23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಲ್ಲು ಇಲ್ಲದೆ ಅಡಿಕೆ ಸಾಗಾಟ ವಾಹನ ವಶಕ್ಕೆ: ವಾಣಿಜ್ಯ ತೆರಿಗೆ ಇಲಾಖೆಯಿಂದ ದಂಡ

ಬೆಳ್ತಂಗಡಿ : ಸುಲಿದ ಒಣ ಅಡಕೆಯನ್ನು ವಾಣಿಜ್ಯ ತೆರಿಗೆಇಲಾಖೆಯ ಬಿಲ್ಲು ಇಲ್ಲದೆ ಸಾಗಾಟ ಮಾಡುತ್ತಿದ್ದಾಗ ಧರ್ಮಸ್ಥಳಧಮ೯ಸ್ಥಳ ಪೊಲೀಸರ ತಂಡ ತಪಾಸಣೆ ವೇಳೆ ವಾಹನವನ್ನು ಪತ್ತೆ ಹಚ್ಚಿ ವಾಣಿಜ್ಯ ತೆರಿಗೆ ಇಲಾಖೆಗೆ ಹಸ್ತಾಂತರಿಸಿದೆ.ಅಡಕೆ ಮತ್ತು ವಾಹನವಕ್ಕೆ ಇಲಾಖೆ ದಂಡ ವಿಧಿಸಿದೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ಡಿ ಮತ್ತು ಸಿಬ್ಬಂದಿಗಳು ಕರ್ತವ್ಯದಲ್ಲಿರುವಾಗ ಜು. 12 ರಂದು ಬೆಳಗ್ಗೆ 11 ಗಂಟೆಗೆ ಮುಂಡಾಜೆ ಗ್ರಾಮದ ಪರಶುರಾಮ ರಾಮ ದೇವಸ್ಥಾನದ ಕ್ರಾಸ್ ಬಳಿ ಅಶೋಕ್ ಲೈಲಾಂಡ್ ವಾಹನವನ್ನು ನಿಲ್ಲಿಸಿ ತಪಾಸಣೆ ನಡೆಸಿದಾಗ ಅದರೊಳಗೆ ಸುಲಿದ ಒಣ ಅಡಿಕೆ ಇದ್ದು ಇದರ ಚಾಲಕ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಶಾಬೀರ್ ಎಂಬವರನ್ನು ವಿಚಾರಿಸಿದಾಗ ಸುಳ್ಯದ ಅಡಕೆ ಅಂಗಡಿಯಿಂದ ಪಡೆದುಕೊಂಡು ಕಡೂರಿಗೆ ತೆಗೆದುಕೊಂಡು ಹೋಗುತ್ತಿರುವುದಾಗಿ ತಿಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಬಿಲ್ಲು / ದಾಖಲಾತಿ ಕೇಳಿದಾಗ ಬಿರೂರು ಅಜ್ಜಂಪುರ ರಸ್ತೆಯಲ್ಲಿರುವ ನಿದಾ ಟ್ರೇಡರ್ಸ್ ಸಂಬಂಧಿಸಿದ ಚೀಟಿಗಳನ್ನು ಸಲ್ಲಿಸಿದ್ದು. ಬೇರೆ ಯಾವುದೇ ಬಿಲ್ಲುಗಳಿಲ್ಲ ಎಂದು ತಿಳಿಸಿದ್ದಾರೆ. ವಾಹನ ಅಡಿಕೆ ಹಾಗೂ ಚಾಲಕನನ್ನು ಧರ್ಮಸ್ಥಳ ಪೊಲೀಸ್ ಠಾಣಾ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಳ್ಳಲು ವಾಣಿಜ್ಯ ತೆರಿಗೆ ಜಂಟಿ ಆಯುಕ್ತರು ಜಾರಿ, ಪಶ್ಚಿಮ ವಲಯ ಮಂಗಳೂರು ವರದಿ ನೀಡಿದ್ದು ಅದರಂತೆ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ 81,900 ರೂಪಾಯಿ ದಂಡ ವಿಧಿಸಲಾಯಿತು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ,(ಸಿ.ಬಿ.ಎಸ್.ಇ) ಕನ್ನಡ ರಾಜ್ಯೋತ್ಸವ

Suddi Udaya

ತುಳುನಾಡು ಒಕ್ಕೂಟ ಸಂಘಟನೆಯ ನೇತೃತ್ವದಲ್ಲಿ 5ನೇ ವರ್ಷದ ‘ಚೆನ್ನೆಮಣೆ ಗೊಬ್ಬು ಪಂಥೋ’ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಗ್ರಾಮ ಸಂಗ್ರಾಮ್

Suddi Udaya

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಜು.25: ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳದ ನಿವೃತ್ತ ಚಾಲಕ ಪದ್ಮಯ್ಯ ಗೌಡ ನಿಧನ

Suddi Udaya
error: Content is protected !!