September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

‘ಮಕ್ಕಳಿಗೆ ಓದುವುದು ಎಷ್ಟು ಮಹತ್ವ’ ವಿಷಯದ ಕುರಿತು ಪದ್ಮಲತಾ ಮೋಹನ್ ನಿಡ್ಲೆಯವರಿಂದ ಉಪನ್ಯಾಸ

ಶ್ರೀ ಅಯ್ಯಪ್ಪ ಎಜುಕೇಷನ್ ಸೆಂಟರ್ ಸಿಬಿಎಸ್ ಇ ಸ್ಕೂಲ್ ಬೆಂಗಳೂರು ಹತ್ತು ಹನ್ನೊಂದು ಮತ್ತು ಹನ್ನೆರಡನೇ ತರಗತಿಯ ಮಕ್ಕಳಿಗಾಗಿ ಆಯೋಜಿಸಿದ್ದ. ಮಕ್ಕಳಿಗೆ ಓದುವುದು ಎಷ್ಟು ಮಹತ್ವ ಎಂಬ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿದ್ದ ಪದ್ಮಲತಾ ಮೋಹನ್ ನಿಡ್ಲೆ ಸಾಹಿತಿ ಉಪನ್ಯಾಸಕಿ ಇವರು ವಿದ್ಯಾರ್ಥಿಗಳಿಗೆ ಪುಸ್ತಕ ಓದುವುದರ ಮಹತ್ವ ಹಾಗು ಓದುವುದರ ಅಭ್ಯಾಸ ವನ್ನು ಹೇಗೆ ಬೆಳೆಸಬಹುದೆಂದು ವಿವರವಾಗಿ ತಿಳಿಸುತ್ತಾ, ಮಕ್ಕಳಿಗೆ ಅಂಕಗಳ ಜೊತೆ ತಿಳುವಳಿಕೆ ಕೂಡ ಮುಖ್ಯ ಅದಕ್ಕಾಗಿ ವಿವಿಧ ರೀತಿಯ ಪುಸ್ತಕಗಳನ್ನು ಓದಬೇಕು ಎಂಬ ಕಿವಿ ಮಾತು ಹೇಳಿದರು.

ಓದುವ ಹವ್ಯಾಸವನ್ನು ಬೆಳೆಸುವಲ್ಲಿ ಪೋಷಕರ ಮತ್ತು ಹೆತ್ತವರ ಪಾತ್ರವನ್ನು ಒತ್ತಿ ಹೇಳಿದ ಇವರು ಶಾಲೆಗಳಲ್ಲಿ ಓದುವುದನ್ನು ಪ್ರೋತ್ಸಾಹಿಸಲು ಅನುಕೂಲವಾಗುವಂತಹ ಚಟುವಟಿಕೆಯನ್ನು ಮಾಡಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಸ್ಕೂಲ್ ಪ್ರಾಂಶುಪಾಲರಾದ ಶ್ರೀಮತಿ ಕಮಲಾ ಸೆಲ್ವರಾಜನ್ , ಮುಖ್ಯಶಿಕ್ಷಕಿ ಶ್ರೀಮತಿ ಅಮಿತಾ ಡಿ ರಾವ್ ಉದಯೋನ್ಮುಖ ಬರಹಗಾರ್ತಿ ಕುಮಾರಿ ಶ್ರೇಯಾ ಮತ್ತು ಉಳಿದ ಶಿಕ್ಷಕರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಯಕ್ಷಗಾನ ತರಬೇತಿ ತರಗತಿಗೆ ಚಾಲನೆ

Suddi Udaya

ಕಳೆಂಜ ಗ್ರಾ.ಪಂ. ನಲ್ಲಿ ನೌಕರರು ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ನಾಲ್ಕೂರು: ರಾಮನಗರದಲ್ಲಿ ಬ್ರಹ್ಮಕುಮಾರಿ ಸಂಸ್ಥೆಯಿಂದ ರಕ್ಷಾಬಂಧನ ಕಾರ್ಯಕ್ರಮ

Suddi Udaya

ಸೋಣಂದೂರು ಸ. ಹಿ. ಪ್ರಾ. ಶಾಲೆ ಹಾಗೂ ಹಳೇ ವಿದ್ಯಾರ್ಥಿ ಸಂಘದ ಸಹಭಾಗಿತ್ವದಲ್ಲಿ ಏಳನೆಯ ತರಗತಿಯ ವಿದ್ಯಾರ್ಥಿಗಳ ಬಿಳ್ಕೋಡುಗೆ

Suddi Udaya

ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಭಜನಾ ತರಬೇತಿ ಕಾರ್ಯಾಗಾರ

Suddi Udaya

ಕಡಿರುದ್ಯಾವರ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿ ಹೊಲಿಗೆ ತರಬೇತಿ ಉದ್ಘಾಟನೆ

Suddi Udaya
error: Content is protected !!