25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

‘ಮಕ್ಕಳಿಗೆ ಓದುವುದು ಎಷ್ಟು ಮಹತ್ವ’ ವಿಷಯದ ಕುರಿತು ಪದ್ಮಲತಾ ಮೋಹನ್ ನಿಡ್ಲೆಯವರಿಂದ ಉಪನ್ಯಾಸ

ಶ್ರೀ ಅಯ್ಯಪ್ಪ ಎಜುಕೇಷನ್ ಸೆಂಟರ್ ಸಿಬಿಎಸ್ ಇ ಸ್ಕೂಲ್ ಬೆಂಗಳೂರು ಹತ್ತು ಹನ್ನೊಂದು ಮತ್ತು ಹನ್ನೆರಡನೇ ತರಗತಿಯ ಮಕ್ಕಳಿಗಾಗಿ ಆಯೋಜಿಸಿದ್ದ. ಮಕ್ಕಳಿಗೆ ಓದುವುದು ಎಷ್ಟು ಮಹತ್ವ ಎಂಬ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿದ್ದ ಪದ್ಮಲತಾ ಮೋಹನ್ ನಿಡ್ಲೆ ಸಾಹಿತಿ ಉಪನ್ಯಾಸಕಿ ಇವರು ವಿದ್ಯಾರ್ಥಿಗಳಿಗೆ ಪುಸ್ತಕ ಓದುವುದರ ಮಹತ್ವ ಹಾಗು ಓದುವುದರ ಅಭ್ಯಾಸ ವನ್ನು ಹೇಗೆ ಬೆಳೆಸಬಹುದೆಂದು ವಿವರವಾಗಿ ತಿಳಿಸುತ್ತಾ, ಮಕ್ಕಳಿಗೆ ಅಂಕಗಳ ಜೊತೆ ತಿಳುವಳಿಕೆ ಕೂಡ ಮುಖ್ಯ ಅದಕ್ಕಾಗಿ ವಿವಿಧ ರೀತಿಯ ಪುಸ್ತಕಗಳನ್ನು ಓದಬೇಕು ಎಂಬ ಕಿವಿ ಮಾತು ಹೇಳಿದರು.

ಓದುವ ಹವ್ಯಾಸವನ್ನು ಬೆಳೆಸುವಲ್ಲಿ ಪೋಷಕರ ಮತ್ತು ಹೆತ್ತವರ ಪಾತ್ರವನ್ನು ಒತ್ತಿ ಹೇಳಿದ ಇವರು ಶಾಲೆಗಳಲ್ಲಿ ಓದುವುದನ್ನು ಪ್ರೋತ್ಸಾಹಿಸಲು ಅನುಕೂಲವಾಗುವಂತಹ ಚಟುವಟಿಕೆಯನ್ನು ಮಾಡಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಸ್ಕೂಲ್ ಪ್ರಾಂಶುಪಾಲರಾದ ಶ್ರೀಮತಿ ಕಮಲಾ ಸೆಲ್ವರಾಜನ್ , ಮುಖ್ಯಶಿಕ್ಷಕಿ ಶ್ರೀಮತಿ ಅಮಿತಾ ಡಿ ರಾವ್ ಉದಯೋನ್ಮುಖ ಬರಹಗಾರ್ತಿ ಕುಮಾರಿ ಶ್ರೇಯಾ ಮತ್ತು ಉಳಿದ ಶಿಕ್ಷಕರು ಉಪಸ್ಥಿತರಿದ್ದರು.

Related posts

ನಾಳೆ (ನ.8): ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಬಾರಿಗೆ ಪ್ರಖ್ಯಾತ ಪ್ಲೈವುಡ್ ಮಳಿಗೆ “ಆನ್‌ಪ್ಲೈ” ಶುಭಾರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕರಾಟೆ ತರಬೇತಿ

Suddi Udaya

ಬೆಳ್ತಂಗಡಿ : ವಾಣಿ ಶಿಕ್ಷಣ ಸಂಸ್ಥೆಯಲ್ಲಿ ‘ವಾಣಿ ವಿದ್ಯಾ ಸಮ್ಮಾನ್’ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

“ನಾನು ರಾಜಕೀಯ ನಿವೃತ್ತಿ ನೀಡಿಲ್ಲ,: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರಿಂದ ಸ್ಪಷ್ಟನೆ

Suddi Udaya

ಪಡಂಗಡಿ ಗ್ರಾಮ‌ ಪಂಚಾಯತ್ ನಲ್ಲಿ ವಿಕಾಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!