25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಪತ್ತೆಯಾಗಿದ್ದ ಬೆಳಾಲು ಮಾಯಾ ಅತ್ರಿಜಾಲು ತಮ್ಮಯ್ಯ ಗೌಡರ ಮೃತ‌ದೇಹ ಕೆರೆಯಲ್ಲಿ ಪತ್ತೆ- ಶವ ಮೇಲೆತ್ತಿದ‌ ಶೌಯ೯ ವಿಪತ್ತು ತಂಡ

ಬೆಳಾಲು : ನಿನ್ನೆ ಬೆಳಿಗ್ಗೆ ಸಾಪತ್ತೆಯಾಗಿದ್ದ ಬೆಳಾಲು ಗ್ರಾಮದ ಮಾಯಾ ಅತ್ರಿಜಾಲು ನಿವಾಸಿಯೋವ೯ರ ಮೃತ‌ದೇಹ ಇಂದು ಕೆರೆಯಲ್ಲಿ ಪತ್ತೆಯಾಗಿದೆ. ‌ಅತ್ರಿಜಾಲು ತಮ್ಮಯ್ಯ ಗೌಡ ( 43ವ) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.

ತಮ್ಮಯ್ಯ ಅವರು ನಿನ್ನೆ ಬೆಳಿಗ್ಗೆ ನಾಪತ್ತೆಯಾಗಿದ್ದು, ಮನೆಯವರು ಎಲ್ಲಾ ಕಡೆ ಹುಡುಕಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಇಂದು ಶೌಯ೯ವಿಪತ್ತು ತಂಡದ ಹರೀಶ್ ಕೂಡಿಗೆ, ಸುಲೈಮಾನ್ ಭೀಮಂಡೆ, ಸಂತೋಷ್ ಕನಕಿಲ, ಯಶೋಧರ ಬೆಳಾಲ್ ಹುಡುಕಾಟ ನಡೆಸಿ, ಕೆರೆಯಲ್ಲಿದ್ದ ಶವ ಮೇಲೆತ್ತಿದ್ದಾರೆ.

ಈ ಸಂದಭ೯ ಸಂಯೋಜಕಿ ಆಶಾ ಮೊದಲಾದವರು ಉಪಸ್ಥಿತರಿದ್ದರು. ತಮ್ಮಯ ಗೌಡರು ಕೆರೆಗೆ ಜಾರಿ ಬಿದ್ದರೇ ಅಥವಾ ಆತ್ಮಹತ್ಯೆ ಮಾಡಿಕೊಂಡರೇ ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬರಬೇಕಾಗಿದೆ.

Related posts

ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘ (ನಿ) ಸ್ಥಳಾಂತರಗೊಂಡ ಕಛೇರಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಭತ್ತದ ಬೆಳೆ ಸ್ಪರ್ಧೆಗೆ ರೈತರಿಂದ ಅರ್ಜಿ ಆಹ್ವಾನ

Suddi Udaya

ಬಜಕ್ರೆಸಾಲು ಸೇತುವೆ ಕೆಳಗೆ ನದಿಯಲ್ಲಿ ದನದ ಚರ್ಮ ಪತ್ತೆ

Suddi Udaya

ಸೌಜನ್ಯ ಪ್ರಕರಣ: ಮರುತನಿಖೆಗೆ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಪ.ಜಾತಿ ಪ. ಪಂಗಡದ ಹಿತರಕ್ಷಣಾ ಸಮಿತಿ ಸಭೆ

Suddi Udaya
error: Content is protected !!