: ಅಗಲಿದ ದಿ| ನಾರಾಯಣ ಆಚಾರ್ಯ ರವರ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ಎಂಎಲ್ಸಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ, ಸಾಂತ್ವಾನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜನಮಂಗಲ ಕಾರ್ಯಕ್ರಮ: ರಾಜ್ಯದ 6374 ವಿಶೇಷ ಚೇತನರಿಗೆ ಉಚಿತ ಸಲಕರಣೆ ವಿತರಣೆ

Suddi Udaya

ಪುದುವೆಟ್ಟು ಶ್ರೀ.ಧ.ಮಂ ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ  ಮತ್ತು ನೃತ್ಯ ತರಗತಿಗಳ ಉದ್ಘಾಟನೆ

Suddi Udaya

ಕನ್ನಡದಲ್ಲಿ ಬರಲಿದೆ ದಸ್ಕತ್ ತುಳು ಚಿತ್ರ

Suddi Udaya

ಇಂಡಿಯನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಾಜಿ ಡೆಲ್ಲಿ ಯಲ್ಲಿ ಮಾಸ್ಟರ್ ಆಫ್ ಡಿಸೈನ್ ಪದವಿ ಪಡೆದ ತೆಂಕಕಾರಂದೂರುವಿನ ಅಜಿತ್ ಕುಮಾರ್

Suddi Udaya
error: Content is protected !!