30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

‘ಮಕ್ಕಳಿಗೆ ಓದುವುದು ಎಷ್ಟು ಮಹತ್ವ’ ವಿಷಯದ ಕುರಿತು ಪದ್ಮಲತಾ ಮೋಹನ್ ನಿಡ್ಲೆಯವರಿಂದ ಉಪನ್ಯಾಸ

ಶ್ರೀ ಅಯ್ಯಪ್ಪ ಎಜುಕೇಷನ್ ಸೆಂಟರ್ ಸಿಬಿಎಸ್ ಇ ಸ್ಕೂಲ್ ಬೆಂಗಳೂರು ಹತ್ತು ಹನ್ನೊಂದು ಮತ್ತು ಹನ್ನೆರಡನೇ ತರಗತಿಯ ಮಕ್ಕಳಿಗಾಗಿ ಆಯೋಜಿಸಿದ್ದ. ಮಕ್ಕಳಿಗೆ ಓದುವುದು ಎಷ್ಟು ಮಹತ್ವ ಎಂಬ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿದ್ದ ಪದ್ಮಲತಾ ಮೋಹನ್ ನಿಡ್ಲೆ ಸಾಹಿತಿ ಉಪನ್ಯಾಸಕಿ ಇವರು ವಿದ್ಯಾರ್ಥಿಗಳಿಗೆ ಪುಸ್ತಕ ಓದುವುದರ ಮಹತ್ವ ಹಾಗು ಓದುವುದರ ಅಭ್ಯಾಸ ವನ್ನು ಹೇಗೆ ಬೆಳೆಸಬಹುದೆಂದು ವಿವರವಾಗಿ ತಿಳಿಸುತ್ತಾ, ಮಕ್ಕಳಿಗೆ ಅಂಕಗಳ ಜೊತೆ ತಿಳುವಳಿಕೆ ಕೂಡ ಮುಖ್ಯ ಅದಕ್ಕಾಗಿ ವಿವಿಧ ರೀತಿಯ ಪುಸ್ತಕಗಳನ್ನು ಓದಬೇಕು ಎಂಬ ಕಿವಿ ಮಾತು ಹೇಳಿದರು.

ಓದುವ ಹವ್ಯಾಸವನ್ನು ಬೆಳೆಸುವಲ್ಲಿ ಪೋಷಕರ ಮತ್ತು ಹೆತ್ತವರ ಪಾತ್ರವನ್ನು ಒತ್ತಿ ಹೇಳಿದ ಇವರು ಶಾಲೆಗಳಲ್ಲಿ ಓದುವುದನ್ನು ಪ್ರೋತ್ಸಾಹಿಸಲು ಅನುಕೂಲವಾಗುವಂತಹ ಚಟುವಟಿಕೆಯನ್ನು ಮಾಡಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಸ್ಕೂಲ್ ಪ್ರಾಂಶುಪಾಲರಾದ ಶ್ರೀಮತಿ ಕಮಲಾ ಸೆಲ್ವರಾಜನ್ , ಮುಖ್ಯಶಿಕ್ಷಕಿ ಶ್ರೀಮತಿ ಅಮಿತಾ ಡಿ ರಾವ್ ಉದಯೋನ್ಮುಖ ಬರಹಗಾರ್ತಿ ಕುಮಾರಿ ಶ್ರೇಯಾ ಮತ್ತು ಉಳಿದ ಶಿಕ್ಷಕರು ಉಪಸ್ಥಿತರಿದ್ದರು.

Related posts

ಶಿಶಿಲ-ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕದಿಂದ ಶಿಬರಾಜೆ ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಶ್ರಮದಾನ

Suddi Udaya

ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಪೊಲೀಯೋ ಲಸಿಕಾ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ

Suddi Udaya

ಧರ್ಮಸಂರಕ್ಷಣ ಯಾತ್ರೆಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಪ್ಲಾನ್” : : ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಈ ಸುದ್ದಿಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಬ್ಲಾಕ್ ಕಾಂಗ್ರೆಸ್ ಉಭಯ ಸಮಿತಿ ಅಧ್ಯಕ್ಷರುಗಳ ಸ್ಪಷ್ಟನೆ

Suddi Udaya

ಮಚ್ಚಿನ, ಕಳಿಯ ಗ್ರಾಮದ ವಿವಿದೆಡೆ ಕಾಂಕ್ರೀಟ್ ರಸ್ತೆ ಕಾಮಗಾರಿ ಅಂತಿಮ ಹoತದಲ್ಲಿ

Suddi Udaya
error: Content is protected !!