23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಲ್ಲು ಇಲ್ಲದೆ ಅಡಿಕೆ ಸಾಗಾಟ ವಾಹನ ವಶಕ್ಕೆ: ವಾಣಿಜ್ಯ ತೆರಿಗೆ ಇಲಾಖೆಯಿಂದ ದಂಡ

ಬೆಳ್ತಂಗಡಿ : ಸುಲಿದ ಒಣ ಅಡಕೆಯನ್ನು ವಾಣಿಜ್ಯ ತೆರಿಗೆಇಲಾಖೆಯ ಬಿಲ್ಲು ಇಲ್ಲದೆ ಸಾಗಾಟ ಮಾಡುತ್ತಿದ್ದಾಗ ಧರ್ಮಸ್ಥಳಧಮ೯ಸ್ಥಳ ಪೊಲೀಸರ ತಂಡ ತಪಾಸಣೆ ವೇಳೆ ವಾಹನವನ್ನು ಪತ್ತೆ ಹಚ್ಚಿ ವಾಣಿಜ್ಯ ತೆರಿಗೆ ಇಲಾಖೆಗೆ ಹಸ್ತಾಂತರಿಸಿದೆ.ಅಡಕೆ ಮತ್ತು ವಾಹನವಕ್ಕೆ ಇಲಾಖೆ ದಂಡ ವಿಧಿಸಿದೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ಡಿ ಮತ್ತು ಸಿಬ್ಬಂದಿಗಳು ಕರ್ತವ್ಯದಲ್ಲಿರುವಾಗ ಜು. 12 ರಂದು ಬೆಳಗ್ಗೆ 11 ಗಂಟೆಗೆ ಮುಂಡಾಜೆ ಗ್ರಾಮದ ಪರಶುರಾಮ ರಾಮ ದೇವಸ್ಥಾನದ ಕ್ರಾಸ್ ಬಳಿ ಅಶೋಕ್ ಲೈಲಾಂಡ್ ವಾಹನವನ್ನು ನಿಲ್ಲಿಸಿ ತಪಾಸಣೆ ನಡೆಸಿದಾಗ ಅದರೊಳಗೆ ಸುಲಿದ ಒಣ ಅಡಿಕೆ ಇದ್ದು ಇದರ ಚಾಲಕ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಶಾಬೀರ್ ಎಂಬವರನ್ನು ವಿಚಾರಿಸಿದಾಗ ಸುಳ್ಯದ ಅಡಕೆ ಅಂಗಡಿಯಿಂದ ಪಡೆದುಕೊಂಡು ಕಡೂರಿಗೆ ತೆಗೆದುಕೊಂಡು ಹೋಗುತ್ತಿರುವುದಾಗಿ ತಿಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಬಿಲ್ಲು / ದಾಖಲಾತಿ ಕೇಳಿದಾಗ ಬಿರೂರು ಅಜ್ಜಂಪುರ ರಸ್ತೆಯಲ್ಲಿರುವ ನಿದಾ ಟ್ರೇಡರ್ಸ್ ಸಂಬಂಧಿಸಿದ ಚೀಟಿಗಳನ್ನು ಸಲ್ಲಿಸಿದ್ದು. ಬೇರೆ ಯಾವುದೇ ಬಿಲ್ಲುಗಳಿಲ್ಲ ಎಂದು ತಿಳಿಸಿದ್ದಾರೆ. ವಾಹನ ಅಡಿಕೆ ಹಾಗೂ ಚಾಲಕನನ್ನು ಧರ್ಮಸ್ಥಳ ಪೊಲೀಸ್ ಠಾಣಾ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಳ್ಳಲು ವಾಣಿಜ್ಯ ತೆರಿಗೆ ಜಂಟಿ ಆಯುಕ್ತರು ಜಾರಿ, ಪಶ್ಚಿಮ ವಲಯ ಮಂಗಳೂರು ವರದಿ ನೀಡಿದ್ದು ಅದರಂತೆ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ 81,900 ರೂಪಾಯಿ ದಂಡ ವಿಧಿಸಲಾಯಿತು.

Related posts

ವಿಶ್ರಾಂತ ಶಿಕ್ಷಕ ಮುಂಡಾಜೆ ಶಂಕರ್ ತಾಮನ್ಕರ್ ಅವರಿಂದ ಮಾದರಿ ಕಾರ್ಯಕ್ರಮ

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಮೂರು ಅರ್ಜಿಗಳನ್ನು ವಜಾಗೊಳಿಸಿದ ಹೈಕೋರ್ಟ್

Suddi Udaya

ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

Suddi Udaya

ವೇಣೂರು: ದಿ| ಕಮಲ ಬಂಗೇರರ ಶೃದ್ಧಾಂಜಲಿ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya

ಶಿಕ್ಷಕರ ಅರ್ಹತಾ ಪರೀಕ್ಷೆ: ಎಸ್.ಡಿ.ಎಂ. ಡಿ.ಎಡ್. ಕಾಲೇಜಿನ ವಿದ್ಯಾರ್ಥಿಗಳು ಉತ್ತೀರ್ಣ

Suddi Udaya
error: Content is protected !!